AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್

WTC Final: ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು.

WTC Final: ಮೊದಲ ಸೆಷನ್ ಮುಕ್ತಾಯ; ಭಾರತಕ್ಕೆ ಆರಂಭಿಕ ಆಘಾತ! ರೋಹಿತ್- ಗಿಲ್ ಔಟ್
ಶುಭ್​ಮನ್ ಗಿಲ್
ಪೃಥ್ವಿಶಂಕರ
|

Updated on: Jun 19, 2021 | 5:19 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂತಿಮವಾಗಿ ಇಂದು ಪ್ರಾರಂಭವಾಗಿದೆ. ಇದು ಜೂನ್ 18 ಶುಕ್ರವಾರದಿಂದ ಸೌತಾಂಪ್ಟನ್ನಲ್ಲಿ ಪ್ರಾರಂಭವಾಗಬೇಕಿತ್ತು, ಆದರೆ ಮೊದಲ ದಿನ ಮಳೆಯಿಂದಾಗಿ ಸಂಪೂರ್ಣವಾಗಿ ರದ್ದಾಯಿತು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ತಂಡದ ಆಡುವ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಗಳಿಲ್ಲ. ರೋಹಿತ್ ಶರ್ಮಾ-ಶುಬ್ಮನ್ ಗಿಲ್ ಜೋಡಿ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಓಪನ್ ಮಾಡಿತು ಮತ್ತು ಇಬ್ಬರೂ ಉತ್ತಮ ಆರಂಭವನ್ನು ನೀಡಿ 62 ರನ್ ಸೇರಿಸಿದರು. ಆದರೆ, ಮೊದಲ ಸೆಷನ್‌ನ ಕೊನೆಯ ಅರ್ಧ ಘಂಟೆಯಲ್ಲಿ ಭಾರತ ಎರಡೂ ವಿಕೆಟ್‌ಗಳನ್ನು ಕಳೆದುಕೊಂಡಿತು.

62 ರನ್‌ಗಳ ಆರಂಭಿಕ ಪಾಲುದಾರಿಕೆ ಮೊದಲ ಸೆಷನ್ ಆಟ ಮುಗಿದಿದೆ. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರ 62 ರನ್‌ಗಳ ಆರಂಭಿಕ ಪಾಲುದಾರಿಕೆಯ ಆಧಾರದ ಮೇಲೆ ಭಾರತ ಈ ಸೆಷನ್​ನನ್ನು ಮೊದಲ ಒಂದೂವರೆ ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡಿತು. ಆದರೆ, ಕೈಲ್ ಜಾಮಿಸನ್ ಮತ್ತು ನೀಲ್ ವ್ಯಾಗ್ನರ್ ರೋಹಿತ್ ಮತ್ತು ಶುಬ್ಮನ್ ವಿಕೆಟ್ ಕಬಳಿಸಿ ಭಾರತಕ್ಕೆ ಶಾಕ್ ನೀಡಿದರು. ಭಾರತದ ಭರವಸೆಯು ವಿರಾಟ್ ಕೊಹ್ಲಿ (ಔಟಾಗದೆ 6) ಮತ್ತು ಚೇತೇಶ್ವರ ಪೂಜಾರ (0 ನಾಟ್ ಔಟ್) ಮೇಲೆ ಉಳಿದಿದೆ ಮತ್ತು ಅವರು ಊಟದ ನಂತರ ಎರಡನೇ ಸೆಷನ್​ನಲ್ಲಿ ಉತ್ತಮ ಪಾಲುದಾರಿಕೆಯನ್ನು ನಿರ್ಮಿಸಬೇಕಾಗುತ್ತದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್