AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಬ್ಯಾಟಿಂಗ್, ಕೊನೆಯ ಬಾಲ್​ಗೆ 6 ರನ್​ ಬೇಕು; ಮಹಿಗೆ ನೀವು ಯಾವ ಬಾಲ್ ಹಾಕ್ತೀರ? ಆಸೀಸ್ ಆಟಗಾರನ ಉತ್ತರ ಹೀಗಿತ್ತು

ನಾನು ಅಂತಹ ನೂರಾರು ವೀಡಿಯೊಗಳನ್ನು ನೋಡಿದ್ದೇನೆ, ಅದರಲ್ಲಿ ಬೌಲರ್ ಯಾರ್ಕರ್ ಅನ್ನು ಎಸೆಯಲು ವಿಫಲವಾದರೆ, ಧೋನಿ ಆ ಚೆಂಡನ್ನು ಸರಿಯಾಗಿಯೇ ದಂಡಿಸುತ್ತಾರೆ.

ಧೋನಿ ಬ್ಯಾಟಿಂಗ್, ಕೊನೆಯ ಬಾಲ್​ಗೆ 6 ರನ್​ ಬೇಕು; ಮಹಿಗೆ ನೀವು ಯಾವ ಬಾಲ್ ಹಾಕ್ತೀರ? ಆಸೀಸ್ ಆಟಗಾರನ ಉತ್ತರ ಹೀಗಿತ್ತು
ಇಮ್ರಾನ್ ತಾಹಿರ್​ ಮಗನೊಂದಿಗೆ ಧೋನಿ
ಪೃಥ್ವಿಶಂಕರ
|

Updated on: May 28, 2021 | 3:46 PM

Share

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. ಆದರೆ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಫಿನಿಶರ್ಗಳ ವಿಷಯಕ್ಕೆ ಬಂದಾಗ, ಧೋನಿಯ ಸ್ಥಾನ ಖಂಡಿತವಾಗಿಯೂ ಅಗ್ರ ಆಟಗಾರರಲ್ಲಿರುತ್ತದೆ. ಆದರೆ ಅನೇಕ ಪಂದ್ಯಗಳಲ್ಲಿ, ಧೋನಿ ಇದರೂ ಕೂಡ ಪಂದ್ಯವನ್ನು ಕಳೆದುಕೊಳ್ಳುವುದನ್ನು ನಾವು ನೋಡಿದ್ದೇವೆ. ಹಾಗಂತ ಧೋನಿಗೆ ಬೌಲಿಂಗ್ ಮಾಡುವುದು ಸುಲಭವಲ್ಲ, ವಿಶೇಷವಾಗಿ ಕೊನೆಯ ಓವರ್‌ಗಳಲ್ಲಿ ಅವರ ಬ್ಯಾಟ್ ರನ್ ಮಳೆಯನ್ನೆ ಹರಿಸುತ್ತದೆ. ಇಂತಹ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಆಸಿಸ್ ಆಟಗಾರ ಪ್ಯಾಟ್ ಕಮಿನ್ಸ್ ನೀಡಿದ ಉತ್ತರ ಧೋನಿಯ ಪ್ರಭಾವವನ್ನು ತೋರಿಸುತ್ತಿದೆ.

ವಾಸ್ತವವಾಗಿ, ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಮತ್ತು ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ ಅವರ ಅಭಿಮಾನಿ, ಧೋನಿಯ ಬಗ್ಗೆ ಒಂದು ಪ್ರಶ್ನೆ ಕೇಳಿದ್ದಾರೆ. ಒಂದು ಚೆಂಡಿಗೆ ಆರು ರನ್ ಅಗತ್ಯವಿದ್ದರೆ ಮತ್ತು ಧೋನಿ ಬ್ಯಾಟಿಂಗ್ ಮಾಡುತ್ತಿದ್ದರೆ, ನೀವು (ಪ್ಯಾಟ್ ಕಮ್ಮಿನ್ಸ್) ಧೋನಿಗೆ ಯಾವ ರೀತಿಯ ಚೆಂಡನ್ನು ಎಸೆಯುತ್ತಾರೆ ಎಂಬುದು ಪ್ರಶ್ನೆ. ಈ ಪ್ರಶ್ನೆಗೆ ಉತ್ತರವಾಗಿ, ಹೆಚ್ಚಿನ ಬೌಲರ್‌ಗಳು ಅಂತಹ ಪರಿಸ್ಥಿತಿಯಲ್ಲಿ ಯಾರ್ಕರ್‌ಗಳನ್ನು ಎಸೆಯುವುದಿಲ್ಲ ಎಂದು ಉತ್ತರಿಸುತ್ತಾರೆ. ಆದರೆ ಪ್ಯಾಟ್ ಕಮಿನ್ಸ್ ಹೇಳಿದ ಉತ್ತರ ತುಂಬಾ ಆಸಕ್ತಧಾಯಕವಾಗಿದೆ.

ಈ ಸಂದರ್ಭಗಳಲ್ಲಿ ನಾನು ಇರಲು ಇಷ್ಟಪಡುವುದಿಲ್ಲ ಈ ಪ್ರಶ್ನೆಗೆ ಉತ್ತರಿಸಿದ ಪ್ಯಾಟ್ ಕಮ್ಮಿನ್ಸ್, ನಾನು ಅಂತಹ ನೂರಾರು ವೀಡಿಯೊಗಳನ್ನು ನೋಡಿದ್ದೇನೆ, ಅದರಲ್ಲಿ ಬೌಲರ್ ಯಾರ್ಕರ್ ಅನ್ನು ಎಸೆಯಲು ವಿಫಲವಾದರೆ, ಧೋನಿ ಆ ಚೆಂಡನ್ನು ಸರಿಯಾಗಿಯೇ ದಂಡಿಸುತ್ತಾರೆ. ಹಾಗಾಗಿ ಈ ಪರಿಸ್ಥಿತಿಯಲ್ಲಿ ನಾನು ಧೋನಿಗೆ ಬೌಲ್ ಮಾಡಿದರೆ, ಯಾರ್ಕರ್ ಅಂತು ಹಾಕುವುದಿಲ್ಲ. ಬದಲಿಗೆ, ಬೌನ್ಸರ್ ಅಥವಾ ದೇಹದಿಂದ ದೂರವಿರುವ ಯಾರ್ಕರ್ ಎಸೆಯುತ್ತೇನೆ. ಆದರೆ ಈ ಸಂದರ್ಭಗಳಲ್ಲಿ ಅವರನ್ನು ಎದುರಿಸದಿರಲು ನಾನು ಬಯಸುತ್ತೇನೆ ಎಂದಿದ್ದಾರೆ.

ಕುತೂಹಲಕಾರಿ ವಿಷಯವೆಂದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಮ್ಮಿನ್ಸ್, ಧೋನಿ ಅವರನ್ನು ಎರಡು ಬಾರಿ ಔಟ್ ಮಾಡಿದ್ದಾರೆ. ಎರಡೂ ಬಾರಿ ಅವರು ಟಿ 20 ಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ನನ್ನು ಬೇಟೆಯಾಡಿದರು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ, ಧೋನಿ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.ಈ ವರ್ಷದ ಐಪಿಎಲ್ ಆವೃತ್ತಿಯಲ್ಲಿ, ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಪ್ರದರ್ಶನ ನೀಡಿ ಪಾಯಿಂಟ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ