AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್: 100ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಾರ

ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ಆರಂಭವಾಗಲಿದೆ. ಡಿಸೆಂಬರ್ 17-20ರವರೆಗೆ ನಡೆಯುವ ಈ ಮೊದಲ ಭಾರತ ಆವೃತ್ತಿಯು 100ಕ್ಕೂ ಹೆಚ್ಚು ದೇಶಗಳಲ್ಲಿ ನೇರ ಪ್ರಸಾರವಾಗಲಿದೆ. ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೊಸ್ ಮತ್ತು ರೋಹನ್ ಬೋಪಣ್ಣ ಸೇರಿದಂತೆ ವಿಶ್ವದ ಅಗ್ರಮಾನ್ಯ ಆಟಗಾರರು ಬೆಂಗಳೂರಿನ ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ಸೆಣಸಲಿದ್ದಾರೆ.

ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್: 100ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಾರ
ವರ್ಲ್ಡ್ ಟೆನಿಸ್ ಲೀಗ್
ಪ್ರಸನ್ನ ಹೆಗಡೆ
|

Updated on: Dec 16, 2025 | 7:05 PM

Share

ಬೆಂಗಳೂರು, ಡಿಸೆಂಬರ್​​ 16: ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ಆರಂಭವಾಗಲಿದೆ. ಐಕಾನಿಕ್ ಸ್ಪೋರ್ಟ್ಸ್ ಮತ್ತು ಇವೆಂಟ್ಸ್ ಪ್ರಸ್ತುತಪಡಿಸುವ, ಸ್ಪೈಸ್‌ಜೆಟ್‌ನಿಂದ ಪವರ್‌ಡ್ ಆಗಿರುವ ವರ್ಲ್ಡ್ ಟೆನಿಸ್ ಲೀಗ್ (WTL) ಭಾರತ ಸೇರಿದಂತೆ ವಿಶ್ವದ 100ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಾರವಾಗಲಿದೆ. ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿರುವ WTLನ ಮೊದಲ ಭಾರತ ಆವೃತ್ತಿಯನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ.

ವರ್ಲ್ಡ್ ಟೆನಿಸ್ ಲೀಗ್ ಅಮೆರಿಕಾ, ಯುರೋಪ್, ಏಷ್ಯಾ, ಭಾರತೀಯ ಉಪಖಂಡ, ಮಿಡಲ್ ಈಸ್ಟ್ ಮತ್ತು ಉತ್ತರ ಆಫ್ರಿಕಾ (MENA), ಸಬ್-ಸಹಾರಾ ಆಫ್ರಿಕಾ, ರಷ್ಯಾ ಹಾಗೂ ವಿಶ್ವದ ಇತರೆ ಭಾಗಗಳಲ್ಲಿ ಜಾಗತಿಕವಾಗಿ ಪ್ರಸಾರವಾಗಲಿದೆ. ಟೆನಿಸ್ ಚಾನೆಲ್, ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್, ಬೋಲ್ಷೆ, ಫ್ಯಾನ್‌ಕೋಡ್, ಕ್ಯಾನಲ್+, ಸೂಪರ್‌ಟೆನಿಸ್ ಇಟಲಿ, ಆನ್‌ಟೈಮ್ ಸ್ಪೋರ್ಟ್ಸ್, ಸ್ಟಾರ್‌ಟೈಮ್ಸ್, ಸ್ಟೈಕ್ಸ್ ಸ್ಪೋರ್ಟ್ಸ್ ಸೇರಿದಂತೆ ಹಲವು ಪ್ರಸಾರಕರ ಮೂಲಕ ಈ ಲೀಗ್ ವಿಶ್ವದಾದ್ಯಂತ ಅಭಿಮಾನಿಗಳನ್ನು ತಲುಪಲಿದೆ.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಮೆಸ್ಸಿ ಕಾರ್ಯಕ್ರಮದಲ್ಲಿ ನಡೆದ ಗಲಭೆಗೆ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ವರ್ಲ್ಡ್ ಟೆನಿಸ್ ಲೀಗ್ (WTL), ನಾಲ್ಕು ದಿನಗಳ ಕಾಲ ನಡೆಯಲಿದೆ. ಭಾರತದ ಮೊದಲ ಆವೃತ್ತಿಯಲ್ಲಿ ಗೇಮ್ ಚೇಂಜರ್ಸ್ ಫಾಲ್ಕನ್ಸ್, VB ರಿಯಾಲ್ಟಿ ಹಾಕ್ಸ್, ಆಸಿ ಮ್ಯಾವೆರಿಕ್ಸ್ ಕೈಟ್ಸ್ ಮತ್ತು AOS ಈಗಲ್ಸ್ ತಂಡಗಳು ಭಾಗವಹಿಸುತ್ತಿದ್ದು, ಪ್ರತಿ ತಂಡವೂ ಅಗ್ರ ಅಂತಾರಾಷ್ಟ್ರೀಯ ಹಾಗೂ ಭಾರತೀಯ ಟೆನಿಸ್ ಆಟಗಾರರನ್ನು ಒಳಗೊಂಡಿದೆ. ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೊಸ್, ಗೇಲ್ ಮಾನ್ಫಿಲ್ಸ್, ಡೆನಿಸ್ ಶಪೋವಾಲೊವ್ ಮತ್ತು ಎಲಿನಾ ಸ್ವಿಟೋಲಿನಾ ಅವರಂತಹ ವಿಶ್ವದ ಖ್ಯಾತ ಆಟಗಾರರು, ಜೊತೆಗೆ ಭಾರತದ ಶ್ರೇಷ್ಠ ಟೆನಿಸ್ ತಾರೆಗಳಾದ ರೋಹನ್ ಬೋಪಣ್ಣ, ಸುಮಿತ್ ನಾಗಲ್, ಯೂಕಿ ಭಾಂಬ್ರಿ, ಸಹಜ ಯಮಲಪಲ್ಲಿ ಹಾಗೂ ಇತರ ಉದಯೋನ್ಮುಖ ಆಟಗಾರರು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕುರಿತು ಮಾತನಾಡಿದ ವರ್ಲ್ಡ್ ಟೆನಿಸ್ ಲೀಗ್‌ನ ಸಹ-ಸ್ಥಾಪಕಿ ಹೇಮಲಿ ಶರ್ಮಾ, ಭಾರತದಲ್ಲಿ ನಡೆಯುತ್ತಿರುವ ನಮ್ಮ ಮೊದಲ ಆವೃತ್ತಿಗೆ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಫ್ಯಾನ್‌ಕೋಡ್ ಅವರನ್ನು ಅಧಿಕೃತ ಪ್ರಸಾರ ಹಾಗೂ ಡಿಜಿಟಲ್ ಸ್ಟ್ರೀಮಿಂಗ್ ಪಾಲುದಾರರಾಗಿ ಹೊಂದಿರುವುದು ನಮಗೆ ಸಂತೋಷ ತಂದಿದೆ. ವರ್ಲ್ಡ್ ಟೆನಿಸ್ ಲೀಗ್‌ನ ರೋಚಕ ಪಂದ್ಯಗಳು 100ಕ್ಕೂ ಹೆಚ್ಚು ದೇಶಗಳ ಅಭಿಮಾನಿಗಳಿಗೆ ತಲುಪಲಿವೆ ಎಂದಿದ್ದಾರೆ.

ಫ್ಯಾನ್‌ಕೋಡ್‌ನ ಸಹ-ಸ್ಥಾಪಕರಾದ ಪ್ರಸಾನ ಕೃಷ್ಣನ್ ಮಾತನಾಡಿ, ವರ್ಲ್ಡ್ ಟೆನಿಸ್ ಲೀಗ್ ಅನ್ನು ಭಾರತೀಯ ಪ್ರೇಕ್ಷಕರಿಗೆ ತಲುಪಿಸಲು ನಾವು ಉತ್ಸುಕರಾಗಿದ್ದೇವೆ. ಈ ಆವೃತ್ತಿಯು ಮೆಡ್ವೆಡೆವ್, ಕಿರ್ಗಿಯೊಸ್, ಮಾನ್ಫಿಲ್ಸ್, ಬಡೋಸಾ, ಸ್ವಿಟೋಲಿನಾ ಅವರಂತಹ ಜಾಗತಿಕ ತಾರೆಗಳನ್ನು ಹತ್ತಿರದಿಂದ ವೀಕ್ಷಿಸುವ ಅಪೂರ್ವ ಅವಕಾಶವನ್ನು ಭಾರತೀಯ ಅಭಿಮಾನಿಗಳಿಗೆ ಒದಗಿಸುತ್ತಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?