AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯನ್ನು ಔಟ್ ಮಾಡುವುದಷ್ಟೇ ನಮ್ಮ ಉದ್ದೇಶ, ಮೂದಲಿಕೆ ಸರ್ವಥಾ ಮಾಡುವುದಿಲ್ಲ: ಲ್ಯಾಂಗರ್

ಆಸ್ಟ್ರೇಲಿಯ ಟೀಮಿನ ಕೋಚ್ ಜಸ್ಟಿನ್ ಲ್ಯಾಂಗರ್ ಪ್ರಸಕ್ತ ಟೆಸ್ಟ್ ಸರಣಿಯಲ್ಲಿ, ಅಸ್ಟ್ರೇಲಿಯಾದ ಬೌಲರ್​ಗಳು ವಿರಾಟ್​ ಕೊಹ್ಲಿಯನ್ನು ಸ್ಲೆಡ್ಜಿಂಗ್ ಮೂಲಕ ಏಕಾಗ್ರತೆ ವಿಚಲಿತಗೊಳಿಸುವ ಬದಲು ಅವರನ್ನು ರನ್ ಗಳಿಸದಂತೆ ಕಟ್ಟಿಹಾಕುವ ಬಗ್ಗೆ ಯೋಚಿಸಲಿದ್ದಾರೆಂದು ಹೇಳಿದ್ದಾರೆ.

ಕೊಹ್ಲಿಯನ್ನು ಔಟ್ ಮಾಡುವುದಷ್ಟೇ ನಮ್ಮ ಉದ್ದೇಶ, ಮೂದಲಿಕೆ ಸರ್ವಥಾ ಮಾಡುವುದಿಲ್ಲ: ಲ್ಯಾಂಗರ್
ಶತಕ ಬಾರಿಸಿ ವಿಜೃಂಭಿಸುತ್ತಿರುವ ವಿರಾಟ್​ ಕೊಹ್ಲಿ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Dec 15, 2020 | 7:34 PM

Share

ಎದುರಾಳಿ ತಂಡದ ಪ್ರಮುಖ ಆಟಗಾರರನ್ನು ಆಟಗಾರರನ್ನು ಮೂದಲಿಸಿ (ಸ್ಲೆಡ್ಜಿಂಗ್) ಅವರ ಏಕಾಗ್ರತೆಗೆ ಭಂಗವನ್ನುಂಟು ಮಾಡುವುದು ಆಸ್ಟ್ರೇಲಿಯ ಕ್ರಿಕೆಟ್​ನ ಅವಿಭಾಜ್ಯ ಅಂಗ. ಭಾರತೀಯರ ಪೈಕಿ ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮೊದಲಾದವರನ್ನು ಅಸ್ಟ್ರೇಲಿಯನ್​ ಆಟಗಾರರು ಟಾರ್ಗೆಟ್ ಮಾಡಿದ್ದಾರೆ. ಆದರೆ, ಫಾರ್ ಅ ಚೇಂಜ್, ಅವರು ಈ ಬಾರಿ ತಮ್ಮ ವರಸೆಯನ್ನು ಬಿಟ್ಟುಬಿಡಬೇಕೆಂದುಕೊಂಡಿದ್ದಾರಂತೆ!

ಮಂಗಳವಾರದಂದು, ಅಡಿಲೇಡ್​ನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅಸ್ಟ್ರೇಲಿಯ ಟೀಮಿನ ಕೋಚ್ ಜಸ್ಟಿನ್ ಲ್ಯಾಂಗರ್, ವಿರಾಟ್​ ಕೊಹ್ಲಿಯನ್ನು ಮೂದಲಿಸುವ ಗೋಜಿಗೆ ಹೋಗುವುದಿಲ್ಲ, ಅದಕ್ಕೆ ಬದಲಾಗಿ ಅವರು ಔಟ್​ ಮಾಡುವ ಬಗ್ಗೆ ಯೋಚಿಸಲಿದ್ದೇವೆ ಎಂದಿದ್ದಾರೆ.

‘ವಿರಾಟ್, ಒಬ್ಬ ಶ್ರೇಷ್ಠ ಆಟಗಾರ, ಅವರನ್ನು ಮೂದಲಿಸಿ ಅವರ ಏಕಾಗ್ರತೆ ಭಂಗ ತರುವ ಉದ್ದೇಶ ನಮಗಿಲ್ಲ. ಆಟ ನಡೆಯುವಾಗ ಎದುರಾಳಿ ಆಟಗಾರನನ್ನು ಮೂದಲಿಸುವುದು ಹೇವರಿಕೆ ಹುಟ್ಟಿಸುವ ಸಂಗತಿ. ನಮ್ಮ ಆಟಗಾರರು ಭಾವನೆಗಳ ಮೇಲೆ ಆತುಕೊಳ್ಳದೆ, ಕೊಹ್ಲಿಯನ್ನು ಔಟ್​ ಮಾಡುವ ವಿಧಾನದ ಬಗ್ಗೆ ಯೋಚಿಸಲಿದ್ದಾರೆ. ಆಡುವಾಗ ಭಾವನೆಗಳ ಮೇಲೆ ನಿಯಂತ್ರಣವಿಟ್ಟುಕೊಳ್ಳಬೇಕೆಂದು ನಮ್ಮ ಆಟಗಾರರರಿಗೆ ಹೇಳಿದ್ದೇನೆ. ಕೊಹ್ಲಿ ಶ್ರೇಷ್ಠ ಬ್ಯಾಟ್ಸ್​ಮನ್ ಆಗಿರುವಂತೆಯೇ ಶ್ರೇಷ್ಠ ನಾಯಕನೂ ಆಗಿದ್ದಾರೆ. ಅವರ ಆಟದ ಬಗ್ಗೆ ನನಗೆ ಅಪಾರ ಗೌರವವಿದೆ. ಅವರನ್ನು ಔಟ್​ ಮಾಡುವ ವಿಧಾನಗಳ ಹೊರತು ನಾವು ಬೇರೆ ಏನನ್ನೂ ಮಾಡುವುದಿಲ್ಲ. ಆ ಯೋಜನೆಗಳನ್ನು ನಾವು ಈಗಾಗಲೇ ಮಾಡಿಕೊಂಡಿದ್ದೇವೆ’ ಎಂದು ಲ್ಯಾಂಗರ್ ಹೇಳಿದರು.

ಆಸ್ಟ್ರೇಲಿಯ ಕೋಚ್ ಜಸ್ನ್ಟಿನ್ ಲ್ಯಾಂಗರ್

‘ಕೊಹ್ಲಿಯಂಥ ಆಟಗಾರನಿಗೆ ಬೌಲ್ ಮಾಡುವಾಗ ಕೇವಲ ಯೋಜನೆಗಳನ್ನು ಮಾಡಿಕೊಂಡರೆ ಸಾಕಾಗದು. ಅವುಗಳನ್ನು ನಾವು ಯಶಸ್ವೀಯಾಗಿ ಕಾರ್ಯರೂಪಕ್ಕೆ ತರಬೇಕಾಗುತ್ತದೆ. ಅವರ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ ಮತ್ತು ಅವರು ಸಹ ನಮ್ಮನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರು ರನ್ ಗಳಿಸದಂತೆ ಕಟ್ಟಿಹಾಕುವುದು ನಮ್ಮ ಉದ್ದೇಶವಾಗಿರಲಿದೆ. ನಮ್ಮ ವೇಗದ ಬೌಲರ್​ಗಳು ಮತ್ತು ಕೊಹ್ಲಿ ನಡುವೆ ಭರ್ಜರಿ ಹಣಾಹಣಿ ನಡೆಯಲಿದೆ. ಹಾಗೆಯೇ, ಭಾರತದ ವೇಗದ ಬೌಲರ್​ಗಳು ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್​ಮನ್​ಗಳ ನಡುವೆಯೂ ರೋಚಕ ಸೆಣಸಾಟ ನಡೆಯಲಿದೆ’ ಎಂದು ಲ್ಯಾಂಗರ್ ಹೇಳಿದರು.

ಅಡಿಲೇಡ್​ನಲ್ಲಿ ನಡೆಯುವ ಮೊದಲ ಟೆಸ್ಟ್ ಮುಕ್ತಾಯಗೊಂಡ ನಂತರ ಕೊಹ್ಲಿ ಸ್ವದೇಶಕ್ಕೆ ಮರಳಲಿದ್ದು ಅವರ ಸ್ಥಾನದಲ್ಲಿ ಅಜಿಂಕ್ಯಾ ರಹಾನೆ ಟೀಮಿನ ನಾಯಕತ್ವ ವಹಿಸಲಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ