AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final Weather Update: 4ನೇ ದಿನದಾಟಕ್ಕೆ ವರುಣನ ಅಡ್ಡಿ! ಒಂದು ಬಾಲ್ ಆಡುವುದು ಕಷ್ಟವಾಗಿದೆ ಎಂದ ದಿನೇಶ್ ಕಾರ್ತಿಕ್

WTC Final Weather Update: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಟ್ವಿಟ್ಟರ್ ಖಾತೆಯಲ್ಲಿ ಮೈದಾನದ ಇತ್ತೀಚಿನ ಫೋಟೋಗಳನ್ನು ಹಂಚಿಕೊಂಡಿದೆ. ಈ ಚಿತ್ರಗಳಲ್ಲೂ ಸಹ ಮಳೆ ಕಾಟ ಕೊಡುತ್ತಿರುವುದು ಕಂಡು ಬರುತ್ತದೆ.

WTC Final Weather Update: 4ನೇ ದಿನದಾಟಕ್ಕೆ ವರುಣನ ಅಡ್ಡಿ! ಒಂದು ಬಾಲ್ ಆಡುವುದು ಕಷ್ಟವಾಗಿದೆ ಎಂದ ದಿನೇಶ್ ಕಾರ್ತಿಕ್
4ನೇ ದಿನದಾಟಕ್ಕೆ ವರುಣನ ಅಡ್ಡಿ
ಪೃಥ್ವಿಶಂಕರ
|

Updated on: Jun 21, 2021 | 2:40 PM

Share

ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಹವಾಮಾನ ಅಡೆತಡೆಗಳಾದ ಮಳೆ ಮತ್ತು ಕಡಿಮೆ ಸೂರ್ಯನ ಬೆಳಕು ಮೊದಲ ದಿನದಿಂದಲೂ ಸಮಸ್ಯೆಯಾಗಿದೆ. ಮೊದಲ ದಿನ ಇಡೀ ಆಟವು ಮಳೆಯಿಂದಾಗಿ ರದ್ದಾಯಿತು. ಅಂತಿಮವಾಗಿ ಅಂಪೈರ್‌ಗಳು ಎರಡನೇ ದಿನದಲ್ಲಿ ಅನೇಕ ಹಿನ್ನಡೆಗಳ ನಂತರ ಕಳಪೆ ಬೆಳಕಿನಿಂದಾಗಿ 64.4 ಓವರ್‌ಗಳ ನಂತರ ಆಟವನ್ನು ನಿಲ್ಲಿಸಲು ನಿರ್ಧರಿಸಿದರು. ಮೂರು ವಿಕೆಟ್‌ಗಳ ನಷ್ಟಕ್ಕೆ ಭಾರತ ತಂಡ 146 ರನ್ ಗಳಿಸಿತ್ತು. ಮೂರನೇ ದಿನ, ಸೋಮವಾರ, ಇಡೀ ಇನ್ನಿಂಗ್ಸ್ ಅನ್ನು 92.1 ಓವರ್‌ಗಳಿಗೆ ಇಳಿಸಿದ ನಂತರ, ನ್ಯೂಜಿಲೆಂಡ್ 49 ಓವರ್‌ಗಳನ್ನು ಆಡಲು ಸಾಧ್ಯವಾಯಿತು. ನ್ಯೂಜಿಲೆಂಡ್ 116 ರನ್‌ಗಳ ಹಿನ್ನಡೆಯಲ್ಲಿದ್ದರೂ, ಇಂದು ಕೇವಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಪಂದ್ಯಕ್ಕೆ ನಿರ್ಣಾಯಕವಾಗಿದೆ. ಆದರೆ ಸೌತಾಂಪ್ಟನ್‌ನಲ್ಲಿನ ಹವಾಮಾನದ ಇತ್ತೀಚಿನ ಫೋಟೋವೊಂದು ಇಂದಿನ ಪಂದ್ಯದಲ್ಲೂ ಮಳೆ ಬಿಕ್ಕಟ್ಟು ಹೆಚ್ಚುತ್ತಿದೆ ಎಂದು ಬಹಿರಂಗಪಡಿಸಿದೆ.

ದಿನೇಶ್ ಮಾಹಿತಿ ಎರಡನೇ ದಿನದ ಆಟ ಪ್ರಾರಂಭವಾಗುವ ಮೊದಲು, ಹವಾಮಾನ ಪರಿಸ್ಥಿತಿಗಳನ್ನು ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ನೀಡಿದ್ದಾರೆ. ಅವರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಕಾಮೆಂಟೆಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿನೇಶ್ ಅವರು ಮೈದಾನದ ಇತ್ತೀಚಿನ ಫೋಟೋಗಳನ್ನು ಹಂಚಿಕೊಂಡಿದ್ದು, ಸೂರ್ಯ ಉದಯಿಸಿದ್ದಾನೆ ಮತ್ತು ಇಂದಿನ ಆಟ ನಡೆಯಲಿದೆ ಎಂದು ಹೇಳಿದರು. ಆದರೆ ಇದೀಗ ದಿನೇಶ್ ಅವರು ಮೈದಾನದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ಮತ್ತು ಹವಾಮಾನ ಅಷ್ಟು ಸೂಕ್ತವಾಗಿಲ್ಲ ಎಂದು ಶೀರ್ಷಿಕೆ ನೀಡಿದ್ದಾರೆ.

ಬಿಸಿಸಿಐ ಕೂಡ ಫೋಟೋಗಳನ್ನು ಹಂಚಿಕೊಂಡಿದೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಟ್ವಿಟ್ಟರ್ ಖಾತೆಯಲ್ಲಿ ಮೈದಾನದ ಇತ್ತೀಚಿನ ಫೋಟೋಗಳನ್ನು ಹಂಚಿಕೊಂಡಿದೆ. ಈ ಚಿತ್ರಗಳಲ್ಲೂ ಸಹ ಮಳೆ ಕಾಟ ಕೊಡುತ್ತಿರುವುದು ಕಂಡು ಬರುತ್ತದೆ.

ಪಂದ್ಯದ ಮಾಹಿತಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ (ಡಬ್ಲ್ಯುಟಿಸಿ ಫೈನಲ್ 2021) ನ್ಯೂಜಿಲೆಂಡ್ ಬಲವಾದ ಹಿಡಿತವನ್ನು ಹೊಂದಿದೆ. ಪಂದ್ಯದ ಮೂರನೇ ದಿನದಲ್ಲಿ ಕಿವಿ ಆಟಗಾರರು ಸಂಪೂರ್ಣವಾಗಿ ಪ್ರಾಬಲ್ಯ ಹೊಂದಿದ್ದರು. ಇದಕ್ಕೂ ಮುನ್ನ ನ್ಯೂಜಿಲೆಂಡ್ ಬೌಲರ್‌ಗಳು ಭಾರತವನ್ನು 217 ರನ್‌ಗಳಿಗೆ ಆಲೌಟ್ ಮಾಡಿದರು. ಅದರ ನಂತರ, ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಮೂರನೇ ದಿನದ ಅಂತ್ಯದ ವೇಳೆಗೆ ನ್ಯೂಜಿಲೆಂಡ್ ಎರಡು ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಭಾರತ ಪ್ರಸ್ತುತ 116 ರನ್‌ಗಳ ಮುನ್ನಡೆ ಹೊಂದಿದೆ. ಆದರೆ ಭಾರತ 49 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ಗಳನ್ನು ಕಬಳಿಸಿದೆ. ಹೀಗಾಗಿ ನ್ಯೂಜಿಲೆಂಡ್ ಪ್ರಸ್ತುತ ಪಂದ್ಯದಲ್ಲಿ ಮುನ್ನಡೆ ಸಾಧಿಸಿದೆ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್