AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

Anushka Sharma | Virat Kohli: ನಿಮ್ಮ ಮಗಳ ಹೆಸರಿನ ಅರ್ಥವೇನು? ಆಕೆ ಹೇಗಿದ್ದಾಳೆ? ಪ್ಲೀಸ್​... ಅವಳನ್ನು ನಾವು ಸ್ಪಲ್ಪ ನೋಡಬಹುದಾ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಕೊಯ್ಲಿ ಉತ್ತರಿಸಿದ್ದಾರೆ.

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?
ಅನುಷ್ಕಾ ಶರ್ಮಾ,ವಿರಾಟ್ ಕೊಯ್ಲಿ
ಮದನ್​ ಕುಮಾರ್​
|

Updated on: May 30, 2021 | 11:31 AM

Share

ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್​ ಕೊಯ್ಲಿ ಸೆಲೆಬ್ರಿಟಿ ವಲಯದಲ್ಲಿ ಕ್ಯೂಟ್​ ಜೋಡಿ ಎನಿಸಿಕೊಂಡಿದ್ದಾರೆ. ಈ ದಂಪತಿಗೆ 2021ರ ಜನವರಿ 11ರಂದು ಹೆಣ್ಣು ಮಗು ಜನಿಸಿತು. ಮುದ್ದಾದ ಮುಗುವಿಗೆ ವಮಿಕಾ ಎಂದು ಹೆಸರು ಇಡಲಾಗಿದೆ. ಆದರೆ ಈವರೆಗೂ ಮಗಳ ಫೋಟೋವನ್ನು ಈ ಜೋಡಿ ತೋರಿಸಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ವಮಿಕಾಳ ಮುಖ ಕಾಣುವಂತಹ ಯಾವುದೇ ಫೋಟೋ ಕೂಡ ಲಭ್ಯವಿಲ್ಲ. ಈ ಬಗ್ಗೆ ಅಭಿಮಾನಿಗಳು ವಿರಾಟ್​ ಮತ್ತು ಅನುಷ್ಕಾ ಶರ್ಮಾಗೆ ಪ್ರಶ್ನೆ ಮಾಡುತ್ತಿದ್ದಾರೆ.

ಲಾಕ್​ಡೌನ್​ ಪರಿಣಾಮ ಮನೆಯಲ್ಲೇ ಇರುವ ವಿರಾಟ್​ ಕೊಯ್ಲಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದರು. ಆಗ ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ‘ನಿಮ್ಮ ಮಗಳ ಹೆಸರಿನ ಅರ್ಥವೇನು? ಆಕೆ ಹೇಗಿದ್ದಾಳೆ? ಪ್ಲೀಸ್​… ಅವಳನ್ನು ನಾವು ಸ್ಪಲ್ಪ ನೋಡಬಹುದಾ’ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ವಿರಾಟ್​ ಕೊಯ್ಲಿ ಉತ್ತರಿಸಿದ್ದಾರೆ.

‘ವಮಿಕಾ ಎಂದರೆ ದುರ್ಗಾ ಮಾತೆಯ ಇನ್ನೊಂದು ಹೆಸರು. ನಮ್ಮ ಮಗಳನ್ನು ನಿಮಗೆ ತೋರಿಸಲು ಸಾಧ್ಯವಿಲ್ಲ. ಸೋಶಿಯಲ್​ ಮೀಡಿಯಾ ಎಂದರೆ ಏನು ಅಂತ ಆಕೆಗೆ ಅರ್ಥ ಆಗುವವರೆಗೂ ನಾವು ಅವಳನ್ನು ಅದರಲ್ಲಿ ಪರಿಚಯಿಸದಿರಲು ತೀರ್ಮಾನಿಸಿದ್ದೇನೆ. ಆ ಬಗ್ಗೆ ಅವಳೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಕೊಯ್ಲಿ ಉತ್ತರ ನೀಡಿದ್ದಾರೆ. ಹಾಗಾಗಿ, ಅಭಿಮಾನಿಗಳು ಅನುಷ್ಕಾ-ವಿರಾಟ್​ ಪುತ್ರಿಯ ಮುಖ ನೋಡುವ ಬಯಕೆಯನ್ನು ಮುಂದೂಡಿಕೊಳ್ಳದೇ ಬೇರೆ ಆಯ್ಕೆ ಇಲ್ಲ.

ಕೆಲವು ಸೆಲೆಬ್ರಿಟಿಗಳು ತಮ್ಮ ಮಕ್ಕಳ ಫೋಟೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಾರೆ. ಸ್ಟಾರ್​ ಕಿಡ್​ಗಳು ಎಂಬ ಕಾರಣಕ್ಕೆ ಅಂತಹ ಮಕ್ಕಳ ಕಡೆಗೆ ಮಾಧ್ಯಮದ ಕ್ಯಾಮರಾಗಳು ಕೂಡ ಫೋಕಸ್​ ಆಗುತ್ತವೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಕರೀನಾ ಕಪೂರ್​ ಖಾನ್​ ಮತ್ತು ಸೈಫ್​ ಅಲಿ ಖಾನ್​ ಪುತ್ರ ತೈಮೂರ್​ ರಾಷ್ಟ್ರ ಮಟ್ಟದಲ್ಲಿ ಫೇಮಸ್​ ಆಗಿದ್ದಾನೆ. ಕನ್ನಡದಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಫೋಟೋ ಮತ್ತು ವಿಡಿಯೋಗಳು ಕೂಡ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತವೆ. ಚಿರಂಜೀವಿ ಸರ್ಜಾ-ಮೇಘನಾ ರಾಜ್​ ಪುತ್ರ ಜ್ಯೂ. ಚಿರು ಸಹ ಮಿಂಚುತ್ತಿದ್ದಾನೆ.

ಭಾರತ ಕೊವಿಡ್​ ಸಂಕಷ್ಟದಲ್ಲಿ ಸಿಲುಕಿರುವಾಗ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ತಾವು ಎರಡು ಕೋಟಿ ರೂ. ದೇಣಿಗೆ ನೀಡಿರುವುದೂ ಅಲ್ಲದೇ, ಜನರಿಂದಲೂ ದೇಣಿಗೆ ಸಂಗ್ರಹಿಸಿದ್ದಾರೆ. ಆ ಹಣವನ್ನು ಕೊವಿಡ್​ ವಿರುದ್ಧ ಹೋರಾಟಕ್ಕೆ ಬಳಸಿದ್ದಾರೆ. ಈ ಕಾರ್ಯಕ್ಕೆ ಜನಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ