AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಲ್ಯುಎಫ್‌ಐ ಚುನಾವಣೆ ವಿವಾದ: ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ವಿನೇಶ್ ಫೋಗಟ್ ನಿರ್ಧಾರ

ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ 'ಪ್ರಭಾವಿ'ಗಳಿಗೆ ಧನ್ಯವಾದಗಳು, ”ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬಹಿರಂಗ ಪತ್ರವನ್ನು ಕುಸ್ತಿಪಟು ವಿನೇಶ್ ಫೋಗಟ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಬ್ಲ್ಯುಎಫ್‌ಐ ಚುನಾವಣೆ ವಿವಾದ: ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ವಿನೇಶ್ ಫೋಗಟ್ ನಿರ್ಧಾರ
ವಿನೇಶ್ ಫೋಗಟ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 26, 2023 | 9:00 PM

ದೆಹಲಿ ಡಿಸೆಂಬರ್ 26: ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷರಾಗಿ ಸಂಜಯ್ ಸಿಂಗ್ (Sanjay Singh) ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ (Wrestler Vinesh Phogat) ಅವರು ಮಂಗಳವಾರ ಘೋಷಿಸಿದ್ದಾರೆ. ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ ‘ಪ್ರಭಾವಿ’ಗಳಿಗೆ ಧನ್ಯವಾದಗಳು, ”ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬಹಿರಂಗ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ‘ನಿಷ್ಠಾವಂತ’ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ಪ್ರತಿಭಟಿಸಿ ಬಜರಂಗ್ ಪುನಿಯಾ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀಯನ್ನು ಹಿಂದಿರುಗಿಸಿದ್ದಾರೆ. ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದ ಕೆಲವು ದಿನಗಳ ನಂತರ ಫೋಗಟ್ ಅವರ ಘೋಷಣೆ ಬಂದಿದೆ.

ಡಿಸೆಂಬರ್ 21 ರಂದು ನಡೆದ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ನಿಕಟವರ್ತಿಗಳು ಅಧ್ಯಕ್ಷರ ಹುದ್ದೆ ಸೇರಿದಂತೆ 15 ರಲ್ಲಿ 13 ಸ್ಥಾನಗಳನ್ನು ಗೆದ್ದಿದ್ದಾರೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆದಾಗ್ಯೂ, ಭಾನುವಾರ, ಕೇಂದ್ರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಆಡಳಿತ ಮಂಡಳಿಯನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿದೆ.

ಇದನ್ನೂ ಓದಿ:WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ಈ ವರ್ಷದ ಆರಂಭದಲ್ಲಿ ಮಲಿಕ್, ಫೋಗಟ್ ಮತ್ತು ಪುನಿಯಾ ನೇತೃತ್ವದ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಎರಡು ಸುತ್ತಿನ ಪ್ರತಿಭಟನೆಯನ್ನು ನಡೆಸಿದರು. ಫೆಡರೇಶನ್ ಮುಖ್ಯಸ್ಥರಾಗಿ ಅಪ್ರಾಪ್ತ ವಯಸ್ಕರು ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಇವರು ಆರೋಪಿಸಿದ್ದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರಿಗೆ ‘ನ್ಯಾಯವನ್ನು ನೀಡುವುದಾಗಿ ಭರವಸೆ ನೀಡಿದ ನಂತರ ಆಂದೋಲನವನ್ನು ಹಿಂತೆಗೆದುಕೊಳ್ಳಲಾಯಿತು.

ಏತನ್ಮಧ್ಯೆ, ಬಿಜೆಪಿ ಸಂಸದರು ಲೈಂಗಿಕ ಕಿರುಕುಳದ ಆರೋಪಗಳನ್ನು ಪದೇ ಪದೇ ನಿರಾಕರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ