AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಸ್ವದೇಶಕ್ಕೆ ಮರಳಲು ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತೇವೆ; ಐಪಿಎಲ್​ನಲ್ಲಿ ಭಾಗಿಯಾಗಿರುವ ವಿದೇಶಿ ಕ್ರಿಕೆಟಿಗರಿಗೆ ಬಿಸಿಸಿಐ ವಿಶ್ವಾಸ

ನಿಮ್ಮಲ್ಲಿ ಬಹುತೇಕ ಕ್ರಿಕೆಟಿಗರು ಟೂರ್ನಿಯ ಮುಕ್ತಾಯದ ಬಳಿಕ ಮನೆಗೆ ಮರಳುವುದು ಹೇಗೆ ಎಂದು ಚಿಂತೆಗೀಡಾಗಿದ್ದೀರಿ ಎಂದು ತಿಳಿದಿದೆ. ಆದರೆ, ಆ ಬಗ್ಗೆ ನೀವು ಗಾಬರಿ ಪಡಬೇಕಾದ್ದಿಲ್ಲ. ಸದ್ಯದ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಕೂಡ ಗಮನವಿರಿಸಿದೆ ಎಂದು ಬಿಸಿಸಿಐ ಹೇಳಿದೆ.

IPL 2021: ಸ್ವದೇಶಕ್ಕೆ ಮರಳಲು ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತೇವೆ; ಐಪಿಎಲ್​ನಲ್ಲಿ ಭಾಗಿಯಾಗಿರುವ ವಿದೇಶಿ ಕ್ರಿಕೆಟಿಗರಿಗೆ ಬಿಸಿಸಿಐ ವಿಶ್ವಾಸ
ಐಪಿಎಲ್ 2021
TV9 Web
| Updated By: ganapathi bhat|

Updated on:Sep 05, 2021 | 10:45 PM

Share

ಐಪಿಎಲ್ 2021 ಟೂರ್ನಿ ಮುಕ್ತಾಯವಾದ ಬಳಿಕ ತಮ್ಮ ತಮ್ಮ ದೇಶಕ್ಕೆ ಮರಳಲು ಆಟಗಾರರಿಗೆ ಏನೇನು ಸೌಲಭ್ಯ ನೀಡಬೇಕೋ ಅದೆಲ್ಲವನ್ನೂ ನಾವು ಒದಗಿಸುತ್ತೇವೆ. ಐಪಿಎಲ್‌ನಲ್ಲಿ ಭಾಗಿಯಾಗಿರುವ ಕ್ರಿಕೆಟರ್ಸ್ ಸ್ವದೇಶಕ್ಕೆ ಮರಳಲು ಬೇಕಾದ ವ್ಯವಸ್ಥೆ ಎಲ್ಲವನ್ನೂ ನಾವು ಮಾಡಿಕೊಡುತ್ತೇವೆ ಎಂದು ಬಿಸಿಸಿಐ ಇಂದು ತಿಳಿಸಿದೆ. ಭಾರತದಲ್ಲಿ ಒಂದೆಡೆ ಕೊವಿಡ್19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮತ್ತೊಂದೆಡೆ ಐಪಿಎಲ್ 2021 ಟೂರ್ನಮೆಂಟ್ ಕೂಡ ಸಾಗುತ್ತಿದೆ. ಈ ನಡುವೆ ಐಪಿಎಲ್‌ನಲ್ಲಿ ಭಾಗಿಯಾಗಿದ್ದ ಮೂವರು ವಿದೇಶಿ ಕ್ರಿಕೆಟಿಗರು ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಸಾಗಿದ್ದಾರೆ. ಆಸ್ಟ್ರೇಲಿಯಾದ ಮೂರು ಜನ ಕ್ರಿಕೆಟರ್ಸ್ ತಮ್ಮ ದೇಶಕ್ಕೆ ಮರಳಿದ್ದಾರೆ. ಈ ಘಟನಾವಳಿಗಳ ಬೆನ್ನಲ್ಲೇ ಬಿಸಿಸಿಐ ಹೀಗೆ ಹೇಳಿದೆ.

ನಿಮ್ಮಲ್ಲಿ ಬಹುತೇಕ ಕ್ರಿಕೆಟಿಗರು ಟೂರ್ನಿಯ ಮುಕ್ತಾಯದ ಬಳಿಕ ಮನೆಗೆ ಮರಳುವುದು ಹೇಗೆ ಎಂದು ಚಿಂತೆಗೀಡಾಗಿದ್ದೀರಿ ಎಂದು ತಿಳಿದಿದೆ. ಆದರೆ, ಆ ಬಗ್ಗೆ ನೀವು ಗಾಬರಿ ಪಡಬೇಕಾದ್ದಿಲ್ಲ. ಸದ್ಯದ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಕೂಡ ಗಮನವಿರಿಸಿದೆ. ಎಲ್ಲಾ ಆಟಗಾರರು ಟೂರ್ನಿ ಮುಗಿದ ಬಳಿಕ ಸ್ವದೇಶಕ್ಕೆ ಮರಳಲು ವ್ಯವಸ್ಥೆ ಮಾಡಿಕೊಡುತ್ತೇವೆ. ಅದಕ್ಕಾಗಿ ಸಂಸ್ಥೆ ಸರ್ಕಾರದೊಂದಿಗೆ ವಿಚಾರ ಮಾಡಿದೆ ಎಂದು ಬಿಸಿಸಿಐ ಆಟಗಾರರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ಹೇಳಿದೆ.

ಯಾರೆಲ್ಲಾ ಐಪಿಎಲ್​ನಿಂದ ಅರ್ಧಕ್ಕೆ ಮರಳಿದ್ದಾರೆ? ಸದ್ಯದ ಮಟ್ಟಿಗೆ ಐದು ಆಟಗಾರರು ಐಪಿಎಲ್‌ನಿಂದ ವಾಪಸ್ ಆಗಿದ್ದಾರೆ. ಡೆಲ್ಲಿ ತಂಡದ ಆರ್. ಅಶ್ವಿನ್, ರಾಜಸ್ಥಾನ್ ರಾಯಲ್ಸ್ ತಂಡದ ಸೀಮರ್ ಆಂಡ್ರ್ಯೂ ಟೈ ಮತ್ತು ತಂಡದ ಸಹ ಆಟಗಾರ ಲಿಯಾಮ್ ಲಿವಿಂಗ್ಸ್ಟನ್ ಮನೆಗೆ ಮರಳಿದ್ದಾರೆ. ಸೋಮವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ವಿಟರ್ ಹ್ಯಾಂಡಲ್ ಮೂಲಕ ಲೆಗ್ ಸ್ಪಿನ್ನರ್ ಆಡಮ್ ಜಂಪಾ ಮತ್ತು ಆಲ್‌ರೌಂಡರ್ ಕೇನ್ ರಿಚರ್ಡ್‌ಸನ್ ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಚೆನ್ನೈ ಮತ್ತು ಮುಂಬೈನ ಕ್ರಿಕೆಟ್ ಗ್ರೌಂಡ್ ಪಂದ್ಯಗಳ ಬಳಿಕ ಮುಂದಿನ ಪಂದ್ಯಗಳಿಗಾಗಿ ತಂಡಗಳು ದೆಹಲಿ, ಅಹಮದಾಬಾದ್, ಬೆಂಗಳೂರು, ಕೋಲ್ಕತ್ತಾಗೆ ಹೊರಡಲಿವೆ. ಬುಧವಾರದ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಕೊರೊನಾ ಸಂಕಷ್ಟದ ಪರಿಸ್ಥಿತಿಯ ನಡುವೆ ಐಪಿಎಲ್ ಹೀಗೆ ನಡೆಯುತ್ತಿದೆ, ಆಟಗಾರರು ಬಯೋ ಬಬಲ್‌ನಲ್ಲೂ ಒಂದಷ್ಟು ಒತ್ತಡಗಳನ್ನು ಅನುಭವಿಸುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಭಾರತ ತಂಡದ ಹೆಸರಾಂತ ಬೌಲರ್, ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಐಪಿಎಲ್ 2021 ಟೂರ್ನಿಯನ್ನು ಅರ್ಧಕ್ಕೆ‌ ಮೊಟಕುಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ. ತಮ್ಮ ಕುಟುಂಬಕ್ಕೆ ಕೊವಿಡ್-19 ವಿರುದ್ಧ ಹೋರಾಡಲು ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ ಅವರು ಐಪಿಎಲ್‌ ಟೂರ್ನಿಯಿಂದ ಅರ್ಧಕ್ಕೆ ಹಿಂತಿರುಗುವ ನಿರ್ಧಾರ ಮಾಡಿದ್ದಾರೆ. ಜೊತೆಗೆ, ಮೂವರು ಆಸ್ಟ್ರೇಲಿಯಾ ಕ್ರಿಕೆಟಿಗರು ಕೂಡ ಐಪಿಎಲ್ ಟೂರ್ನಿಯಿಂದ ಖಾಸಗಿ ಕಾರಣಗಳನ್ನು ನೀಡಿ ಹೊರನಡೆದಿದ್ದಾರೆ. ಓರ್ವ ಇಂಗ್ಲೆಂಡ್ ಕ್ರಿಕೆಟಿಗ ಬಬಲ್ ಫ್ಯಾಟಿಗ್ ಕಾರಣ ನೀಡಿ ಆಟದಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ: IPL 2021:ಕೊರೊನಾ ನೆಪವೊಡ್ಡಿ ಐಪಿಎಲ್​ ತೊರೆಯುತ್ತಿರುವ ಸ್ಟಾರ್​ ಕ್ರಿಕೆಟಿಗರು ಇವರೆ

Explainer: ಬಯೋ ಬಬಲ್‌ನಲ್ಲಿ ಇದ್ದರೂ ಐಪಿಎಲ್ ಕ್ರಿಕೆಟಿಗರನ್ನು ಕಾಡುತ್ತಿದೆ ಕೊವಿಡ್19 ಆತಂಕ! ಕಾರಣವೇನು?

(well ensure you reach home seamlessly says BCCI to foreign Cricketers at IPL 2021)

Published On - 4:22 pm, Tue, 27 April 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ