AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಜಡೇಜಾ ಆಲ್​ರೌಂಡರ್ ಕೋಟಾದಲ್ಲಿ ಆಯ್ಕೆಯಾಗಿರಲಿಲ್ಲ! ಟೀಂ ಇಂಡಿಯಾ ಸೋಲಿಗೆ ಕಾರಣ ವಿವರಿಸಿದ ಸಂಜಯ್ ಮಂಜ್ರೇಕರ್

WTC Final: ಭಾರತ ಜಡೇಜಾನನ್ನು ಎಡಗೈ ಸ್ಪಿನ್‌ ಆಗಿ ಆಯ್ಕೆ ಮಾಡಲಾಗಿಲ್ಲ. ಅವರು ತಮ್ಮ ಬ್ಯಾಟಿಂಗ್‌ಗೆ ಆಯ್ಕೆಯಾದರು. ಆದ್ದರಿಂದ ಈ ಆಯ್ಕೆಯ ಬಗ್ಗೆ ನಾನು ಯಾವಾಗಲೂ ವಿರುದ್ಧವಾಗಿರುತ್ತೇನೆ ಎಂದಿದ್ದಾರೆ.

WTC Final: ಜಡೇಜಾ ಆಲ್​ರೌಂಡರ್ ಕೋಟಾದಲ್ಲಿ ಆಯ್ಕೆಯಾಗಿರಲಿಲ್ಲ! ಟೀಂ ಇಂಡಿಯಾ ಸೋಲಿಗೆ ಕಾರಣ ವಿವರಿಸಿದ ಸಂಜಯ್ ಮಂಜ್ರೇಕರ್
ರವೀಂದ್ರ ಜಡೇಜಾ
ಪೃಥ್ವಿಶಂಕರ
|

Updated on: Jun 25, 2021 | 5:44 PM

Share

ಸೌತಾಂಪ್ಟನ್‌ನಲ್ಲಿ ನಡೆದ ಟೆಸ್ಟ್ ಕ್ರಿಕೆಟ್‌ನ ವಿಶ್ವ ಚಾಂಪಿಯನ್ ಆಗುವ ಉತ್ತಮ ಅವಕಾಶವನ್ನು ಭಾರತೀಯ ಕ್ರಿಕೆಟ್ ತಂಡ ಕಳೆದುಕೊಂಡಿತು. ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ನ್ಯೂಜಿಲೆಂಡ್ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಎರಡೂ ತಂಡಗಳು ಉತ್ತಮ ಆಟ ತೋರಿಸಿದರೂ ನ್ಯೂಜಿಲೆಂಡ್ ಜಯಗಳಿಸಿತು. ಭಾರತೀಯ ತಂಡದ ಸೋಲಿನ ನಂತರ, ಸೋಲಿಗೆ ಕಾರಣಗಳನ್ನು ಚರ್ಚಿಸಲಾಗುತ್ತಿದೆ. ಇದರಲ್ಲಿ ಪ್ರಮುಖ ಕಾರಣ ಭಾರತದ ಆಡುವ ಇಲೆವೆನ್, ಇದು ಮೊದಲಿನಿಂದಲೂ ಹೆಚ್ಚು ಚರ್ಚೆಯಾಗಿತ್ತು. ಈಗ ಪಂದ್ಯದ ಫಲಿತಾಂಶದ ನಂತರ ಮಾಜಿ ಕ್ರಿಕೆಟಿಗ ಮತ್ತು ನಿರೂಪಕ ಸಂಜಯ್ ಮಂಜ್ರೇಕರ್ ಈ ವಿಷಯವನ್ನು ಎತ್ತಿದ್ದಾರೆ ಮತ್ತು ರವೀಂದ್ರ ಜಡೇಜಾ ಅವರನ್ನು ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡುವುದು ತಪ್ಪು ಎಂದು ಹೇಳಿದ್ದಾರೆ.

ಜೂನ್ 18 ರಂದು ಪ್ರಾರಂಭವಾದ ಫೈನಲ್‌ಗೆ ಒಂದು ದಿನ ಮೊದಲು ಭಾರತ ತಂಡ ಇಡುವ ಇಲೆವೆನ್ ಘೋಷಿಸಿತ್ತು. ತಂಡದಲ್ಲಿ ಮೂವರು ವೇಗದ ಬೌಲರ್‌ಗಳು ಮತ್ತು ಇಬ್ಬರು ಸ್ಪಿನ್ನರ್-ಆಲ್‌ರೌಂಡರ್‌ಗಳು ಇದ್ದರು. ಇಎಸಿಪಿಎನ್-ಕ್ರಿಕ್ಇನ್‌ಫೊ ಜೊತೆ ಮಾತನಾಡಿದ ಮಂಜ್ರೇಕರ್, ಇಬ್ಬರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡುವುದು ಮತ್ತು ಜಡೇಜಾ ಅವರನ್ನು ಬ್ಯಾಟ್ಸ್‌ಮನ್ ಓವರ್ ಸ್ಪಿನ್ನರ್ ಆಗಿ ಆಯ್ಕೆ ಮಾಡುವುದು ದೊಡ್ಡ ತಪ್ಪು, ಇದನ್ನು ತಪ್ಪಿಸಬೇಕಾಗಿತ್ತು ಎಂದಿದ್ದಾರೆ. ಈ ಬಗ್ಗೆ ಮಾತನಾಡಿದ ಮಂಜ್ರೇಕರ್, ಭಾರತ ತಮ್ಮ ಬ್ಯಾಟಿಂಗ್‌ಗಾಗಿ ಒಬ್ಬ ಆಟಗಾರನನ್ನು (ಸ್ಪಿನ್ನರ್) ಆಯ್ಕೆ ಮಾಡಿದರು, ಅದು ಜಡೇಜಾ ಆಗಿದ್ದರು. ಆದರೆ ಭಾರತ ಜಡೇಜಾನನ್ನು ಎಡಗೈ ಸ್ಪಿನ್‌ ಆಗಿ ಆಯ್ಕೆ ಮಾಡಲಾಗಿಲ್ಲ. ಅವರು ತಮ್ಮ ಬ್ಯಾಟಿಂಗ್‌ಗೆ ಆಯ್ಕೆಯಾದರು. ಆದ್ದರಿಂದ ಈ ಆಯ್ಕೆಯ ಬಗ್ಗೆ ನಾನು ಯಾವಾಗಲೂ ವಿರುದ್ಧವಾಗಿರುತ್ತೇನೆ ಎಂದಿದ್ದಾರೆ.

ಹನುಮಾ ವಿಹಾರಿ ಸೇರ್ಪಡೆ ವ್ಯತ್ಯಾಸ ತರುತ್ತಿತ್ತು ಟೆಸ್ಟ್ ಪಂದ್ಯಗಳಿಗೆ ವಿಶೇಷ ಆಟಗಾರರನ್ನು ಮಾತ್ರ ಆಯ್ಕೆ ಮಾಡಬೇಕು ಎಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಹೇಳಿದ್ದಾರೆ. ಹನುಮಾ ವಿಹಾರಿ ಅವರ ಉದಾಹರಣೆಯನ್ನು ನೀಡಿ, ಅವರು ಬ್ಯಾಟ್ಸ್‌ಮನ್‌ ಆಗಿ ಅವಕಾಶ ನೀಡಿದ್ದರೆ, ಪರಿಸ್ಥಿತಿ ವಿಭಿನ್ನವಾಗಿರಬಹುದು ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಮಂಜ್ರೆಕರ್, ಉದಾಹರಣೆಯಾಗಿ ಉತ್ತಮ ರಕ್ಷಣಾತ್ಮಕ ಆಟ ಆಡುವ ಹನುಮಾ ವಿಹಾರಿ ಅವರನ್ನು ಆಯ್ಕೆ ಮಾಡಿದ್ದಾರೆ. ಜೊತೆಗೆ ವಿಹಾರಿ ತಂಡದಲ್ಲಿದ್ದರೆ ಭಾರತ ಬಹುಶಃ 170 (ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಸ್ಕೋರ್) ರ ಬದಲು 220 ಅಥವಾ 225 ಅಥವಾ 230, ರನ್ ಗಳಿಸುವ ಅವಕಾಶವಿರುತ್ತಿತ್ತು ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಈ ತಪ್ಪು ಮಾಡಬೇಡಿ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಜಡೇಜಾ ಕೇವಲ 31 ರನ್ ಗಳಿಸಿದರೆ, ಇಡೀ ಪಂದ್ಯದಲ್ಲಿ ಕೇವಲ 15.2 ಓವರ್‌ಗಳನ್ನು ಮಾತ್ರ ಬೌಲಿಂಗ್ ಮಾಡಿದರು, ಇದರಲ್ಲಿ ಅವರು ಕೇವಲ ಒಂದು ವಿಕೆಟ್ ಪಡೆದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂತಹ ತಪ್ಪು ಮಾಡಬೇಡಿ ಎಂದು ಮಂಜ್ರೇಕರ್ ಭಾರತೀಯ ತಂಡಕ್ಕೂ ಎಚ್ಚರಿಕೆ ನೀಡಿರುವುದು ಇದೇ ಕಾರಣ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 4 ರಿಂದ ನಾಟಿಂಗ್ಹ್ಯಾಮ್ನಲ್ಲಿ ಪ್ರಾರಂಭವಾಗಲಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?