AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ

ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ

Harbhajan Singh: ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಹರ್ಭಜನ್ ಸಿಂಗ್ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?; ಇಲ್ಲಿದೆ ಉತ್ತರ
ಹರ್ಭಜನ್ ಸಿಂಗ್
TV9 Web
| Edited By: |

Updated on: Dec 25, 2021 | 3:43 PM

Share

ಅಮೃತಸರ: ಟೀಂ ಇಂಡಿಯಾದ ಸ್ಪಿನ್ನರ್ ಹರ್ಭಜನ್ ಸಿಂಗ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ? ಎಂಬ ಚರ್ಚೆಗಳು ಎದ್ದಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಹರ್ಭಜನ್ ಸಿಂಗ್ ಅವರೇ ತೆರೆ ಎಳೆದಿದ್ದಾರೆ. 41 ವರ್ಷದ ಕ್ರಿಕೆಟಿಗ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹರ್ಭಜನ್ ಸಿಂಗ್ ಟೀಂ ಇಂಡಿಯಾದ ಆಟಗಾರರಾಗಿ 103 ಟೆಸ್ಟ್, 236 ODI ಮತ್ತು 28 T20 ಮ್ಯಾಚ್​ಗಳನ್ನು ಆಡಿದ್ದಾರೆ.

ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವುದರಿಂದ ಮುಂದೆ ರಾಜಕೀಯಕ್ಕೆ ಪ್ರವೇಶಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಹರ್ಭಜನ್ ಸಿಂಗ್, “ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳ ಪರಿಚಯವೂ ಇದೆ. ನಾನು ಯಾವುದಾದರೂ ಪಕ್ಷಕ್ಕೆ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ” ಎಂದಿದ್ದಾರೆ.

ನಾನು ಮುಂದಿನ ದಿನಗಳಲ್ಲಿ ಪಂಜಾಬ್​ಗೆ ಸೇವೆ ಸಲ್ಲಿಸಬೇಕೆಂದು ಕೊಂಡಿದ್ದೇನೆ. ಅದು ರಾಜಕೀಯದ ಮೂಲಕವಾಗಿರಬಹುದು ಅಥವಾ ಬೇರೆ ಇನ್ನಾವುದಾದರೂ ಮಾರ್ಗದ ಮೂಲಕವಾಗಿರಬಹುದು. ಯಾವ ರೀತಿಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ನಿಜ ಹೇಳಬೇಕೆಂದರೆ, ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಯೋಚಿಸಿಲ್ಲ. ನನಗೆ ಈಗಾಗಲೇ ವಿವಿಧ ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ, ನಾನು ಬಹಳ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಸಣ್ಣ ನಿರ್ಧಾರವಲ್ಲ. ರಾಜಕೀಯಕ್ಕೆ ಸಂಪೂರ್ಣವಾದ ಶ್ರದ್ಧೆ ಮತ್ತು ಆಸಕ್ತಿ ಇರಬೇಕು. ನಾನು ಅದನ್ನು ಅರೆಮನಸ್ಸಿನಿಂದ ಮಾಡಲು ಬಯಸುವುದಿಲ್ಲ. ನನಗೆ ರಾಜಕೀಯದಲ್ಲಿ ಧುಮುಕಲು ಆಸಕ್ತಿ ಇದೆ ಅಥವಾ ಶಕ್ತಿಯಿದೆ ಎಂದು ನನಗೆ ಅನಿಸಿದ ದಿನ ನಾನೇ ಎಲ್ಲರಿಗೂ ಘೋಷಣೆ ಮಾಡುತ್ತೇನೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ, ಪಂಜಾಬ್ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಹರ್ಭಜನ್ ಸಿಂಗ್ ಅವರೊಂದಿಗೆ ತಮ್ಮ ಫೋಟೋವನ್ನು ಟ್ವೀಟ್ ಮಾಡಿದ ನಂತರ ಹರ್ಭಜನ್ ಸಿಂಗ್ ಕಾಂಗ್ರೆಸ್​ ಸೇರುತ್ತಾರೆಂಬ ಊಹಾಪೋಹಗಳು ಎದ್ದಿದ್ದವು.

ಇದನ್ನೂ ಓದಿ: Harbhajan Singh: ಎಲ್ಲಾ ಮಾದರಿ ಕ್ರಿಕೆಟ್​ಗೆ ವಿದಾಯ ಹೇಳಿದ ಹರ್ಭಜನ್ ಸಿಂಗ್ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

Harbhajan Singh: 23 ವರ್ಷಗಳ ವೃತ್ತಿಜೀವನಕ್ಕೆ ಹರ್ಭಜನ್ ಸಿಂಗ್ ವಿದಾಯ; ಟರ್ಬನೇಟರ್ ಕ್ರಿಕೆಟ್​ ಬದುಕು ಹೇಗಿತ್ತು ಗೊತ್ತಾ?

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ