AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಸೇರಿದಂತೆ 3 ಪದಕ! ಫಿನ್​ಲ್ಯಾಂಡ್​ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ 94 ವರ್ಷದ ಅಜ್ಜಿ

94 ನೇ ವಯಸ್ಸಿನಲ್ಲಿ, ಭಗವಾನ್ ದೇವಿ ದಾಗರ್ ಎಂಬ ಅಜ್ಜಿ ಫಿನ್‌ಲ್ಯಾಂಡ್‌ನಲ್ಲಿ, ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ ಹಿರಿಯ ನಾಗರಿಕರ ವಿಭಾಗದಲ್ಲಿ ಒಂದು ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದಿದ್ದಾರೆ.

ಚಿನ್ನ ಸೇರಿದಂತೆ 3 ಪದಕ! ಫಿನ್​ಲ್ಯಾಂಡ್​ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ 94 ವರ್ಷದ ಅಜ್ಜಿ
ಭಗವಾನ್ ದೇವಿ ದಾಗರ್
TV9 Web
| Edited By: |

Updated on: Jul 11, 2022 | 3:57 PM

Share

ಯಾವ ವಯಸ್ಸಿನಲ್ಲಿ ಜನರು ವಿಶ್ರಾಂತಿ ಪಡೆಯಬೇಕೆಂದು ಸಲಹೆ ನೀಡುತ್ತಾರೋ, ಆ ವಯಸ್ಸಿನಲ್ಲಿ, ಭಾರತೀಯ ಅಥ್ಲೀಟ್ ವಿದೇಶಿ ನೆಲದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 94 ನೇ ವಯಸ್ಸಿನಲ್ಲಿ, ಭಗವಾನ್ ದೇವಿ ದಾಗರ್ (Bhagwan Devi Dagar) ಎಂಬ ಅಜ್ಜಿ, ಫಿನ್‌ಲ್ಯಾಂಡ್‌ನಲ್ಲಿ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರು ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 (World Masters Athletics Championships 2022)ರಲ್ಲಿ ಹಿರಿಯ ನಾಗರಿಕರ ವಿಭಾಗದಲ್ಲಿ ಒಂದು ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದಿದ್ದಾರೆ. ಭಗವಾನ್ ದೇವಿ 100 ಮೀಟರ್ ಓಟದಲ್ಲಿ ಚಿನ್ನ ಗೆದ್ದರೆ, ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 100 ಮೀಟರ್ ಓಟವನ್ನು 24.74 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸುವ ಮೂಲಕ ಭಾರತದ ಬ್ಯಾಗ್‌ಗೆ ಚಿನ್ನವನ್ನು ಹಾಕಿದ್ದಾರೆ.

ವಯಸ್ಸು ಅಡ್ಡಿಯಿಲ್ಲ

ಇದನ್ನೂ ಓದಿ
Image
IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!
Image
Wimbledon 2022: ಸತತ ನಾಲ್ಕನೇ ಬಾರಿಗೆ ಚಾಂಪಿಯನ್; 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದ ನೊವಾಕ್ ಜೊಕೊವಿಕ್..!

ಟ್ವೀಟ್‌ನಲ್ಲಿ ಕ್ರೀಡಾ ಸಚಿವಾಲಯ ಭಗವಾನಿ ದೇವಿ ಅವರನ್ನು ಹೊಗಳಿದ್ದು, ಸಾಧನೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅವರು ಈ ಹಿಂದೆ ದೆಹಲಿ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟ, ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತದಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದರು ಎಂಬುದನ್ನು ಸಹ ಉಲ್ಲೇಖಿಸಿದ್ದಾರೆ.

‘ಕಡಿಮೆ ಇಲ್ಲ ಅಜ್ಜಿ’

ಭಗವಾನಿ ದೇವಿಯ ಮೊಮ್ಮಗ ವಿಕಾಸ್ ದಾಗರ್ ಪ್ಯಾರಾ ಅಥ್ಲೀಟ್ ಆಗಿದ್ದು, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈಗ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅವರ ಧೈರ್ಯ ಮತ್ತು ಉತ್ಸಾಹವನ್ನು ಇಡೀ ದೇಶ ಕೊಂಡಾಡುತ್ತಿದೆ. ನಮ್ಮ ಅಜ್ಜಿ ಯಾರಿಗೂ ಕಡಿಮೆ ಇಲ್ಲ ಎನ್ನುತ್ತಾರೆ ಅಭಿಮಾನಿಗಳು. ಅವರ ವಿಶ್ವಾಸವನ್ನು ನೋಡಿ ಎಂದು ಮಾಜಿ ಕ್ಯಾಬಿನೆಟ್ ಸಚಿವ ಅಸ್ಲಾಂ ಶೇಖ್ ಹೇಳಿಕೊಂಡು ಅಜ್ಜಿಯನ್ನು ಹೊಗಳಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು