AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Boxing Championship: ವಿಶ್ವ ಬಾಕ್ಸಿಂಗ್ ಚಾಂಪಿಯನ್​ಶಿಪ್​: 2 ಚಿನ್ನದ ಪದಕ ಗೆದ್ದ ಭಾರತ

Women's World Boxing Championships: ನೀತು ಗಂಗಾಸ್​ಗಿಂತಲೂ ಮೊದಲು, ಮೇರಿ ಕೋಮ್ 2002, 2005, 2006, 2008, 2010, 2018 ರಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು.

World Boxing Championship: ವಿಶ್ವ ಬಾಕ್ಸಿಂಗ್ ಚಾಂಪಿಯನ್​ಶಿಪ್​: 2 ಚಿನ್ನದ ಪದಕ ಗೆದ್ದ ಭಾರತ
Nitu Ghanghas - Saweety Boora
TV9 Web
| Edited By: |

Updated on: Mar 25, 2023 | 10:15 PM

Share

Women’s World Boxing Championships: ದೆಹಲಿಯಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್​​ನಲ್ಲಿ ನೀತು ಗಂಗಾಸ್ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಹಿಂದೆ ಕಾಮನ್‌ವೆಲ್ತ್ ಗೇಮ್ಸ್‌ನ ಚಿನ್ನದ ಪದಕ ಗೆದ್ದಿದ್ದ ನೀತು, ಶನಿವಾರ ನಡೆದ 48 ಕೆಜಿ ವಿಭಾಗದ ಅಂತಿಮ ಹಣಾಹಣಿಯಲ್ಲಿ ಮಂಗೋಲಿಯನ್ ಮಹಿಳಾ ಬಾಕ್ಸರ್ ಲುತ್ಸಾಯ್ ಖಾನ್ ಅವರನ್ನು ಮಣಿಸಿ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದರು. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಎದುರಾಳಿಯ ದೌರ್ಬಲ್ಯಗಳನ್ನೇ ಬಂಡವಾಳ ಮಾಡಿಕೊಂಡ ನೀತು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ವಿವಿಧ ಕಾಂಬಿನೇಷನ್​ಗಳಲ್ಲಿ ಎದುರಾಳಿಯ ಮೇಲೆ ಪಂಚ್ ಗಳ ಸುರಿಮಳೆಗೈಯುವ ಮೂಲಕ ಸುಲಭವಾಗಿ 5-0 ಅಂತರದಿಂದ ಪಂದ್ಯ ಮುಗಿಸಿದರು.

ಈ ಗೆಲುವಿನೊಂದಿಗೆ ನೀತು ಗಂಗಾಸ್ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ 6ನೇ ಮಹಿಳಾ ಬಾಕ್ಸರ್ ಎನಿಸಿಕೊಂಡರು. ನೀತು ಗಂಗಾಸ್​ಗಿಂತಲೂ ಮೊದಲು, ಮೇರಿ ಕೋಮ್ 2002, 2005, 2006, 2008, 2010, 2018 ರಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಹಾಗೆಯೇ 2006 ರಲ್ಲಿ ಸರಿತಾ ದೇವಿ, ಜೆನ್ನಿ ಆರ್ಎಲ್, ಲೇಖಾ ಕೆಸಿ ಕೂಡ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು.

ಭಾರತಕ್ಕೆ 2ನೇ ಚಿನ್ನ:

ನೀತು ಗಂಗಾಸ್ ಚಿನ್ನದ ಪದಕ ಖಾತೆ ತೆರೆಯುತ್ತಿದ್ದಂತೆ ಭಾರತಕ್ಕೆ ಸವೀಟಿ ಬೂರಾ ಮತ್ತೊಂದು ಬಂಗಾರದ ಪದಕ ತಂದುಕೊಟ್ಟರು. 81 ಕೆಜಿ ವಿಭಾಗದಲ್ಲಿ ಚೀನಾದ ವಾಂಗ್ ಲಿನ್ ಅವರನ್ನು 4-3 ಅಂತರದಿಂದ ಸೋಲಿಸಿ ಬೂರ ಪದಕ ಗೆದ್ದರು. ಪ್ರಸ್ತುತ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಇದು ಎರಡನೇ ಚಿನ್ನದ ಪದಕವಾಗಿದೆ. 2014ರಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸವೀಟಿ ಒಂಬತ್ತು ವರ್ಷಗಳ ಬಳಿಕ ಇದೀಗ ಚಿನ್ನದ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್​ಶಿಪ್​ನ ಅಂತಿಮ ಸುತ್ತಿನಲ್ಲಿ  ಭಾರತದ ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್ (50 ಕೆಜಿ) ಹಾಗೂ ಲವ್ಲಿನಾ (75 ಕೆಜಿ) ಕೂಡ ಇದ್ದಾರೆ. ಇಬ್ಬರು ಫೈನಲ್ ತಲುಪಿರುವ ಕಾರಣ ಭಾರತವು ಮತ್ತೆರಡು  ಚಿನ್ನದ ಪದಕಗಳ ನಿರೀಕ್ಷೆಯಲ್ಲಿದೆ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ