AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದ್ರೆ ಆಟಗಾರ ಸರಣಿಯಿಂದಲೇ ಔಟ್! ಕೊಹ್ಲಿ ಪಡೆಗೆ ಖಡಕ್ ವಾರ್ನಿಂಗ್ ನೀಡಿದ ಬಿಸಿಸಿಐ

ಇಂಗ್ಲೆಂಡ್ಗೆ ತೆರಳೋದಕ್ಕಿಂತ ಮುಂಚೆ ಕೊಹ್ಲಿ ಪಡೆ ಮುಂಬೈನಲ್ಲಿ 14 ದಿನಗಳ ಕ್ವಾರಂಟೈನ್ ಆಗಲಿದೆ. ಈ ಸಮಯದಲ್ಲಿ ಯಾವುದಾದ್ರೂ ಆಟಗಾರನಿಗೆ ಕೊರೊನಾ ಬಂದ್ರೆ, ಆತ ಇಂಗ್ಲೆಂಡ್ ಸರಣಿಯಿಂದಲೇ ಹೊರ ಬೀಳಲಿದ್ದಾನೆ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ಬಂದ್ರೆ ಆಟಗಾರ ಸರಣಿಯಿಂದಲೇ ಔಟ್! ಕೊಹ್ಲಿ ಪಡೆಗೆ ಖಡಕ್ ವಾರ್ನಿಂಗ್ ನೀಡಿದ ಬಿಸಿಸಿಐ
ಬಿಸಿಸಿಐ ಆಡಳಿತ ಮಂಡಳಿ
ಪೃಥ್ವಿಶಂಕರ
|

Updated on: May 12, 2021 | 4:31 PM

Share

ಕೊರೊನಾ ಅಟ್ಟಹಾಸಕ್ಕೆ ಬಿಸಿಸಿಐ ಪಾಲಿಗೆ ಚಿನ್ನದ ಮೊಟ್ಟೆಯಿಡುವ ಕೋಳಿ ಎನಿಸಿಕೊಂಡಿರುವ ಐಪಿಎಲ್ ಟೂರ್ನಿಯನ್ನ ಮುಂದೂಡಲಾಗಿದೆ. ಹೀಗಾಗಿ ಬಿಸಿಸಿಐ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಇಂಗ್ಲೆಂಡ್ ಪ್ರವಾಸದ ಹಿನ್ನಲೆಯಲ್ಲೇ, ಕೊಹ್ಲಿ ಹುಡುಗರಿಗೆ ಖಡಕ್ ವಾರ್ನಿಂಗ್ ನೀಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಬಳಿಕ ಟೀಮ್ ಇಂಡಿಯಾ, ಇಂಗ್ಲೆಂಡ್ ಪ್ರವಾಸದಲ್ಲಿ ಐದು ಟೆಸ್ಟ್ ಪಂದ್ಯಗಳನ್ನಾಡಿದೆ. ಈಗಾಗಲೇ ಆಯ್ಕೆ ಸಮಿತಿ ಇಂಗ್ಲೆಂಡ್ ಪ್ರವಾಸಕ್ಕೆ ಕೊಹ್ಲಿ ಸೈನ್ಯವನ್ನ ಪ್ರಕಟಿಸಿದೆ. ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್ಗೆ ಪ್ರಯಾಣಿಸಲಿದೆ.

ಕೊರೊನಾ ಬಂದ್ರೆ ಆಟಗಾರ ಸರಣಿಯಿಂದಲೇ ಔಟ್! ಆದ್ರೀಗ ಬಿಸಿಸಿಐ, ಇಂಗ್ಲೆಂಡ್ಗೆ ತೆರಳೋಕು ಮುನ್ನ ಕೊಹ್ಲಿ ಪಡೆಗೆ ಬಿಗ್ ಶಾಕ್ ನೀಡಿದೆ. ಇಂಗ್ಲೆಂಡ್ಗೆ ತೆರಳೋದಕ್ಕಿಂತ ಮುಂಚೆ ಕೊಹ್ಲಿ ಪಡೆ ಮುಂಬೈನಲ್ಲಿ 14 ದಿನಗಳ ಕ್ವಾರಂಟೈನ್ ಆಗಲಿದೆ. ಈ ಸಮಯದಲ್ಲಿ ಯಾವುದಾದ್ರೂ ಆಟಗಾರನಿಗೆ ಕೊರೊನಾ ಬಂದ್ರೆ, ಆತ ಇಂಗ್ಲೆಂಡ್ ಸರಣಿಯಿಂದಲೇ ಹೊರ ಬೀಳಲಿದ್ದಾನೆ ಎಂದು ಎಚ್ಚರಿಕೆ ನೀಡಿದೆ.

ಮುಂಬೈನಲ್ಲಿ 14 ದಿನಗಳ ಕ್ವಾರಂಟೈನ್ನಲ್ಲಿರುವ ಟೀಮ್ ಇಂಡಿಯಾ ಆಟಗಾರರಿಗೆ 2 ಬಾರಿ RTPCR ಟೆಸ್ಟ್ ಮಾಡಲಾಗುತ್ತೆ. ಈ ವೇಳೆ ಯಾರಿಗೇ ಪಾಸಿಟಿವ್ ಬಂದ್ರೂ, ಆ ಆಟಗಾರ ಭಾರತದಲ್ಲೇ ಉಳಿಯಲಿದ್ದಾನೆ. ಒಂದು ವೇಳೇ ಆತ ಚೇತರಿಸಿಕೊಂಡ್ರೂ, ಇಂಗ್ಲೆಂಡ್ ಪ್ರವಾಸಕ್ಕೆ ಕಳುಹಿಸಿಕೊಡೋದಿಲ್ಲ ಎಂದು ಖಡಕ್ ಆಗಿ ಹೇಳಿದೆ.

ಇನ್ನು ಇಂಗ್ಲೆಂಡ್ಗೆ ತೆರಳಿದ ಬಳಿಕ ಟೀಮ್ ಇಂಡಿಯಾ 10 ದಿನ ಕ್ವಾರಂಟೈನ್ ಆಗಿರಲಿದೆ. ಹೀಗಾಗಿ ಕೊಹ್ಲಿ ಪಡೆ ಇಂಗ್ಲೆಂಡ್ ಪ್ರವಾಸಕ್ಕಾಗಿ ಎಚ್ಚರಿಕೆಯಿಂದ ಇರಬೇಕು. ಮುಂಬೈನಲ್ಲಿ ಕ್ವಾರಂಟೈನ್ ಆಗುವವರೆಗೂ ಎಲ್ಲಿಗೂ ತೆರಳದೆ ಮನೆಯಲ್ಲೇ ಸುರಕ್ಷಿತವಾಗಿರಬೇಕು ಅನ್ನೋದು ಬಿಸಿಸಿಐ ಉದ್ದೇಶವಾಗಿದೆ.

ಇದನ್ನೂ ಓದಿ:ಜುಲೈ ತಿಂಗಳಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ; ಕೊಹ್ಲಿ, ರೋಹಿತ್, ಬುಮ್ರಾ ಇಲ್ಲದ ಬಲಿಷ್ಠ ತಂಡ ಕಟ್ಟಿದ ಬಿಸಿಸಿಐ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!