AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: 5ನೇ ದಿನದಾಟಕ್ಕೂ ವರುಣನ ಅವಕೃಪೆ! ಮೊದಲ ಸೆಷನ್ ಮಳೆಯಿಂದ ಮುಂದೂಡಲ್ಪಟ್ಟಿದೆ

WTC Final: ಬೆಳಿಗ್ಗೆಯಿಂದಲೂ ಕಾಟ ಕೊಡದೆ ಶಾಂತವಾಗಿದ್ದ ಮಳೆರಾಯ, ಪಂದ್ಯ ಆರಂಭವಾಗುವ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದಾನೆ. ಇದರಿಂದಾಗಿ 5ನೇ ದಿನದ ಮೊದಲ ಸೆಷನ್ ಆರಂಭವಾಗುವುದು ಕೊಂಚ ವಿಳಂಬವಾಗಿದೆ.

WTC Final: 5ನೇ ದಿನದಾಟಕ್ಕೂ ವರುಣನ ಅವಕೃಪೆ! ಮೊದಲ ಸೆಷನ್ ಮಳೆಯಿಂದ ಮುಂದೂಡಲ್ಪಟ್ಟಿದೆ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Jun 22, 2021 | 3:23 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಐದನೇ ದಿನ ಇಂದು. ಪಂದ್ಯದ ಎರಡು ದಿನಗಳು ಮಳೆಯಿಂದ ಸಂಪೂರ್ಣವಾಗಿ ರದ್ದಾದವು, ಈ ಎರಡು ದಿನಗಳಲ್ಲಿ ಒಂದು ಬಾಲ್​ ಕೂಡ ಆಡಲಾಗಲಿಲ್ಲ. ಸೌತಾಂಪ್ಟನ್‌ನಲ್ಲಿ ಇಂದು ಉತ್ತಮ ಹವಾಮಾನದಿಂದಾಗಿ ಆಟವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುವ ನಿರೀಕ್ಷೆಯಿತ್ತು. ಆದರೆ ಬೆಳಿಗ್ಗೆಯಿಂದಲೂ ಕಾಟ ಕೊಡದೆ ಶಾಂತವಾಗಿದ್ದ ಮಳೆರಾಯ, ಪಂದ್ಯ ಆರಂಭವಾಗುವ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದಾನೆ. ಇದರಿಂದಾಗಿ 5ನೇ ದಿನದ ಮೊದಲ ಸೆಷನ್ ಆರಂಭವಾಗುವುದು ಕೊಂಚ ವಿಳಂಬವಾಗಿದೆ. ಈ ಬಗ್ಗೆ ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಅಧಿಕೃತ ಮಾಹಿತಿ ಹೊರಹಾಕಿದೆ. ಪಂದ್ಯದ ಮರು ಆರಂಭದ ಬಗ್ಗೆ ಯಾವುದೇ ಮಾಹಿತಿಯನ್ನು ಇದುವರೆಗೂ ನೀಡಲಾಗಿಲ್ಲ.

ಪಂದ್ಯದ ಪ್ರಸ್ತುತ ಸ್ಥಿತಿ ಪಂದ್ಯದಲ್ಲಿ ಒಂದು ತಂಡ ಇಲ್ಲಿಯವರೆಗೆ ಒಂದು ಇನ್ನಿಂಗ್ಸ್ ಆಡಿದೆ. ಭಾರತ ತಂಡ 217 ರನ್​ಗಳಿಗೆ ಆಲ್​ಔಟ್ ಆಗಿದೆ. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ಎರಡು ವಿಕೆಟ್ ಕಳೆದುಕೊಂಡು 101 ರನ್ ಗಳಿಸಿದೆ. ಅಂದರೆ ನ್ಯೂಜಿಲೆಂಡ್ 116 ರನ್‌ಗಳ ಹಿನ್ನಡೆಯಲ್ಲಿದೆ. ಇದು ಪಂದ್ಯದ ಐದನೇ ದಿನವಾದ್ದರಿಂದ ಪಂದ್ಯವು ಡ್ರಾದತ್ತ ಸಾಗುತ್ತಿದೆ. ಪಂದ್ಯವನ್ನು ಡ್ರಾ ಮಾಡಿದರೆ, ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ.

ಟ್ರೋಫಿಯನ್ನು ಹಂಚಿಕೊಳ್ಳಲಾಗುವುದು ಐದನೇ ದಿನ ಮತ್ತು ಮೀಸಲು ದಿನ ಸೇರಿದಂತೆ ಪಂದ್ಯದಲ್ಲಿ 2 ದಿನಗಳು ಉಳಿದಿವೆ. ಆದಾಗ್ಯೂ, ಎರಡು ದಿನಗಳಲ್ಲಿ ಯಾವುದೇ ಸ್ಪಷ್ಟ ಪಲಿತಾಂಶ ಬರದಿದ್ದರೆ, ಎರಡೂ ತಂಡಗಳನ್ನು ವಿಜೇತರು ಎಂದು ಘೋಷಿಸಲಾಗುತ್ತದೆ ಮತ್ತು ಟ್ರೋಫಿಯನ್ನು ಹಂಚಿಕೊಳ್ಳಲಾಗುತ್ತದೆ. ಪಂದ್ಯ ಪೂರ್ಣಗೊಳ್ಳದಿರುವ ಸಾಧ್ಯತೆ ಹೆಚ್ಚಿರುವುದರಿಂದ ನ್ಯೂಜಿಲೆಂಡ್ ತಂಡದ ಮೊದಲ ಇನ್ನಿಂಗ್ಸ್ ಇನ್ನೂ ಪೂರ್ಣಗೊಂಡಿಲ್ಲ. ಒಂದೆಡೆ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 217 ರನ್ ಗಳಿಸಿದರೆ, ನ್ಯೂಜಿಲೆಂಡ್ ಎರಡು ವಿಕೆಟ್‌ಗೆ 101 ರನ್ ಗಳಿಸಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್