AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯವಿಟ್ಟು ನನ್ನ ಕೊರೊನಾ ವರದಿಯ ಬಗ್ಗೆ ಯಾವುದೇ ವದಂತಿಗಳನ್ನು ಹರಡಬೇಡಿ; ವೃದ್ಧಿಮಾನ್ ಸಹಾ

ನನ್ನ ಕ್ವಾರಂಟೈನ್ ಅವಧಿ ಇನ್ನೂ ಮುಗಿದಿಲ್ಲ. ವಾಡಿಕೆಯ ತಪಾಸಣೆಯಂತೆ, ಎರಡು ಪರೀಕ್ಷೆಗಳು ನಡೆದಿವೆ, ಅವುಗಳಲ್ಲಿ ಒಂದು ನೆಗೆಟಿವ್ ಮತ್ತು ಇನ್ನೊಂದು ಪಾಸಿಟಿವ್ ಎಂದು ಬಂದಿದೆ.

ದಯವಿಟ್ಟು ನನ್ನ ಕೊರೊನಾ ವರದಿಯ ಬಗ್ಗೆ ಯಾವುದೇ ವದಂತಿಗಳನ್ನು ಹರಡಬೇಡಿ; ವೃದ್ಧಿಮಾನ್ ಸಹಾ
ವೃದ್ಧಿಮಾನ್ ಸಹಾ
ಪೃಥ್ವಿಶಂಕರ
| Edited By: |

Updated on: May 15, 2021 | 12:09 PM

Share

ಐಪಿಎಲ್ 2021ರಲ್ಲಿ ಕೊವಿಡ್ ಪಾಸಿಟಿವ್ ಎಂದು ಕಂಡುಬಂದ ಆಟಗಾರರಲ್ಲಿ ಭಾರತೀಯ ಟೆಸ್ಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ವೃದ್ಧಿಮಾನ್ ಸಹಾ ಒಬ್ಬರು. ಕೊವಿಡ್ 19 ರ ಸತತ ಪ್ರಕರಣಗಳ ನಂತರವೇ ಲೀಗ್‌ನ 14 ನೇ ಆವೃತ್ತಿಯನ್ನು ಅನಿರ್ದಿಷ್ಟವಾಗಿ ಮುಂದೂಡಲಾಯಿತು. ಸಹಾ ಅವರ ಕೊವಿಡ್ ವರದಿ ಶುಕ್ರವಾರ ಮತ್ತೊಮ್ಮೆ ಪಾಸಿಟಿವ್ ಬಂದಿದ್ದು, ಇದರ ನಂತರ ಅವರು ತಮ್ಮ ಬಗ್ಗೆ ವದಂತಿಗಳನ್ನು ಹರಡಬಾರದು ಎಂದು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಮನವಿ ಮಾಡಿದ್ದಾರೆ. ಅವರ ಒಂದು ವರದಿ ಪಾಸಿಟಿವ್ ಆಗಿದ್ದರೆ, ಇನ್ನೊಂದು ವರದಿ ನೆಗೆಟಿವ್ ಆಗಿದೆ ಎಂದು ಸಹಾ ಹೇಳಿದ್ದಾರೆ. ಸಹಾ ಪ್ರಸ್ತುತ ದೆಹಲಿಯಲ್ಲಿ ಕ್ವಾರಂಟೈನ್‌ನಲ್ಲಿದ್ದು, ಮೊದಲಿಗಿಂತ ಉತ್ತಮವಾಗಿದ್ದಾರೆ.

ಸಹಾ ಟ್ವೀಟ್ ಮಾಡಿ, ನನ್ನ ಕ್ವಾರಂಟೈನ್ ಅವಧಿ ಇನ್ನೂ ಮುಗಿದಿಲ್ಲ. ವಾಡಿಕೆಯ ತಪಾಸಣೆಯಂತೆ, ಎರಡು ಪರೀಕ್ಷೆಗಳು ನಡೆದಿವೆ, ಅವುಗಳಲ್ಲಿ ಒಂದು ನೆಗೆಟಿವ್ ಮತ್ತು ಇನ್ನೊಂದು ಪಾಸಿಟಿವ್ ಎಂದು ಬಂದಿದೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ನನ್ನ ಕೊರೊನಾ ವರದಿಯ ಬಗ್ಗೆ ಯಾವುದೇ ವದಂತಿಗಳನ್ನು ಹರಡಬೇಡಿ ಎಂದಿದ್ದಾರೆ.

ಮೇ 4 ರಂದು ಪಾಸಿಟಿವ್ ಮೇ 4 ರಂದು ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಮೊದಲು ಸಹಾ ಕೊರೊನಾ ಪಾಸಿಟಿವ್ ಆಗಿದ್ದರು. ಐಪಿಎಲ್ 2021 ಅನ್ನು ಅದೇ ದಿನ ಮುಂದೂಡಲಾಯಿತು. ಎರಡನೇ ವರದಿಯ ಪಲಿತಾಂಶ ನೆಗೆಟಿವ್ ಬರದ ಕಾರಣ, ಸಹಾ ದೆಹಲಿಯಲ್ಲಿ ಕ್ವಾರಂಟೈನ್ ಅನ್ನು ಮುಂದುವರಿಸಬೇಕಾಗುತ್ತದೆ ಮತ್ತು ಪರೀಕ್ಷೆಯ ಫಲಿತಾಂಶವು ನೆಗೆಟಿವ್ ಆದಾಗ ಮಾತ್ರ ವೈದ್ಯರು ಅವರನ್ನು ಕ್ವಾರಂಟೈನ್​ನಿಂದ ಬಿಡುಗಡೆ ಮಾಡುತ್ತಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ತಂಡ ಆಯ್ಕೆ ಸಹಾ ಶೀಘ್ರವಾಗಿ ಚೇತರಿಸಿಕೊಳ್ಳುತ್ತಾನೆ ಎಂದು ಟೀಮ್ ಇಂಡಿಯಾ ಕೂಡ ಭರವಸೆ ಹೊಂದಿದೆ. ಇತ್ತೀಚೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ಬಿಸಿಸಿಐ ಆಯ್ಕೆ ಮಾಡಿದ ತಂಡದಲ್ಲಿ ಸಹಾ ಕೂಡ ಇದ್ದಾರೆ. ಆದರೆ ಕೊರೊನಾ ಆಗಿರುವುದರಿಂದ ಈಗ ಅವರ ಫಿಟ್‌ನೆಸ್‌ನ ಆಧಾರದ ಮೇಲೆ ಮಾತ್ರ ತಂಡದಲ್ಲಿ ಸ್ಥಾನ ಪಡೆಯುವುದನ್ನು ಖಚಿತಪಡಿಸಲಾಗುತ್ತದೆ. ತಂಡವನ್ನು ಘೋಷಿಸುವಾಗ, ಬಿಸಿಸಿಐ ಸಹಾ ಬಗ್ಗೆ ಇಂಗ್ಲೆಂಡ್‌ಗೆ ತೆರಳುವುದು ಅವರ ಫಿಟ್‌ನೆಸ್‌ನ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿತ್ತು.

ಇದನ್ನೂ ಓದಿ: ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದರು! ಪಾಕ್ ಕ್ರಿಕೆಟಿಗನ ಆರೋಪ; ಐಪಿಎಲ್​ನಲ್ಲಿ ಆಡುವ ಅವಕಾಶ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ