AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ
Yashpal Sharma
TV9 Web
| Updated By: Vinay Bhat|

Updated on:Jul 13, 2021 | 11:46 AM

Share

BREAKING: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಯಶ್​ಪಾಲ್ ಶರ್ಮಾ ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಗೆ ಹೃದಯಾಘಾತವಾಗಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70, 80ರ ದಶಕತದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಇವರು ಸಾಕಷ್ಟು ಕೊಡುಗಡೆ ನೀಡಿದ್ದರು. ಅಲ್ಲದೆ 1983ರ ವಿಶ್ವಕಪ್​ನಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. 66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

ಭಾರತ ತಂಡದಲ್ಲಿ ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿದ್ದರು. ಭಾರತ ಪರ 37 ಏಕದಿನ ಮತ್ತು 42 ಟೆಸ್ಟ್​ ಪಂದ್ಯಗಳಲ್ಲಿ ಯಶ್​ಪಾಲ್ ಕಣಕ್ಕಿಳಿದಿದ್ದರು. ಕೆಲ ಸಮಯ ರಾಷ್ಟ್ರೀಯ ತಂಡದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಟೆಸ್ಟ್​ನಲ್ಲಿ ಇವರು 2 ಶತಕ, 9 ಅರ್ಧಶತಕ ಬಾರಿಸಿ 1606 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕ ಸಹಿತ 883 ರನ್ ಬಾರಿಸಿದ್ದರು. 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್​ ಕ್ರೀಡಾಂಗಣದಲ್ಲಿ ಯಶ್​ಪಾಲ್ ಅವರು ಭಾರತ ಟಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ರಣಜಿಯಲ್ಲಿ ಇವರು ಒಟ್ಟು 160 ಪಂದ್ಯಗಳನ್ನು ಆಡಿದ್ದಾರೆ. 21 ಶತಕದ ಜೊತೆ 8,933 ರನ್ ಬಾರಿಸಿದ್ದು ಅಜೇಯ 201 ರನ್ ಯಶ್​ಪಾಲ್ ಅವರ ಗರಿಷ್ಠ ಸ್ಕೋರ್ ಆಗಿದೆ.

Published On - 11:13 am, Tue, 13 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!