AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸ್ತಿ ಪಟು ವಿನೇಶ್‌ ಫೋಗಟ್ ಬೆಳ್ಳಿ ಪದಕದ ಕನಸು ಭಗ್ನ: ಅರ್ಜಿ ವಜಾಗೊಳಿದ ಸಿಎಎಸ್​​

ಸೆಮಿಫೈನಲ್​ವರೆಗೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಿ ಗೆದ್ದಿದ್ದ ವಿನೇಶ್, ಫೈನಲ್​ಗೆ ಲಗ್ಗೆ ಇಟ್ಟಿದ್ದರು. ಆದರೆ ಕೇವಲ 100 ಗ್ರಾಂ ತೂಕ ಹೆಚ್ಚಾಗಿರೋದ್ರಿಂದ ಫೈನಲ್​ನಿಂದ ಅನರ್ಹಗೊಳಿಸಲಾಗಿತ್ತು. ಫೈನಲ್​ನಲ್ಲಿ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಜಾಗೊಳಿಸಲಾಗಿದೆ. ಆ ಮೂಲಕ ವಿನೇಶ್‌ ಫೋಗಟ್ ಬೆಳ್ಳಿ ಪದಕದ ಕನಸು ಭಗ್ನವಾಗಿದೆ.

ಕುಸ್ತಿ ಪಟು ವಿನೇಶ್‌ ಫೋಗಟ್ ಬೆಳ್ಳಿ ಪದಕದ ಕನಸು ಭಗ್ನ: ಅರ್ಜಿ ವಜಾಗೊಳಿದ ಸಿಎಎಸ್​​
ಕುಸ್ತಿ ಪಟು ವಿನೇಶ್‌ ಫೋಗಟ್ ಬೆಳ್ಳಿ ಪದಕದ ಕನಸು ಭಗ್ನ: ಅರ್ಜಿ ವಜಾಗೊಳಿದ ಸಿಎಎಸ್​​
ಗಂಗಾಧರ​ ಬ. ಸಾಬೋಜಿ
|

Updated on:Aug 14, 2024 | 10:08 PM

Share

ಒಲಿಂಪಿಕ್ಸ್​​ (Olympics) ಫೈನಲ್ಸ್‌ನಿಂದ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್ (Vinesh Phogat)​ ಅನರ್ಹಗೊಂಡಿದ್ದರು. ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ವಜಾಗೊಳಿಸಿದೆ. ಅನರ್ಹತೆ ಪ್ರಶ್ನಿಸಿ, ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಇತ್ತೀಚೆಗೆ ವಿನೇಶ್‌ ಫೋಗಟ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಾದ, ಪ್ರತಿವಾದ ಆಲಿಸಿದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಸೆಮಿಫೈನಲ್​ವರೆಗೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಿ ಗೆದ್ದಿದ್ದ ವಿನೇಶ್, ಫೈನಲ್​ಗೆ ಲಗ್ಗೆ ಇಟ್ಟಿದ್ದರು. ಆದರೆ ಕೇವಲ 100 ಗ್ರಾಂ ತೂಕ ಹೆಚ್ಚಾಗಿರೋದ್ರಿಂದ ಫೈನಲ್​ನಿಂದ ಅನರ್ಹಗೊಳಿಸಲಾಗಿತ್ತು. ಫೈನಲ್​ನಲ್ಲಿ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್​ನಲ್ಲಿ ವಿನೇಶ್ ಫೋಗಟ್ ಅರ್ಜಿ ಸಲ್ಲಿಸಿದ್ದರು. ತನಗೆ ಕನಿಷ್ಠ ಬೆಳ್ಳಿ ಪದಕವನ್ನಾದ್ರೂ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ, ನಿನ್ನೆ ಮೂರನೇ ಬಾರಿಗೆ ಬೆಳ್ಳಿ ಪದಕ ನೀಡುವ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರೀಡಾ ಮಧ್ಯಸ್ಥಿಕೆ ಕೋರ್ಟ್ ವಿಚಾರಣೆ ಮಾಡಿದ್ದು, ತೀರ್ಪು ಮುಂದೂಡಿತ್ತು.

ಇದನ್ನೂ ಓದಿ: Vinesh Phogat: ವಿನೇಶ್ ಫೋಗಟ್ ಮೇಲ್ಮನವಿ; ಮತ್ತೆ ಗಡುವು ವಿಸ್ತರಣೆ, ಈ ದಿನದಂದು ತೀರ್ಪು ಪ್ರಕಟ

ವಿನೇಶ್​ ಫೋಗಟ್​ ಅನರ್ಹಗೊಂಡ ಬಳಿಕ ಅನೇಕ ಕ್ರೀಡಾಪಟುಗಳು, ರಾಜಕೀಯ ನಾಯಕರು, ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳು ಅವರು ಬೆಂಬಲಕ್ಕೆ ನಿಂತಿದ್ದರು. ವಿನೇಶ್​ಗೆ ನ್ಯಾಯ ಒದಗಿಸಬೇಕು. ಕನಿಷ್ಠ ಬೆಳ್ಳಿ ಪದಕವನ್ನಾದರೂ ನೀಡಬೇಕು ಅಂತ ಆಗ್ರಹಿಸಿ ಅಭಿಯಾನ ಕೂಡ ಮಾಡಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿರುವ ಸಿಎಎಸ್​ ಕೋರ್ಟ್ ನಿನ್ನೆ ಸತತ 3ನೇ ಬಾರಿ ತೀರ್ಪುವನ್ನು ಮುಂದೂಡಿತ್ತು.

ಎಎನ್​ಐ ಟ್ವೀಟ್​

ವಿನೇಶ್​ ಫೋಗಟ್​ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ನಡೆಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷೆ ಡಾ.ಪಿ.ಟಿ.ಉಷಾ ಅವರು ಆಘಾತಕ್ಕೊಳಗಾಗುವುದರೊಂದಿಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಒಲಿಂಪಿಕ್ಸ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:46 pm, Wed, 14 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು