AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಲ್ಯುಎಫ್‌ಐ ಚುನಾವಣೆ ವಿವಾದ: ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ವಿನೇಶ್ ಫೋಗಟ್ ನಿರ್ಧಾರ

ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ 'ಪ್ರಭಾವಿ'ಗಳಿಗೆ ಧನ್ಯವಾದಗಳು, ”ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬಹಿರಂಗ ಪತ್ರವನ್ನು ಕುಸ್ತಿಪಟು ವಿನೇಶ್ ಫೋಗಟ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಬ್ಲ್ಯುಎಫ್‌ಐ ಚುನಾವಣೆ ವಿವಾದ: ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ವಿನೇಶ್ ಫೋಗಟ್ ನಿರ್ಧಾರ
ವಿನೇಶ್ ಫೋಗಟ್
ರಶ್ಮಿ ಕಲ್ಲಕಟ್ಟ
|

Updated on: Dec 26, 2023 | 9:00 PM

Share

ದೆಹಲಿ ಡಿಸೆಂಬರ್ 26: ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷರಾಗಿ ಸಂಜಯ್ ಸಿಂಗ್ (Sanjay Singh) ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ (Wrestler Vinesh Phogat) ಅವರು ಮಂಗಳವಾರ ಘೋಷಿಸಿದ್ದಾರೆ. ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ ‘ಪ್ರಭಾವಿ’ಗಳಿಗೆ ಧನ್ಯವಾದಗಳು, ”ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬಹಿರಂಗ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ‘ನಿಷ್ಠಾವಂತ’ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ಪ್ರತಿಭಟಿಸಿ ಬಜರಂಗ್ ಪುನಿಯಾ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀಯನ್ನು ಹಿಂದಿರುಗಿಸಿದ್ದಾರೆ. ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದ ಕೆಲವು ದಿನಗಳ ನಂತರ ಫೋಗಟ್ ಅವರ ಘೋಷಣೆ ಬಂದಿದೆ.

ಡಿಸೆಂಬರ್ 21 ರಂದು ನಡೆದ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ನಿಕಟವರ್ತಿಗಳು ಅಧ್ಯಕ್ಷರ ಹುದ್ದೆ ಸೇರಿದಂತೆ 15 ರಲ್ಲಿ 13 ಸ್ಥಾನಗಳನ್ನು ಗೆದ್ದಿದ್ದಾರೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಆದಾಗ್ಯೂ, ಭಾನುವಾರ, ಕೇಂದ್ರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಆಡಳಿತ ಮಂಡಳಿಯನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿದೆ.

ಇದನ್ನೂ ಓದಿ:WFIನ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ: ನಾನು ಕುಸ್ತಿಯನ್ನು ತ್ಯಜಿಸುತ್ತೇನೆ ಎಂದ ಸಾಕ್ಷಿ ಮಲಿಕ್

ಈ ವರ್ಷದ ಆರಂಭದಲ್ಲಿ ಮಲಿಕ್, ಫೋಗಟ್ ಮತ್ತು ಪುನಿಯಾ ನೇತೃತ್ವದ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಎರಡು ಸುತ್ತಿನ ಪ್ರತಿಭಟನೆಯನ್ನು ನಡೆಸಿದರು. ಫೆಡರೇಶನ್ ಮುಖ್ಯಸ್ಥರಾಗಿ ಅಪ್ರಾಪ್ತ ವಯಸ್ಕರು ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಇವರು ಆರೋಪಿಸಿದ್ದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರಿಗೆ ‘ನ್ಯಾಯವನ್ನು ನೀಡುವುದಾಗಿ ಭರವಸೆ ನೀಡಿದ ನಂತರ ಆಂದೋಲನವನ್ನು ಹಿಂತೆಗೆದುಕೊಳ್ಳಲಾಯಿತು.

ಏತನ್ಮಧ್ಯೆ, ಬಿಜೆಪಿ ಸಂಸದರು ಲೈಂಗಿಕ ಕಿರುಕುಳದ ಆರೋಪಗಳನ್ನು ಪದೇ ಪದೇ ನಿರಾಕರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ