AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ವಿಲಿಯಮ್ಸನ್​ನನ್ನು ಪೆವಿಲಿಯನ್​ಗೆ ಕಳುಹಿಸಿ! ಸೋನು ಸೂದ್ ಬಳಿ ಮನವಿ ಮಾಡಿದ ಅಭಿಮಾನಿ.. ಸೋನು ಉತ್ತರ ಹೀಗಿತ್ತು

WTC Final: ಅಭಿಮಾನಿಯ ಈ ಮನವಿಗೆ ಉತ್ತರಿಸಿದ ಸೋನು, ನಮ್ಮ ತಂಡದಲ್ಲಿ ಅನೇಕ ಅನುಭವಿಗಳು ಇದ್ದಾರೆ. ಖಂಡಿತವಾಗಿಯೂ ವಿಲಿಯಮ್ಸನ್ ಅವರನ್ನು ಪೆವಿಲಿಯನ್​ಗೆ ಕಳುಹಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

WTC Final: ವಿಲಿಯಮ್ಸನ್​ನನ್ನು ಪೆವಿಲಿಯನ್​ಗೆ ಕಳುಹಿಸಿ! ಸೋನು ಸೂದ್ ಬಳಿ ಮನವಿ ಮಾಡಿದ ಅಭಿಮಾನಿ.. ಸೋನು ಉತ್ತರ ಹೀಗಿತ್ತು
ಸೋನು ಸೂದ್, ಕೇನ್ ವಿಲಿಯಮ್ಸನ್
ಪೃಥ್ವಿಶಂಕರ
|

Updated on: Jun 23, 2021 | 7:28 PM

Share

ಡಬ್ಲ್ಯುಟಿಸಿ ಫೈನಲ್ ಪಂದ್ಯದ ಐದನೇ ದಿನದಂದು ಭಾರತೀಯ ಬೌಲರ್‌ಗಳು ನ್ಯೂಜಿಲೆಂಡ್ ತಂಡವನ್ನು 249 ಕ್ಕೆ ಆಲೌಟ್ ಮಾಡಿದ್ದರು. ಒಟ್ಟಾರೆಯಾಗಿ, ಭಾರತೀಯ ಬೌಲರ್‌ಗಳು ಬೆವರು ಸುರಿಸಿ ಕಿವೀಸ್ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಸೇರಿಸಿದರು. ಆದಾಗ್ಯೂ, ಸೌತಾಂಪ್ಟನ್‌ನಂತಹ ಪರಿಸ್ಥಿತಿಗಳಲ್ಲಿ ಕಿವಿಸ್ ನಾಯಕ ವಿಲಿಯಮ್ಸನ್‌ರನ್ನು ಔಟ್​ ಮಾಡಿ ಪೆವಿಲಿಯನ್​ಗೆ ಕಳುಹಿಸುವುದು ಸುಲಭದ ಮಾತಾಗಿರಲಿಲ್ಲ.

ವಿಲಿಯಮ್ಸನ್ ಬೆಸ್ಟ್ ಬ್ಯಾಟಿಂಗ್ ನ್ಯೂಜಿಲೆಂಡ್ ನಾಯಕ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಇತರ ವೇಗಿಗಳ ವಿರುದ್ಧ ದೃಢವಾಗಿ ನಿಂತು ಆಡಿದರು. ಕೆಟ್ಟ ಚೆಂಡುಗಳನ್ನು ಬೌಂಡರಿಗೆ ಅಟ್ಟುವುದರೊಂದಿಗೆ ಸ್ಕೋರ್ ಬೋರ್ಡ್‌ ಹೆಚ್ಚಿಸುತ್ತಿದ್ದರು. ಇನ್ನೊಂದು ತುದಿಯಲ್ಲಿ ವಿಕೆಟ್‌ಗಳು ಬೀಳುತ್ತಿದ್ದರೆ .. ಅವರು ಯಾವುದೇ ಹಿಂಜರಿಕೆಯಿಲ್ಲದೆ ರನ್ ಗಳಿಸಿದರು. ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಲಿಯಮ್ಸನ್ ಬ್ಯಾಟಿಂಗ್ ನೋಡಿದಾಗ ಆತಂಕಗೊಂಡರು. ಇದರಿಂದ ಆತಂಕಗೊಂಡಿದ್ದ ಒಬ್ಬ ಅಭಿಮಾನಿ ಮಾತ್ರ ಸೋನು ಸೂದ್ ಗೆ ಟ್ವೀಟ್ ಮಾಡಿ ವಿಲಿಯಮ್ಸನ್‌ನನ್ನು ಪೆವಿಲಿಯನ್‌ಗೆ ಕಳುಹಿಸುವಂತೆ ನಟನನ್ನು ಮನವಿ ಮಾಡಿದ್ದಾನೆ. ಹಲೋ ಸೋನುಸೂದ್, ದಯವಿಟ್ಟು ವಿಲಿಯಮ್ಸನ್ ಅವರನ್ನು ಪೆವಿಲಿಯನ್ಗೆ ಕಳುಹಿಸಿ” ಎಂದು ಆತ ಟ್ವೀಟ್ ಮಾಡಿದ್ದಾನೆ.

ಸೋನು ಉತ್ತರ ಏನಾಗಿತ್ತು? ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಟ್ವಿಟ್ಟರ್ನಲ್ಲಿ ಸಹಾಯ ಕೇಳಿದವರಿಗೆ ಸೋನು ಸೂದ್ ತಕ್ಷಣವೇ ಪ್ರತಿಕ್ರಿಯಿಸುತ್ತಿದ್ದರು ಮತ್ತು ಸೂಕ್ತವಾಗಿ ಸಹಾಯವನ್ನು ನೀಡಿದರು. ಅಭಿಮಾನಿಯ ಈ ಮನವಿಗೆ ಉತ್ತರಿಸಿದ ಸೋನು, ನಮ್ಮ ತಂಡದಲ್ಲಿ ಅನೇಕ ಅನುಭವಿಗಳು ಇದ್ದಾರೆ. ಖಂಡಿತವಾಗಿಯೂ ವಿಲಿಯಮ್ಸನ್ ಅವರನ್ನು ಪೆವಿಲಿಯನ್ ಕಳುಹಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ವಿಲಿಯಮ್ಸನ್ 49 ರನ್ ಗಳಿಸಿ ಔಟಾದರು. ಇಶಾಂತ್, ಕೇನ್ ಅರ್ಧಶತಕ ಮಾಡುವುದನ್ನು ತಪ್ಪಿಸಿದರು. ನಂತರ ಶಮಿ (ನಾಲ್ಕು ವಿಕೆಟ್‌ಗಳೊಂದಿಗೆ) ನ್ಯೂಜಿಲೆಂಡ್‌ನ್ನು 249 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ