AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wimbledon 2023: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮಾರ್ಕೆಟಾ

Wimbledon 2023 Women’s Final: ಜಾನಾ ನೊವೊಟ್ನಾ ಮತ್ತು ಪೆಟ್ರಾ ಕ್ವಿಟೋವಾ ನಂತರ ವಿಂಬಲ್ಡನ್‌ನಲ್ಲಿ ಪ್ರಶಸ್ತಿ ಗೆದ್ದ ಮೂರನೇ ಜೆಕ್ ಗಣರಾಜ್ಯದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಾರ್ಕೆಟಾ ವೊಂಡ್ರೊಸೊವಾ ಪಾತ್ರರಾಗಿದ್ದಾರೆ.

Wimbledon 2023: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮಾರ್ಕೆಟಾ
Marketa Vondrousova
TV9 Web
| Edited By: |

Updated on:Jul 15, 2023 | 9:07 PM

Share

Wimbledon 2023 Women’s Final: ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್​ನಲ್ಲಿ ಟುನೀಶಿಯಾದ ಓನ್ಸ್ ಜಬೇರ್ ವಿರುದ್ಧ ಜೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೊಸೊವಾ ಗೆಲುವು ದಾಖಲಿಸಿದ್ದಾರೆ. ಲಂಡನ್‌ನ ಕ್ರೋಕೆಟ್ ಕ್ಲಬ್‌ ಸೆಂಟರ್ ಕೋರ್ಟ್‌ನಲ್ಲಿ ನಡೆದ ಫೈನಲ್ ಕಾದಾಟದಲ್ಲಿ ಓನ್ಸ್ ಜಬೇರ್ ಅವರನ್ನು 6-4, 6-4 ಅಂತರದಿಂದ ಸೋಲಿಸಿ ಮಾರ್ಕೆಟಾ ವಿಂಬಲ್ಡನ್ ಕಿರೀಟವನ್ನು ತಮ್ಮದಾಗಿಸಿಕೊಂಡರು. ಭಾರೀ ಪೈಪೋಟಿಯನ್ನು ನಿರೀಕ್ಷಿಸಲಾಗಿದ್ದ ಅಂತಿಮ ಹಣಾಹಣಿಯನ್ನು 24 ವರ್ಷದ ಮಾರ್ಕೆಟಾ ಏಕಪಕ್ಷೀಯವಾಗಿಸಿದ್ದರು.

2022 ರ ವಿಂಬಲ್ಡನ್ ಫೈನಲ್​ನಲ್ಲೂ ಸೋತು ರನ್ನರ್ ಅಪ್ ಆಗಿದ್ದ ಒನ್ಸ್ ಜಬೇರ್ ಈ ಕೂಡ ಒತ್ತಡ ಮೀರಿ ಆಡುವಲ್ಲಿ ವಿಫಲರಾದರು. ಇದರ ಸಂಪೂರ್ಣ ಲಾಭ ಪಡೆದ ಮಾರ್ಕೆಟಾ ಮೊದಲ ಸೆಟ್​ನಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಈ ಮೂಲಕ ಮೊದಲ ಸೆಟ್​ ಅನ್ನು 6-4 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಇನ್ನು ದ್ವಿತೀಯ ಸೆಟ್​ನಲ್ಲಿ ಒನ್ಸ್ ಜಬೇರ್ ಕಂಬ್ಯಾಕ್ ಅನ್ನು ನಿರೀಕ್ಷಿಸಲಾಗಿತ್ತು. ಆದರೆ ಫಸ್ಟ್ ಸರ್ವ್​ ಮೂಲಕವೇ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಮಾರ್ಕೆಟಾ ಮತ್ತೊಮ್ಮೆ ಯಶಸ್ವಿಯಾದರು. ಇತ್ತ ಅತ್ಯುತ್ತಮ ಹೊಡೆತಗಳ ಮೂಲಕ ಜೆಕ್ ರಿಪಬ್ಲಿಕ್ ಆಟಗಾರ್ತಿ ಮಾರ್ಕೆಟಾ ಎದುರಾಳಿ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಇದಾಗ್ಯೂ ಕೆಲ ಅತ್ಯುತ್ತಮ ಶಾಟ್​ಗಳ ಮೂಲಕ ಟುನೀಶಿಯಾ ಆಟಗಾರ್ತಿ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಉತ್ತಮ ಹೊಡೆತಗಳಿಗಿಂತ ಒನ್ಸ್ ಜಬೇರ್ ಅವರ ಅನಗತ್ಯ ತಪ್ಪುಗಳನ್ನೇ ಮುಳುವಾದವು.  ಮತ್ತೊಂದೆಡೆ ಅನುಭವಕ್ಕಿಂತ ಹೆಚ್ಚಾಗಿ ಒತ್ತಡವನ್ನು ಮೀರಿ ನಿರ್ಭೀತಿಯಿಂದ ಆಡುವಲ್ಲಿ ಮಾರ್ಕೆಟಾ ಯಶಸ್ವಿಯಾದರು. ಇದರೊಂದಿಗೆ 2ನೇ ಸೆಟ್​ ಅನ್ನು ಕೂಡ 6-4 ಅಂತರದಿಂದ ಗೆದ್ದುಕೊಂಡರು.

ಈ ಮೂಲಕ ಜಾನಾ ನೊವೊಟ್ನಾ ಮತ್ತು ಪೆಟ್ರಾ ಕ್ವಿಟೋವಾ ನಂತರ ವಿಂಬಲ್ಡನ್‌ನಲ್ಲಿ ಪ್ರಶಸ್ತಿ ಗೆದ್ದ ಮೂರನೇ ಜೆಕ್ ಗಣರಾಜ್ಯದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಾರ್ಕೆಟಾ ವೊಂಡ್ರೊಸೊವಾ ಪಾತ್ರರಾದರು.

Published On - 8:43 pm, Sat, 15 July 23

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ