AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್

ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್
ಎಂ ಎಸ್ ಧೋನಿ, ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 10, 2021 | 6:19 PM

Share

2007 ರ ವರ್ಷ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ನೆನಪಿದ್ದೆ ಇರುತ್ತದೆ. ಆ ವರ್ಷ ಟಿ 20 ಆವೃತ್ತಿಯ ಮೊದಲ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ಸಾಟಿಯಿಲ್ಲದ ಗೆಲುವು. ಎಂ.ಎಸ್.ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾ ವಿಜಯ ಸಾಧಿಸಿದ ನಂತರ ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂಬೈ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಾರತದ ಮೊದಲ ಟಿ 20 ಚಾಂಪಿಯನ್‌ಗೆ ಸಂಬಂಧಿಸಿದ ಈ ಎಲ್ಲ ನೆನಪುಗಳು ಇಂದಿಗೂ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ತಾಜಾವಾಗಿವೆ. ಆದರೆ, ಈ ಪಂದ್ಯಾವಳಿಯಲ್ಲಿ ತನಗಾದ ಅನ್ಯಾಯದ ಬಗ್ಗೆ ಯುವರಾಜ್ ಸಿಂಗ್ ಮೌನ ಮುರಿದಿದ್ದಾರೆ. ಆ ಪಂದ್ಯಾವಳಿಯಲ್ಲಿ ಆಡಿದ ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

14 ವರ್ಷಗಳ ಯುವರಾಜ್ ಸಿಂಗ್ ತಮ್ಮ ಮೌನವನ್ನು ಮುರಿದಿದ್ದಾರೆ. ಹಾಲ್ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಭಾರತದ ಸಿಕ್ಸರ್ ಕಿಂಗ್ ತಂಡದ ನಾಯಕತ್ವಕ್ಕೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಎಂಎಸ್ ಧೋನಿ, ಯುವಿಯ ನಾಯಕತ್ವದ ಆಕಾಂಕ್ಷೆ ಮಧ್ಯೆ ಬಂದ ಕಾರಣ ಅದನ್ನು ಪೂರೈಸಲಾಗಲಿಲ್ಲ.

ನನಗೆ ಭರವಸೆ ಇತ್ತು, ಆದರೆ ಧೋನಿ ಅವರನ್ನು ನಾಯಕನನ್ನಾಗಿ ಮಾಡಲಾಯಿತು: ಯುವಿ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್ ಸಿಂಗ್, ಹಿರಿಯ ಆಟಗಾರರು ಟಿ 20 ವಿಶ್ವಕಪ್‌ನಿಂದ ವಿಶ್ರಾಂತಿ ಬಯಸಿದ್ದರು. ಜೊತೆಗೆ ಈ ಪಂದ್ಯಾವಳಿಯನ್ನು ಅವರು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ಆಶ್ಚರ್ಯಕರ ನಿರ್ಧಾರವು ಸಂಬಂಧವನ್ನು ಹಾಳು ಮಾಡಲಿಲ್ಲ ಎಂ.ಎಸ್.ಧೋನಿ ಅವರನ್ನು ನಾಯಕನನ್ನಾಗಿ ಮಾಡುವುದು ಯುವರಾಜ್‌ಗೆ ಖಂಡಿತವಾಗಿಯೂ ಆಶ್ಚರ್ಯಕರವಾಗಿತ್ತು, ಆದರೆ ಇದು ಅವರ ಮತ್ತು ಧೋನಿ ನಡುವಿನ ಸಂಬಂಧದಲ್ಲಿ ಯಾವುದೇ ರೀತಿಯಾಗಿ ಹಾಳು ಮಾಡಲಿಲ್ಲ. ಯುವರಾಜ್ ತಂಡದ ಇನ್ನಿತರರಂತೆ ಧೋನಿಗೆ ಬೆಂಬಲ ನೀಡಿದರು. ಆ ಸಮಯದಲ್ಲಿ ಟಿ 20 ಸ್ವರೂಪವು ಸಂಪೂರ್ಣವಾಗಿ ಹೊಸದಾಗಿತ್ತು. ಆದ್ದರಿಂದ ಆ ಪಂದ್ಯಾವಳಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯತಂತ್ರ ಇರಲಿಲ್ಲ ಎಂದು 39 ವರ್ಷದ ಮಾಜಿ ಭಾರತೀಯ ಆಲ್ರೌಂಡರ್ ಹೇಳಿದ್ದಾರೆ. ನಾವು ನಮ್ಮ ತಿಳುವಳಿಕೆಯೊಂದಿಗೆ ಆಡಿದ್ದೇವು ಮತ್ತು ಈ ಸ್ವರೂಪದ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದೇವು ಎಂದು ಯುವಿ ಹೇಳಿಕೊಂಡಿದ್ದಾರೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ