AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಲ್​ ರಾಹುಲ್ ‘ಅನ್‌ಸೋಲ್ಡ್’ ಆಗಲು ಇದುವೇ ಅಸಲಿ ಕಾರಣ!

Maharaja Trophy 2026: ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಟಿ20 ಟೂರ್ನಿಯು ಜೂನ್ 20 ರಿಂದ ಶುರುವಾಗಲಿದೆ. 6 ತಂಡಗಳ ನಡುವಣ ಈ ಟಿ20 ಕದನದಲ್ಲಿ ಕರ್ನಾಟಕದ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದಾಗ್ಯೂ ಈ ಬಾರಿ ಕೂಡ ಕೆಎಲ್ ರಾಹುಲ್ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಕೆಎಲ್​ ರಾಹುಲ್ ‘ಅನ್‌ಸೋಲ್ಡ್’ ಆಗಲು ಇದುವೇ ಅಸಲಿ ಕಾರಣ!
Kl Rahul Image Credit source: IPL
ಝಾಹಿರ್ ಯೂಸುಫ್
|

Updated on: Jun 06, 2026 | 8:16 AM

Share

ಕರ್ನಾಟಕದ ಟಿ20 ಲೀಗ್ ಮಹಾರಾಜ ಟ್ರೋಫಿ ಟೂರ್ನಿಯ 5ನೇ ಸೀಸನ್​​ಗೆ ಹರಾಜು ಪ್ರಕ್ರಿಯೆ ನಡೆದಿದೆ. ಈ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ (KL Rahul) ಬಿಕರಿಯಾಗದೇ ಉಳಿದಿದ್ದಾರೆ. 2 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜು ಪಟ್ಟಿಯಲ್ಲಿದ್ದ ರಾಹುಲ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿಗಳು ಆಸಕ್ತಿ ತೋರಿರಲಿಲ್ಲ.

ಇದರ ಬೆನ್ನಲ್ಲೇ ಕೆಎಲ್ ರಾಹುಲ್ ‘ಅನ್‌ಸೋಲ್ಡ್’ ಸುದ್ದಿ ಮಹತ್ವ ಪಡೆದುಕೊಂಡಿತು. ಆದರೆ ಅವರ ಬಿಕರಿಯಾಗದೇ ಉಳಿಯಲು ಮುಖ್ಯ ಕಾರಣ ಮುಂಬರುವ ಸರಣಿಗಳು. ಅಂದರೆ ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಕೆಎಲ್​ಆರ್​ ಅಲಭ್ಯರಾಗುವುದು ಖಚಿತ. ಹೀಗಾಗಿಯೇ ಯಾವುದೇ ಫ್ರಾಂಚೈಸಿ ಅವರ ಖರೀದಿಗೆ ಮುಂದಾಗಲಿಲ್ಲ.

ಅಲಭ್ಯರಾಗುವುದು ಯಾಕೆ?

  • ಟೆಸ್ಟ್ ಪಂದ್ಯ: ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಕೆ.ಎಲ್. ರಾಹುಲ್ ಭಾರತ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
  • ಏಕದಿನ ಸರಣಿ: ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಬೆನ್ನಲ್ಲೇ ಮೂರು ಮ್ಯಾಚ್​​ಗಳ ಏಕದಿನ ಸರಣಿ ಶುರುವಾಗಲಿದೆ.
  • ಇಂಗ್ಲೆಂಡ್ ಸರಣಿ: ಅಘ್ಘಾನ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್​ ಸರಣಿಗಾಗಿ ತೆರಳಲಿದೆ. ಈ ಸರಣಿಯು ಜುಲೈ 1 ರಿಂದ ಆರಂಭವಾಗಲಿದೆ.

ಅಂದರೆ ಕೆಎಲ್ ರಾಹುಲ್ ಜೂನ್-ಜುಲೈ ತಿಂಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದು ಖಚಿತ. ಇತ್ತ ಮಹಾರಾಜ ಟ್ರೋಫಿ ಟಿ20 ಟೂರ್ನಿ ನಡೆಯಲಿರುವುದು ಜೂನ್ 20 ರಿಂದ ಜುಲೈ 12 ರವರೆಗೆ. ಈ ಅವಧಿಯಲ್ಲಿ ಕೆಎಲ್ ರಾಹುಲ್ ಲಭ್ಯರಿರುವುದಿಲ್ಲ ಎಂಬುದು ಕನ್ಫರ್ಮ್ ಆಗಿದೆ.

ಹೀಗಾಗಿಯೇ ಟೂರ್ನಿಗೆ ಲಭ್ಯರಿರದ ಆಟಗಾರನಿಗೆ ಹಣ ವ್ಯಯಿಸಿ, ತಂಡದ ಒಂದು ಸ್ಲಾಟ್ ವ್ಯರ್ಥ ಮಾಡಿಕೊಳ್ಳಲು ಫ್ರಾಂಚೈಸಿಗಳು ಮುಂದಾಗಿಲ್ಲ.

ಮತ್ತೆ ಹೆಸರು ನೀಡಿದ್ದು ಯಾಕೆ?

ಕೆಎಲ್ ರಾಹುಲ್ ರಾಷ್ಟ್ರೀಯ ತಂಡಗಳ ಪರ ಕಣಕ್ಕಿಳಿಯುವುದಾದರೆ ಮತ್ತೆ ಯಾಕೆ ಹೆಸರು ನೀಡಿದ್ದರು ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಹಿಂದಿನ ಪ್ರಕ್ರಿಯೆ.

ಅಂದರೆ ಮಹಾರಾಜ ಟೂರ್ನಿಯ ಹರಾಜಿನ ದಿನಾಂಕಕ್ಕಿಂತ ಮುಂಚೆಯೇ ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ.ರಾಹುಲ್ ಅವರು ಕರ್ನಾಟಕದ ಆಟಗಾರನಾಗಿರುವುದರಿಂದ ಆರಂಭದಲ್ಲಿ ತಮ್ಮ ರಾಜ್ಯದ ಟೂರ್ನಿಯಲ್ಲಿ ಆಡುವ ಆಸಕ್ತಿಯಿಂದ ಹೆಸರು ನೀಡಿದ್ದರು.

ಇದಾದ ಬಳಿಕವಷ್ಟೇ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯ ದಿನಾಂಕ ನಿಗದಿಯಾಗಿದೆ. ಹೀಗಾಗಿ ರಾಷ್ಟ್ರೀಯ ತಂಡದ ಪರ ಕಣಕ್ಕಿಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ಹಾಗೆಯೇ ಕೆಎಸ್​​ಸಿಎ ನಿಯಮಗಳ ಪ್ರಕಾರ, ಒಮ್ಮೆ ಒಬ್ಬ ಆಟಗಾರ ಅಧಿಕೃತವಾಗಿ ಹರಾಜಿನ ಡ್ರಾಫ್ಟ್‌ಗೆ ಹೆಸರು ನೋಂದಾಯಿಸಿದರೆ, ಅವರ ಹೆಸರನ್ನು ಹರಾಜಿನ ಪಟ್ಟಿಯಿಂದ ದಿಢೀರ್ ಎಂದು ತೆಗೆಯಲು ಬರುವುದಿಲ್ಲ. ಆ ಹೆಸರನ್ನು ಹರಾಜುದಾರರು ಕರೆದೇ ಕರೆಯಬೇಕು.

ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಹೀಗಾಗಿ ಕೆಎಲ್ ರಾಹುಲ್ ಹೆಸರು ಹರಾಜಿನಲ್ಲಿ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ ಹರಾಜುದಾರರು ಫ್ರಾಂಚೈಸಿಗಳಿಗೆ ಮುಂಚಿತವಾಗಿಯೇ “ಇವರು ಟೂರ್ನಿಗೆ ಅಲಭ್ಯರಾಗಲಿದ್ದಾರೆದ್ದಾರೆ” ಎಂಬ ಅಧಿಕೃತ ಮಾಹಿತಿಯನ್ನು ತಿಳಿಸಿದ್ದರು. ಹೀಗಾಗಿಯೇ ಯಾವುದೇ ಫ್ರಾಂಚೈಸಿ ಅವರ ಮೇಲೆ ಬಿಡ್ ಮಾಡಲಿಲ್ಲ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More