AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಹಳೆ ಜರ್ಸಿ ತೊಟ್ಟು ಮೈದಾನಕ್ಕಿಳಿದ ಬುಮ್ರಾ! ಪಂದ್ಯದ ಮಧ್ಯದಲ್ಲಿ ಡ್ರೆಸಿಂಗ್​ ರೂಂಗೆ ಓಡಿದ ಯಾರ್ಕರ್ ಕಿಂಗ್

WTC Final: ದಿನದ ಮೊದಲ ಓವರನ್ನು ಹಳೆಯ ಜರ್ಸಿಯೊಂದಿಗೆ ಬೌಲ್ ಮಾಡಿದರು. ತನ್ನ ತಪ್ಪಿನ ಅರಿವಾದ ಬಳಿಕ ಬುಮ್ರಾ ಜರ್ಸಿ ಬದಲಾವಣೆಗಾಗಿ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗಿದರು.

WTC Final: ಹಳೆ ಜರ್ಸಿ ತೊಟ್ಟು ಮೈದಾನಕ್ಕಿಳಿದ ಬುಮ್ರಾ! ಪಂದ್ಯದ ಮಧ್ಯದಲ್ಲಿ ಡ್ರೆಸಿಂಗ್​ ರೂಂಗೆ ಓಡಿದ ಯಾರ್ಕರ್ ಕಿಂಗ್
ಹಳೆ ಜರ್ಸಿ ತೊಟ್ಟು ಮೈದಾನಕ್ಕಿಳಿದ ಬುಮ್ರಾ
ಪೃಥ್ವಿಶಂಕರ
|

Updated on: Jun 22, 2021 | 8:37 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯದ 5ನೇ ದಿನದಾಟ ಮಂಗಳವಾರ ಪುನರಾರಂಭವಾಯಿತು. ಮಳೆಯಿಂದಾಗಿ ಐದನೇ ದಿನದಾಟ ಒಂದು ಗಂಟೆ ತಡವಾಗಿ ಆರಂಭವಾಯಿತು. ಆದರೆ ಕ್ರಿಕೆಟ್‌ ಆರಂಭವಾದ ಕೂಡಲೇ ಒಂದು ಹಾಸ್ಯಸ್ಪದ ಪ್ರಸಂಗವೊಂದು ನಡೆಯಿತು. ಭಾರತದ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯದಲ್ಲಿ ಇದುವರೆಗೂ ಯಾವುದೇ ವಿಕೆಟ್ ಬಿದ್ದಿಲ್ಲ. ಹಾಗಾಗಿ ಬುಮ್ರಾ ಸ್ವಲ್ಪ ಮಂಕಾಗಿರುವುದು ಕಂಡುಬರುತ್ತಿದೆ. ಆದರೆ ಬುಮ್ರಾ ಸುದ್ದಿಯಾಗಿರುವುದು ಈ ವಿಚಾರಕಲ್ಲ. ಬದಲಿಗೆ ಈ ಪಂದ್ಯಕ್ಕೆಂದು ನೀಡಿರುವ ಹೊಸ ಜರ್ಸಿಯ ಬದಲಿಗೆ ಹಳೆಯ ಜರ್ಸಿ ತೊಟ್ಟು ಮೈದಾನಕ್ಕಿಳಿದಿದ್ದರು.

ಬುಮ್ರಾ ಮಾಡಿದ ಯಡವಟ್ಟೇನು? ಅವರು ದಿನದ ಮೊದಲ ಓವರನ್ನು ಹಳೆಯ ಜರ್ಸಿಯೊಂದಿಗೆ ಬೌಲ್ ಮಾಡಿದರು. ತನ್ನ ತಪ್ಪಿನ ಅರಿವಾದ ಬಳಿಕ ಬುಮ್ರಾ ಜರ್ಸಿ ಬದಲಾವಣೆಗಾಗಿ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗಿದರು. ನಂತರ ಬುಮ್ರಾ ಸರಿಯಾದ ಜರ್ಸಿಯೊಂದಿಗೆ ಮೈದಾನಕ್ಕೆ ವಾಪಸ್ಸಾದರು. ತಮ್ಮ ಬೌಲಿಂಗ್​ ಅನ್ನು ಮುಂದುವರೆಸಿದರು.

ಐಸಿಸಿ ಆಯೋಜಿಸುವ ಯಾವುದೇ ಪಂದ್ಯಾವಳಿಯಲ್ಲೂ ದೇಶದ ಹೆಸರನ್ನು ಜರ್ಸಿಯ ಮಧ್ಯದಲ್ಲಿ ಮುದ್ರಿಸಲಾಗುತ್ತದೆ. ಹಾಗೆಯೇ ಪ್ರಾಯೋಜಕ ಕಂಪನಿಯ ಹೇಸರನ್ನು ತೋಳುಗಳಲ್ಲಿ ಮುದ್ರಿಸಲಾಗುತ್ತದೆ. ಸೀಮಿತ ಓವರ್‌ಗಳ ವಿಶ್ವಕಪ್್​ನಲ್ಲಿ ಈ ರೀತಿಯಾಗಿ ಮಾಡಲಾಗುತ್ತಿತ್ತು. ಅಲ್ಲದೆ ಟೆಸ್ಟ್ ಸ್ವರೂಪದಲ್ಲಿ ಐಸಿಸಿ ಮೊದಲ ಬಾರಿಗೆ ಈ ರೀತಿಯ ಕ್ರಮವನ್ನು ಕೈಗೊಂಡಿದೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಗೊಂದಲಕ್ಕೀಡಾಗಿರಬೇಕು ಎಂಬುದು ನಾವು ಊಹಿಸಿಕೊಳ್ಳಬೇಕಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!