AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಗೆದ್ದರೂ ಸೋತರೂ RCB ಪ್ಲೇಆಫ್ಸ್​ಗೆ… ಆದರೆ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ 2024 ರ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಯುಪಿ ವಾರಿಯರ್ಸ್​ ಇದ್ದರೆ, ಐದನೇ ಸ್ಥಾನದಲ್ಲಿ ಗುಜರಾತ್ ಜೈಂಟ್ಸ್ ತಂಡವಿದೆ.

TV9 Web
| Edited By: |

Updated on:Mar 12, 2024 | 9:36 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಪ್ಲೇಆಫ್ಸ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನು ಒಂದು ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶವಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಪ್ಲೇಆಫ್ಸ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನು ಒಂದು ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶವಿದೆ.

1 / 7
ಆದರೆ ಇಲ್ಲಿ 3ನೇ ಸ್ಥಾನಕ್ಕಾಗಿ ಎರಡು ತಂಡಗಳ ನಡುವೆ ಪೈಪೋಟಿಯಿದೆ. ಈ ಪೈಪೋಟಿಯಲ್ಲಿ ಮುಂಚೂಣಿಯಲ್ಲಿರುವುದು ಆರ್​ಸಿಬಿ ತಂಡ ಎಂಬುದು ವಿಶೇಷ. ಏಕೆಂದರೆ ಈಗಾಗಲೇ 7 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಆರ್​ಸಿಬಿ 6 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ.

ಆದರೆ ಇಲ್ಲಿ 3ನೇ ಸ್ಥಾನಕ್ಕಾಗಿ ಎರಡು ತಂಡಗಳ ನಡುವೆ ಪೈಪೋಟಿಯಿದೆ. ಈ ಪೈಪೋಟಿಯಲ್ಲಿ ಮುಂಚೂಣಿಯಲ್ಲಿರುವುದು ಆರ್​ಸಿಬಿ ತಂಡ ಎಂಬುದು ವಿಶೇಷ. ಏಕೆಂದರೆ ಈಗಾಗಲೇ 7 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಆರ್​ಸಿಬಿ 6 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ.

2 / 7
ಇನ್ನು ಯುಪಿ ವಾರಿಯರ್ಸ್ ನಾಲ್ಕನೇ ಸ್ಥಾನದಲ್ಲಿದೆ. ಈ ತಂಡವು ಪ್ಲೇಆಫ್ಸ್​ಗೆ ಪ್ರವೇಶಿಸಬೇಕಿದ್ದರೆ ಆರ್​ಸಿಬಿ ತಂಡದ ಫಲಿತಾಂಶವನ್ನು ಎದುರು ನೋಡಬೇಕಿದೆ. ಹಾಗೆಯೇ ಐದನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡಕ್ಕೆ ಇನ್ನೂ ಒಂದು ಪಂದ್ಯವಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ಗುಜರಾತ್ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

ಇನ್ನು ಯುಪಿ ವಾರಿಯರ್ಸ್ ನಾಲ್ಕನೇ ಸ್ಥಾನದಲ್ಲಿದೆ. ಈ ತಂಡವು ಪ್ಲೇಆಫ್ಸ್​ಗೆ ಪ್ರವೇಶಿಸಬೇಕಿದ್ದರೆ ಆರ್​ಸಿಬಿ ತಂಡದ ಫಲಿತಾಂಶವನ್ನು ಎದುರು ನೋಡಬೇಕಿದೆ. ಹಾಗೆಯೇ ಐದನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡಕ್ಕೆ ಇನ್ನೂ ಒಂದು ಪಂದ್ಯವಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ಗುಜರಾತ್ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ.

3 / 7
ಆದರೆ ಇತ್ತ ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ. ಇನ್ನು ಸೋತರೂ ಕೂಡ ಅದೃಷ್ಟದಾಟದ ಮೇಲೆ ಅವಕಾಶವಿರಲಿದೆ. ಏಕೆಂದರೆ ಗುಜರಾತ್ ಜೈಂಟ್ಸ್ ತಂಡದ ನೆಟ್ ರನ್ ರೇಟ್-0.873 ಇದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾರೀ ಅಂತರದಿಂದ ಗೆದ್ದರೆ ಮಾತ್ರ ಆರ್​ಸಿಬಿ (+0.027) ತಂಡದ ನೆಟ್ ರನ್ ರೇಟ್​ ಅನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಬಹುದು.

ಆದರೆ ಇತ್ತ ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲಿದೆ. ಇನ್ನು ಸೋತರೂ ಕೂಡ ಅದೃಷ್ಟದಾಟದ ಮೇಲೆ ಅವಕಾಶವಿರಲಿದೆ. ಏಕೆಂದರೆ ಗುಜರಾತ್ ಜೈಂಟ್ಸ್ ತಂಡದ ನೆಟ್ ರನ್ ರೇಟ್-0.873 ಇದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾರೀ ಅಂತರದಿಂದ ಗೆದ್ದರೆ ಮಾತ್ರ ಆರ್​ಸಿಬಿ (+0.027) ತಂಡದ ನೆಟ್ ರನ್ ರೇಟ್​ ಅನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಬಹುದು.

4 / 7
ಒಂದು ವೇಳೆ ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೂ ನೆಟ್ ರನ್ ರೇಟ್ ಕಾರಣ 3ನೇ ಸ್ಥಾನದಲ್ಲೇ ಉಳಿಯಲಿದೆ. ಆದರೆ 60 ರನ್​ಗಿಂತ ಹೆಚ್ಚಿನ ಅಂತರದಿಂದ ಸೋಲನುಭವಿಸಿದರೆ ಮಾತ್ರ ಆರ್​ಸಿಬಿ ಪಾಲಿಗೆ ಕಂಟಕ ಎದುರಾಗಲಿದೆ. ಏಕೆಂದರೆ ಹೀನಾಯವಾಗಿ ಸೋತರೆ ಯುಪಿ ವಾರಿಯರ್ಸ್ ನೆಟ್​ ರನ್ ರೇಟ್ ಮೂಲಕ 3ನೇ ಸ್ಥಾನಕ್ಕೇರಲಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಸೋಲು-ಗೆಲುವಿನ ಲೆಕ್ಕಾಚಾರದ ನಡುವೆ ಹೀನಾಯ ಸೋಲಿನಿಂದ ಪಾರಾಗಲು ಪ್ಲ್ಯಾನ್ ರೂಪಿಸಲಿದೆ.

ಒಂದು ವೇಳೆ ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೂ ನೆಟ್ ರನ್ ರೇಟ್ ಕಾರಣ 3ನೇ ಸ್ಥಾನದಲ್ಲೇ ಉಳಿಯಲಿದೆ. ಆದರೆ 60 ರನ್​ಗಿಂತ ಹೆಚ್ಚಿನ ಅಂತರದಿಂದ ಸೋಲನುಭವಿಸಿದರೆ ಮಾತ್ರ ಆರ್​ಸಿಬಿ ಪಾಲಿಗೆ ಕಂಟಕ ಎದುರಾಗಲಿದೆ. ಏಕೆಂದರೆ ಹೀನಾಯವಾಗಿ ಸೋತರೆ ಯುಪಿ ವಾರಿಯರ್ಸ್ ನೆಟ್​ ರನ್ ರೇಟ್ ಮೂಲಕ 3ನೇ ಸ್ಥಾನಕ್ಕೇರಲಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಸೋಲು-ಗೆಲುವಿನ ಲೆಕ್ಕಾಚಾರದ ನಡುವೆ ಹೀನಾಯ ಸೋಲಿನಿಂದ ಪಾರಾಗಲು ಪ್ಲ್ಯಾನ್ ರೂಪಿಸಲಿದೆ.

5 / 7
ಅತ್ತ ಆರ್​ಸಿಬಿ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಸೋತರೆ, ಗುಜರಾತ್ ಜೈಂಟ್ಸ್ ಭಾರೀ ಅಂತರದ ಗೆಲುವು ದಾಖಲಿಸಬೇಕಾಗುತ್ತದೆ. ಅಂದರೆ ನಿರ್ದಿಷ್ಟ ಓವರ್​ಗಳಲ್ಲಿ ಚೇಸ್ ಮಾಡಬೇಕು ಅಥವಾ ಇಂತಿಷ್ಟು ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ಆರ್​ಸಿಬಿ ತಂಡದ ನೆಟ್ ರನ್ ರೇಟ್​ ಅನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

ಅತ್ತ ಆರ್​ಸಿಬಿ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಸೋತರೆ, ಗುಜರಾತ್ ಜೈಂಟ್ಸ್ ಭಾರೀ ಅಂತರದ ಗೆಲುವು ದಾಖಲಿಸಬೇಕಾಗುತ್ತದೆ. ಅಂದರೆ ನಿರ್ದಿಷ್ಟ ಓವರ್​ಗಳಲ್ಲಿ ಚೇಸ್ ಮಾಡಬೇಕು ಅಥವಾ ಇಂತಿಷ್ಟು ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ಆರ್​ಸಿಬಿ ತಂಡದ ನೆಟ್ ರನ್ ರೇಟ್​ ಅನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

6 / 7
ಹೀಗಾಗಿಯೇ ಸೋತರೂ ಗೆದ್ದರೂ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತ. ಇದಕ್ಕಾಗಿ ಆರ್​ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆಯಲಿರುವ ಪಂದ್ಯದಲ್ಲಿ ಗೆಲ್ಲಬೇಕು ಅಥವಾ ಹೀನಾಯವಾಗಿ ಸೋಲಬಾರದು. ಈ ಮೂಲಕ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಅತ್ತ ಗುಜರಾತ್ ಜೈಂಟ್ಸ್​ ಪ್ಲೇಆಫ್ಸ್ ಪ್ರವೇಶಿಸಲು ಆರ್​ಸಿಬಿ ತಂಡದ ಹೀನಾಯ ಸೋಲನ್ನು ಎದುರು ನೋಡುತ್ತಿದೆ. ಅಂದರೆ 60 ರನ್​ಗಿಂತ ಹೆಚ್ಚಿನ ಅಂತರದಿಂದ ಆರ್​ಸಿಬಿ ಸೋತರೆ, ಗುಜರಾತ್ ಜೈಂಟ್ಸ್ ತಂಡ ಮುಂದಿನ ಪಂದ್ಯದಲ್ಲಿ 60 ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬಹುದು. ಹೀಗಾಗಿ ಆರ್​ಸಿಬಿ ತಂಡದ ಇಂದಿನ ಫಲಿತಾಂಶ ಗುಜರಾತ್ ಜೈಂಟ್ಸ್ ತಂಡದ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸಲಿದೆ.

ಹೀಗಾಗಿಯೇ ಸೋತರೂ ಗೆದ್ದರೂ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತ. ಇದಕ್ಕಾಗಿ ಆರ್​ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆಯಲಿರುವ ಪಂದ್ಯದಲ್ಲಿ ಗೆಲ್ಲಬೇಕು ಅಥವಾ ಹೀನಾಯವಾಗಿ ಸೋಲಬಾರದು. ಈ ಮೂಲಕ ನೆಟ್ ರನ್ ರೇಟ್ ಸಹಾಯದಿಂದ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಬಹುದು. ಅತ್ತ ಗುಜರಾತ್ ಜೈಂಟ್ಸ್​ ಪ್ಲೇಆಫ್ಸ್ ಪ್ರವೇಶಿಸಲು ಆರ್​ಸಿಬಿ ತಂಡದ ಹೀನಾಯ ಸೋಲನ್ನು ಎದುರು ನೋಡುತ್ತಿದೆ. ಅಂದರೆ 60 ರನ್​ಗಿಂತ ಹೆಚ್ಚಿನ ಅಂತರದಿಂದ ಆರ್​ಸಿಬಿ ಸೋತರೆ, ಗುಜರಾತ್ ಜೈಂಟ್ಸ್ ತಂಡ ಮುಂದಿನ ಪಂದ್ಯದಲ್ಲಿ 60 ರನ್​ಗಳ ಅಂತರದಿಂದ ಗೆಲ್ಲುವ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬಹುದು. ಹೀಗಾಗಿ ಆರ್​ಸಿಬಿ ತಂಡದ ಇಂದಿನ ಫಲಿತಾಂಶ ಗುಜರಾತ್ ಜೈಂಟ್ಸ್ ತಂಡದ ಪ್ಲೇಆಫ್ ಭವಿಷ್ಯವನ್ನು ನಿರ್ಧರಿಸಲಿದೆ.

7 / 7

Published On - 7:46 am, Tue, 12 March 24

Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?