AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

Anushka Sharma | Virat Kohli: ನಿಮ್ಮ ಮಗಳ ಹೆಸರಿನ ಅರ್ಥವೇನು? ಆಕೆ ಹೇಗಿದ್ದಾಳೆ? ಪ್ಲೀಸ್​... ಅವಳನ್ನು ನಾವು ಸ್ಪಲ್ಪ ನೋಡಬಹುದಾ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಕೊಯ್ಲಿ ಉತ್ತರಿಸಿದ್ದಾರೆ.

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?
ಅನುಷ್ಕಾ ಶರ್ಮಾ,ವಿರಾಟ್ ಕೊಯ್ಲಿ
Follow us
ಮದನ್​ ಕುಮಾರ್​
|

Updated on: May 30, 2021 | 11:31 AM

ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್​ ಕೊಯ್ಲಿ ಸೆಲೆಬ್ರಿಟಿ ವಲಯದಲ್ಲಿ ಕ್ಯೂಟ್​ ಜೋಡಿ ಎನಿಸಿಕೊಂಡಿದ್ದಾರೆ. ಈ ದಂಪತಿಗೆ 2021ರ ಜನವರಿ 11ರಂದು ಹೆಣ್ಣು ಮಗು ಜನಿಸಿತು. ಮುದ್ದಾದ ಮುಗುವಿಗೆ ವಮಿಕಾ ಎಂದು ಹೆಸರು ಇಡಲಾಗಿದೆ. ಆದರೆ ಈವರೆಗೂ ಮಗಳ ಫೋಟೋವನ್ನು ಈ ಜೋಡಿ ತೋರಿಸಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ವಮಿಕಾಳ ಮುಖ ಕಾಣುವಂತಹ ಯಾವುದೇ ಫೋಟೋ ಕೂಡ ಲಭ್ಯವಿಲ್ಲ. ಈ ಬಗ್ಗೆ ಅಭಿಮಾನಿಗಳು ವಿರಾಟ್​ ಮತ್ತು ಅನುಷ್ಕಾ ಶರ್ಮಾಗೆ ಪ್ರಶ್ನೆ ಮಾಡುತ್ತಿದ್ದಾರೆ.

ಲಾಕ್​ಡೌನ್​ ಪರಿಣಾಮ ಮನೆಯಲ್ಲೇ ಇರುವ ವಿರಾಟ್​ ಕೊಯ್ಲಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದರು. ಆಗ ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ‘ನಿಮ್ಮ ಮಗಳ ಹೆಸರಿನ ಅರ್ಥವೇನು? ಆಕೆ ಹೇಗಿದ್ದಾಳೆ? ಪ್ಲೀಸ್​… ಅವಳನ್ನು ನಾವು ಸ್ಪಲ್ಪ ನೋಡಬಹುದಾ’ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ವಿರಾಟ್​ ಕೊಯ್ಲಿ ಉತ್ತರಿಸಿದ್ದಾರೆ.

‘ವಮಿಕಾ ಎಂದರೆ ದುರ್ಗಾ ಮಾತೆಯ ಇನ್ನೊಂದು ಹೆಸರು. ನಮ್ಮ ಮಗಳನ್ನು ನಿಮಗೆ ತೋರಿಸಲು ಸಾಧ್ಯವಿಲ್ಲ. ಸೋಶಿಯಲ್​ ಮೀಡಿಯಾ ಎಂದರೆ ಏನು ಅಂತ ಆಕೆಗೆ ಅರ್ಥ ಆಗುವವರೆಗೂ ನಾವು ಅವಳನ್ನು ಅದರಲ್ಲಿ ಪರಿಚಯಿಸದಿರಲು ತೀರ್ಮಾನಿಸಿದ್ದೇನೆ. ಆ ಬಗ್ಗೆ ಅವಳೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಕೊಯ್ಲಿ ಉತ್ತರ ನೀಡಿದ್ದಾರೆ. ಹಾಗಾಗಿ, ಅಭಿಮಾನಿಗಳು ಅನುಷ್ಕಾ-ವಿರಾಟ್​ ಪುತ್ರಿಯ ಮುಖ ನೋಡುವ ಬಯಕೆಯನ್ನು ಮುಂದೂಡಿಕೊಳ್ಳದೇ ಬೇರೆ ಆಯ್ಕೆ ಇಲ್ಲ.

ಕೆಲವು ಸೆಲೆಬ್ರಿಟಿಗಳು ತಮ್ಮ ಮಕ್ಕಳ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಾರೆ. ಸ್ಟಾರ್​ ಕಿಡ್​ಗಳು ಎಂಬ ಕಾರಣಕ್ಕೆ ಅಂತಹ ಮಕ್ಕಳ ಕಡೆಗೆ ಮಾಧ್ಯಮದ ಕ್ಯಾಮರಾಗಳು ಕೂಡ ಫೋಕಸ್​ ಆಗುತ್ತವೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಕರೀನಾ ಕಪೂರ್​ ಖಾನ್​ ಮತ್ತು ಸೈಫ್​ ಅಲಿ ಖಾನ್​ ಪುತ್ರ ತೈಮೂರ್​ ರಾಷ್ಟ್ರ ಮಟ್ಟದಲ್ಲಿ ಫೇಮಸ್​ ಆಗಿದ್ದಾನೆ. ಕನ್ನಡದಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಫೋಟೋ ಮತ್ತು ವಿಡಿಯೋಗಳು ಕೂಡ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತವೆ. ಚಿರಂಜೀವಿ ಸರ್ಜಾ-ಮೇಘನಾ ರಾಜ್​ ಪುತ್ರ ಜ್ಯೂ. ಚಿರು ಸಹ ಮಿಂಚುತ್ತಿದ್ದಾನೆ.

ಭಾರತ ಕೊವಿಡ್​ ಸಂಕಷ್ಟದಲ್ಲಿ ಸಿಲುಕಿರುವಾಗ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ತಾವು ಎರಡು ಕೋಟಿ ರೂ. ದೇಣಿಗೆ ನೀಡಿರುವುದೂ ಅಲ್ಲದೇ, ಜನರಿಂದಲೂ ದೇಣಿಗೆ ಸಂಗ್ರಹಿಸಿದ್ದಾರೆ. ಆ ಹಣವನ್ನು ಕೊವಿಡ್​ ವಿರುದ್ಧ ಹೋರಾಟಕ್ಕೆ ಬಳಸಿದ್ದಾರೆ. ಈ ಕಾರ್ಯಕ್ಕೆ ಜನಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?