AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ವರುಣನ ಅಡ್ಡಿ, ಸೌತಾಂಪ್ಟನ್‌ನಲ್ಲಿ ನಿಲ್ಲದ ಮಳೆ! ಮೊದಲ ದಿನದ ಆಟ ಸ್ಥಗಿತ

WTC Final: ಸೌತಾಂಪ್ಟನ್‌ನಲ್ಲಿ ನಿರಂತರ ಮಳೆಯಿಂದಾಗಿ, ಟಾಸ್ ಅಥವಾ ಮೊದಲ ಸೆಷನ್ ಆಡಲಾಗಲಿಲ್ಲ. ನಿರಂತರ ಮಳೆಯಿಂದಾಗಿ ಮೊದಲ ದಿನದ ಆಟವನ್ನು ರದ್ದುಗೊಳಿಸಿ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ.

WTC Final: ಡಬ್ಲ್ಯೂಟಿಸಿ ಫೈನಲ್​ಗೆ ವರುಣನ ಅಡ್ಡಿ, ಸೌತಾಂಪ್ಟನ್‌ನಲ್ಲಿ ನಿಲ್ಲದ ಮಳೆ! ಮೊದಲ ದಿನದ ಆಟ ಸ್ಥಗಿತ
ಪೃಥ್ವಿಶಂಕರ
|

Updated on:Jun 18, 2021 | 7:58 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2021 ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (ಭಾರತ ವಿರುದ್ಧ ನ್ಯೂಜಿಲೆಂಡ್) ಮುಖಾಮುಖಿಯಾಗಿದೆ. ಮಳೆಯಿಂದಾಗಿ ಮೊದಲ ದಿನದ ಆಟವು ಕೆಟ್ಟ ಪರಿಣಾಮ ಬೀರಿದೆ. ಹೀಗಾಗಿ ಮೊದಲ ದಿನದ ಆಟವನ್ನು ಆಡಳಿತ ಮಂಡಳಿ ಸ್ಥಗಿತಗೊಳಿಸಿದೆ. ಸೌತಾಂಪ್ಟನ್‌ನಲ್ಲಿ ನಿರಂತರ ಮಳೆಯಿಂದಾಗಿ, ಟಾಸ್ ಅಥವಾ ಮೊದಲ ಸೆಷನ್ ಆಡಲಾಗಲಿಲ್ಲ. ಆಟಗಾರರು ಮತ್ತು ಅಭಿಮಾನಿಗಳು ಎಲ್ಲರೂ ಮಳೆ ನಿಲ್ಲುವವರೆಗೆ ಕಾಯುತ್ತಿದ್ದರು. ಆದರೆ ನಿರಂತರ ಮಳೆಯಿಂದಾಗಿ ಮೊದಲ ದಿನದ ಆಟವನ್ನು ರದ್ದುಗೊಳಿಸಿ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ.

ನಾಳೆ ಭಾರತದ ಕಾಲಮಾನದ ಪ್ರಕಾರ 3 ಗಂಟೆಗೆ ಆಟ ಪ್ರಾರಂಭ ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ದುರದೃಷ್ಟವಶಾತ್, ಮಳೆಯಿಂದಾಗಿ ಮೊದಲ ದಿನದ ಆಟವನ್ನು ರದ್ದುಪಡಿಸಲಾಗಿದೆ. ನಾಳೆ ಸ್ಥಳೀಯ ಸಮಯ ಬೆಳಿಗ್ಗೆ 10.30 ಕ್ಕೆ (ಭಾರತದ ಕಾಲಮಾನದ ಪ್ರಕಾರ 3 ಗಂಟೆ) ಆಟ ಪ್ರಾರಂಭವಾಗಲಿದೆ. ಜೂನ್ 18 ರಂದು ನಿರಂತರವಾಗಿ ಮಳೆಯಾಯಿತು. ಹಿಂದಿನ ದಿನ ಅಂದರೆ ಜೂನ್ 17 ರಂದು ಮಳೆ ರಾತ್ರಿಯಿಡಿ ಸೌತಾಂಪ್ಟನ್ನಲ್ಲಿ ನಿರಂತರವಾಗಿ ಬೀಳುತ್ತಿತ್ತು.ಇದರಿಂದ ಪಿಚ್​ ಕೂಡ ನೀರಿನಿಂದ ತುಂಬಿತ್ತು.

ಈ ನಡುವೆ ಸ್ವಲ್ಪ ಸಮಯ ಮಳೆ ನಿಂತಿತ್ತು. ನಂತರ ನೀರನ್ನು ಮೈದಾನದಿಂದ ಹೊರಹಾಕಲು ಪ್ರಯತ್ನಿಸಲಾಯಿತು. ಇಷ್ಟರಲ್ಲಾಗಲೇ, ಊಟದ ವಿರಾಮವೂ ಮುಗಿದು ಹೋಗಿತ್ತು. ಹೀಗಾಗಿ ಭಾರತೀಯ ಸಮಯ ಸಂಜೆ 7.30 ಕ್ಕೆ ಪಿಚ್​ ಪರೀಕ್ಷಿಸಲು ನಿರ್ಧರಿಸಲಾಯಿತು. ಆದರೆ ಮತ್ತೆ ಮಳೆ ಬರಲಾರಂಭಿಸಿತು. ಹೀಗಾಗಿ ಮೊದಲ ದಿನದ ಆಟ ರದ್ದಾಯಿತು. ಈಗ ಮೊದಲ ದಿನದ ಓವರ್‌ಗಳನ್ನು ಮೀಸಲು ದಿನದಂದು ಮಾಡಬಹುದು. ಮಳೆಯ ಸಾಧ್ಯತೆಯಿಂದಾಗಿ, ಈ ಟೆಸ್ಟ್​ಗೆ ಒಂದು ದಿನವನ್ನು ಕಾಯ್ದಿರಿಸಲಾಗಿದೆ.

ಮಳೆ ಮುಂದುವರಿಯುವ ನಿರೀಕ್ಷೆಯಿದೆ ಮುಂದಿನ ನಾಲ್ಕು ದಿನಗಳಲ್ಲಿ ಪ್ರತಿದಿನ 98 ಓವರ್‌ಗಳನ್ನು ಆಡಲಾಗುವುದು ಎಂದು ಹೇಳಲಾಗಿದೆ. ಇದರ ನಂತರ ಉಳಿದಿರುವ ಓವರ್‌ಗಳು ಮೀಸಲು ದಿನದಂದು ಪೂರ್ಣಗೊಳ್ಳುತ್ತವೆ. ಆದಾಗ್ಯೂ, ಸೌತಾಂಪ್ಟನ್‌ನಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿರುವುದರಿಂದ ಇದು ಕೂಡ ಕಡಿಮೆ. ಮುಂದಿನ ದಿನಗಳಲ್ಲಿ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯದ ಫಲಿತಾಂಶದ ಬಗ್ಗೆ ಅನುಮಾನವಿದೆ. ಭಾರತ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಮೊದಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಪಡೆಯುವ ಸಾಧ್ಯತೆ ಇದೆ.

Published On - 7:34 pm, Fri, 18 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ