AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wimbledon 2023: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮಾರ್ಕೆಟಾ

Wimbledon 2023 Women’s Final: ಜಾನಾ ನೊವೊಟ್ನಾ ಮತ್ತು ಪೆಟ್ರಾ ಕ್ವಿಟೋವಾ ನಂತರ ವಿಂಬಲ್ಡನ್‌ನಲ್ಲಿ ಪ್ರಶಸ್ತಿ ಗೆದ್ದ ಮೂರನೇ ಜೆಕ್ ಗಣರಾಜ್ಯದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಾರ್ಕೆಟಾ ವೊಂಡ್ರೊಸೊವಾ ಪಾತ್ರರಾಗಿದ್ದಾರೆ.

Wimbledon 2023: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮಾರ್ಕೆಟಾ
Marketa Vondrousova
TV9 Web
| Edited By: |

Updated on:Jul 15, 2023 | 9:07 PM

Share

Wimbledon 2023 Women’s Final: ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್​ನಲ್ಲಿ ಟುನೀಶಿಯಾದ ಓನ್ಸ್ ಜಬೇರ್ ವಿರುದ್ಧ ಜೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೊಸೊವಾ ಗೆಲುವು ದಾಖಲಿಸಿದ್ದಾರೆ. ಲಂಡನ್‌ನ ಕ್ರೋಕೆಟ್ ಕ್ಲಬ್‌ ಸೆಂಟರ್ ಕೋರ್ಟ್‌ನಲ್ಲಿ ನಡೆದ ಫೈನಲ್ ಕಾದಾಟದಲ್ಲಿ ಓನ್ಸ್ ಜಬೇರ್ ಅವರನ್ನು 6-4, 6-4 ಅಂತರದಿಂದ ಸೋಲಿಸಿ ಮಾರ್ಕೆಟಾ ವಿಂಬಲ್ಡನ್ ಕಿರೀಟವನ್ನು ತಮ್ಮದಾಗಿಸಿಕೊಂಡರು. ಭಾರೀ ಪೈಪೋಟಿಯನ್ನು ನಿರೀಕ್ಷಿಸಲಾಗಿದ್ದ ಅಂತಿಮ ಹಣಾಹಣಿಯನ್ನು 24 ವರ್ಷದ ಮಾರ್ಕೆಟಾ ಏಕಪಕ್ಷೀಯವಾಗಿಸಿದ್ದರು.

2022 ರ ವಿಂಬಲ್ಡನ್ ಫೈನಲ್​ನಲ್ಲೂ ಸೋತು ರನ್ನರ್ ಅಪ್ ಆಗಿದ್ದ ಒನ್ಸ್ ಜಬೇರ್ ಈ ಕೂಡ ಒತ್ತಡ ಮೀರಿ ಆಡುವಲ್ಲಿ ವಿಫಲರಾದರು. ಇದರ ಸಂಪೂರ್ಣ ಲಾಭ ಪಡೆದ ಮಾರ್ಕೆಟಾ ಮೊದಲ ಸೆಟ್​ನಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಈ ಮೂಲಕ ಮೊದಲ ಸೆಟ್​ ಅನ್ನು 6-4 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಇನ್ನು ದ್ವಿತೀಯ ಸೆಟ್​ನಲ್ಲಿ ಒನ್ಸ್ ಜಬೇರ್ ಕಂಬ್ಯಾಕ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಫಸ್ಟ್ ಸರ್ವ್​ ಮೂಲಕವೇ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಮಾರ್ಕೆಟಾ ಮತ್ತೊಮ್ಮೆ ಯಶಸ್ವಿಯಾದರು. ಇತ್ತ ಅತ್ಯುತ್ತಮ ಹೊಡೆತಗಳ ಮೂಲಕ ಜೆಕ್ ರಿಪಬ್ಲಿಕ್ ಆಟಗಾರ್ತಿ ಮಾರ್ಕೆಟಾ ಎದುರಾಳಿ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಇದಾಗ್ಯೂ ಕೆಲ ಅತ್ಯುತ್ತಮ ಶಾಟ್​ಗಳ ಮೂಲಕ ಟುನೀಶಿಯಾ ಆಟಗಾರ್ತಿ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಉತ್ತಮ ಹೊಡೆತಗಳಿಗಿಂತ ಒನ್ಸ್ ಜಬೇರ್ ಅವರ ಅನಗತ್ಯ ತಪ್ಪುಗಳನ್ನೇ ಮುಳುವಾದವು.  ಮತ್ತೊಂದೆಡೆ ಅನುಭವಕ್ಕಿಂತ ಹೆಚ್ಚಾಗಿ ಒತ್ತಡವನ್ನು ಮೀರಿ ನಿರ್ಭೀತಿಯಿಂದ ಆಡುವಲ್ಲಿ ಮಾರ್ಕೆಟಾ ಯಶಸ್ವಿಯಾದರು. ಇದರೊಂದಿಗೆ 2ನೇ ಸೆಟ್​ ಅನ್ನು ಕೂಡ 6-4 ಅಂತರದಿಂದ ಗೆದ್ದುಕೊಂಡರು.

ಈ ಮೂಲಕ ಜಾನಾ ನೊವೊಟ್ನಾ ಮತ್ತು ಪೆಟ್ರಾ ಕ್ವಿಟೋವಾ ನಂತರ ವಿಂಬಲ್ಡನ್‌ನಲ್ಲಿ ಪ್ರಶಸ್ತಿ ಗೆದ್ದ ಮೂರನೇ ಜೆಕ್ ಗಣರಾಜ್ಯದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಾರ್ಕೆಟಾ ವೊಂಡ್ರೊಸೊವಾ ಪಾತ್ರರಾದರು.

Published On - 8:43 pm, Sat, 15 July 23

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!