AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ
Yashpal Sharma
TV9 Web
| Edited By: |

Updated on:Jul 13, 2021 | 11:46 AM

Share

BREAKING: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಯಶ್​ಪಾಲ್ ಶರ್ಮಾ ನಿಧನರಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಗೆ ಹೃದಯಾಘಾತವಾಗಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70, 80ರ ದಶಕತದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಇವರು ಸಾಕಷ್ಟು ಕೊಡುಗಡೆ ನೀಡಿದ್ದರು. ಅಲ್ಲದೆ 1983ರ ವಿಶ್ವಕಪ್​ನಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. 66 ವರ್ಷದ ಪಂಜಾಬ್ ಕ್ರಿಕೆಟರ್ ಯಶ್​ಪಾಲ್ ದಿಢೀರ್ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ಸೂಚಿಸಿದೆ.

ಭಾರತ ತಂಡದಲ್ಲಿ ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಗುರಿತಿಸಿಕೊಂಡಿದ್ದರು. ಭಾರತ ಪರ 37 ಏಕದಿನ ಮತ್ತು 42 ಟೆಸ್ಟ್​ ಪಂದ್ಯಗಳಲ್ಲಿ ಯಶ್​ಪಾಲ್ ಕಣಕ್ಕಿಳಿದಿದ್ದರು. ಕೆಲ ಸಮಯ ರಾಷ್ಟ್ರೀಯ ತಂಡದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಟೆಸ್ಟ್​ನಲ್ಲಿ ಇವರು 2 ಶತಕ, 9 ಅರ್ಧಶತಕ ಬಾರಿಸಿ 1606 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 4 ಅರ್ಧಶತಕ ಸಹಿತ 883 ರನ್ ಬಾರಿಸಿದ್ದರು. 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್​ ಕ್ರೀಡಾಂಗಣದಲ್ಲಿ ಯಶ್​ಪಾಲ್ ಅವರು ಭಾರತ ಟಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ರಣಜಿಯಲ್ಲಿ ಇವರು ಒಟ್ಟು 160 ಪಂದ್ಯಗಳನ್ನು ಆಡಿದ್ದಾರೆ. 21 ಶತಕದ ಜೊತೆ 8,933 ರನ್ ಬಾರಿಸಿದ್ದು ಅಜೇಯ 201 ರನ್ ಯಶ್​ಪಾಲ್ ಅವರ ಗರಿಷ್ಠ ಸ್ಕೋರ್ ಆಗಿದೆ.

Published On - 11:13 am, Tue, 13 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ