Sign In

By signing in or creating an account, you agree with Associated Broadcasting Company's Terms & Conditions and Privacy Policy.

Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ

ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ

Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ
ಹರ್ಭಜನ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 25, 2021 | 3:43 PM

ಅಮೃತಸರ: ಟೀಂ ಇಂಡಿಯಾದ ಸ್ಪಿನ್ನರ್ ಹರ್ಭಜನ್ ಸಿಂಗ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ? ಎಂಬ ಚರ್ಚೆಗಳು ಎದ್ದಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಹರ್ಭಜನ್ ಸಿಂಗ್ ಅವರೇ ತೆರೆ ಎಳೆದಿದ್ದಾರೆ. 41 ವರ್ಷದ ಕ್ರಿಕೆಟಿಗ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹರ್ಭಜನ್ ಸಿಂಗ್ ಟೀಂ ಇಂಡಿಯಾದ ಆಟಗಾರರಾಗಿ 103 ಟೆಸ್ಟ್, 236 ODI ಮತ್ತು 28 T20 ಮ್ಯಾಚ್​ಗಳನ್ನು ಆಡಿದ್ದಾರೆ.

ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವುದರಿಂದ ಮುಂದೆ ರಾಜಕೀಯಕ್ಕೆ ಪ್ರವೇಶಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಹರ್ಭಜನ್ ಸಿಂಗ್, “ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳ ಪರಿಚಯವೂ ಇದೆ. ನಾನು ಯಾವುದಾದರೂ ಪಕ್ಷಕ್ಕೆ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ” ಎಂದಿದ್ದಾರೆ.

ನಾನು ಮುಂದಿನ ದಿನಗಳಲ್ಲಿ ಪಂಜಾಬ್​ಗೆ ಸೇವೆ ಸಲ್ಲಿಸಬೇಕೆಂದು ಕೊಂಡಿದ್ದೇನೆ. ಅದು ರಾಜಕೀಯದ ಮೂಲಕವಾಗಿರಬಹುದು ಅಥವಾ ಬೇರೆ ಇನ್ನಾವುದಾದರೂ ಮಾರ್ಗದ ಮೂಲಕವಾಗಿರಬಹುದು. ಯಾವ ರೀತಿಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ನಿಜ ಹೇಳಬೇಕೆಂದರೆ, ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಯೋಚಿಸಿಲ್ಲ. ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ. ರಾಜಕೀಯಕ್ಕೆ ಸಂಪೂರ್ಣವಾದ ಶ್ರದ್ಧೆ ಮತ್ತು ಆಸಕ್ತಿ ಇರಬೇಕು. ನಾನು ಅದನ್ನು ಅರೆಮನಸ್ಸಿನಿಂದ ಮಾಡಲು ಬಯಸುವುದಿಲ್ಲ. ನನಗೆ ರಾಜಕೀಯದಲ್ಲಿ ಧುಮುಕಲು ಆಸಕ್ತಿ ಇದೆ ಅಥವಾ ಶಕ್ತಿಯಿದೆ ಎಂದು ನನಗೆ ಅನಿಸಿದ ದಿನ ನಾನೇ ಎಲ್ಲರಿಗೂ ಘೋಷಣೆ ಮಾಡುತ್ತೇನೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ, ಪಂಜಾಬ್ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಹರ್ಭಜನ್ ಸಿಂಗ್ ಅವರೊಂದಿಗೆ ತಮ್ಮ ಫೋಟೋವನ್ನು ಟ್ವೀಟ್ ಮಾಡಿದ ನಂತರ ಹರ್ಭಜನ್ ಸಿಂಗ್ ಕಾಂಗ್ರೆಸ್​ ಸೇರುತ್ತಾರೆಂಬ ಊಹಾಪೋಹಗಳು ಎದ್ದಿದ್ದವು.

ಇದನ್ನೂ ಓದಿ: Harbhajan Singh: ಎಲ್ಲಾ ಮಾದರಿ ಕ್ರಿಕೆಟ್​ಗೆ ವಿದಾಯ ಹೇಳಿದ ಹರ್ಭಜನ್ ಸಿಂಗ್ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

Harbhajan Singh: 23 ವರ್ಷಗಳ ವೃತ್ತಿಜೀವನಕ್ಕೆ ಹರ್ಭಜನ್ ಸಿಂಗ್ ವಿದಾಯ; ಟರ್ಬನೇಟರ್ ಕ್ರಿಕೆಟ್​ ಬದುಕು ಹೇಗಿತ್ತು ಗೊತ್ತಾ?

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್