AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Boxing Championship: ವಿಶ್ವ ಬಾಕ್ಸಿಂಗ್ ಚಾಂಪಿಯನ್​ಶಿಪ್​: 2 ಚಿನ್ನದ ಪದಕ ಗೆದ್ದ ಭಾರತ

Women's World Boxing Championships: ನೀತು ಗಂಗಾಸ್​ಗಿಂತಲೂ ಮೊದಲು, ಮೇರಿ ಕೋಮ್ 2002, 2005, 2006, 2008, 2010, 2018 ರಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು.

World Boxing Championship: ವಿಶ್ವ ಬಾಕ್ಸಿಂಗ್ ಚಾಂಪಿಯನ್​ಶಿಪ್​: 2 ಚಿನ್ನದ ಪದಕ ಗೆದ್ದ ಭಾರತ
Nitu Ghanghas - Saweety Boora
TV9 Web
| Edited By: |

Updated on: Mar 25, 2023 | 10:15 PM

Share

Women’s World Boxing Championships: ದೆಹಲಿಯಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್​​ನಲ್ಲಿ ನೀತು ಗಂಗಾಸ್ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಹಿಂದೆ ಕಾಮನ್‌ವೆಲ್ತ್ ಗೇಮ್ಸ್‌ನ ಚಿನ್ನದ ಪದಕ ಗೆದ್ದಿದ್ದ ನೀತು, ಶನಿವಾರ ನಡೆದ 48 ಕೆಜಿ ವಿಭಾಗದ ಅಂತಿಮ ಹಣಾಹಣಿಯಲ್ಲಿ ಮಂಗೋಲಿಯನ್ ಮಹಿಳಾ ಬಾಕ್ಸರ್ ಲುತ್ಸಾಯ್ ಖಾನ್ ಅವರನ್ನು ಮಣಿಸಿ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದರು. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಎದುರಾಳಿಯ ದೌರ್ಬಲ್ಯಗಳನ್ನೇ ಬಂಡವಾಳ ಮಾಡಿಕೊಂಡ ನೀತು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ವಿವಿಧ ಕಾಂಬಿನೇಷನ್​ಗಳಲ್ಲಿ ಎದುರಾಳಿಯ ಮೇಲೆ ಪಂಚ್ ಗಳ ಸುರಿಮಳೆಗೈಯುವ ಮೂಲಕ ಸುಲಭವಾಗಿ 5-0 ಅಂತರದಿಂದ ಪಂದ್ಯ ಮುಗಿಸಿದರು.

ಈ ಗೆಲುವಿನೊಂದಿಗೆ ನೀತು ಗಂಗಾಸ್ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ 6ನೇ ಮಹಿಳಾ ಬಾಕ್ಸರ್ ಎನಿಸಿಕೊಂಡರು. ನೀತು ಗಂಗಾಸ್​ಗಿಂತಲೂ ಮೊದಲು, ಮೇರಿ ಕೋಮ್ 2002, 2005, 2006, 2008, 2010, 2018 ರಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಹಾಗೆಯೇ 2006 ರಲ್ಲಿ ಸರಿತಾ ದೇವಿ, ಜೆನ್ನಿ ಆರ್ಎಲ್, ಲೇಖಾ ಕೆಸಿ ಕೂಡ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು.

ಭಾರತಕ್ಕೆ 2ನೇ ಚಿನ್ನ:

ನೀತು ಗಂಗಾಸ್ ಚಿನ್ನದ ಪದಕ ಖಾತೆ ತೆರೆಯುತ್ತಿದ್ದಂತೆ ಭಾರತಕ್ಕೆ ಸವೀಟಿ ಬೂರಾ ಮತ್ತೊಂದು ಬಂಗಾರದ ಪದಕ ತಂದುಕೊಟ್ಟರು. 81 ಕೆಜಿ ವಿಭಾಗದಲ್ಲಿ ಚೀನಾದ ವಾಂಗ್ ಲಿನ್ ಅವರನ್ನು 4-3 ಅಂತರದಿಂದ ಸೋಲಿಸಿ ಬೂರ ಪದಕ ಗೆದ್ದರು. ಪ್ರಸ್ತುತ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಇದು ಎರಡನೇ ಚಿನ್ನದ ಪದಕವಾಗಿದೆ. 2014ರಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸವೀಟಿ ಒಂಬತ್ತು ವರ್ಷಗಳ ಬಳಿಕ ಇದೀಗ ಚಿನ್ನದ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್​ಶಿಪ್​ನ ಅಂತಿಮ ಸುತ್ತಿನಲ್ಲಿ  ಭಾರತದ ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್ (50 ಕೆಜಿ) ಹಾಗೂ ಲವ್ಲಿನಾ (75 ಕೆಜಿ) ಕೂಡ ಇದ್ದಾರೆ. ಇಬ್ಬರು ಫೈನಲ್ ತಲುಪಿರುವ ಕಾರಣ ಭಾರತವು ಮತ್ತೆರಡು  ಚಿನ್ನದ ಪದಕಗಳ ನಿರೀಕ್ಷೆಯಲ್ಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ