AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್

ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್
ಎಂ ಎಸ್ ಧೋನಿ, ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 10, 2021 | 6:19 PM

Share

2007 ರ ವರ್ಷ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ನೆನಪಿದ್ದೆ ಇರುತ್ತದೆ. ಆ ವರ್ಷ ಟಿ 20 ಆವೃತ್ತಿಯ ಮೊದಲ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ಸಾಟಿಯಿಲ್ಲದ ಗೆಲುವು. ಎಂ.ಎಸ್.ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾ ವಿಜಯ ಸಾಧಿಸಿದ ನಂತರ ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂಬೈ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಾರತದ ಮೊದಲ ಟಿ 20 ಚಾಂಪಿಯನ್‌ಗೆ ಸಂಬಂಧಿಸಿದ ಈ ಎಲ್ಲ ನೆನಪುಗಳು ಇಂದಿಗೂ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ತಾಜಾವಾಗಿವೆ. ಆದರೆ, ಈ ಪಂದ್ಯಾವಳಿಯಲ್ಲಿ ತನಗಾದ ಅನ್ಯಾಯದ ಬಗ್ಗೆ ಯುವರಾಜ್ ಸಿಂಗ್ ಮೌನ ಮುರಿದಿದ್ದಾರೆ. ಆ ಪಂದ್ಯಾವಳಿಯಲ್ಲಿ ಆಡಿದ ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

14 ವರ್ಷಗಳ ಯುವರಾಜ್ ಸಿಂಗ್ ತಮ್ಮ ಮೌನವನ್ನು ಮುರಿದಿದ್ದಾರೆ. ಹಾಲ್ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಭಾರತದ ಸಿಕ್ಸರ್ ಕಿಂಗ್ ತಂಡದ ನಾಯಕತ್ವಕ್ಕೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಎಂಎಸ್ ಧೋನಿ, ಯುವಿಯ ನಾಯಕತ್ವದ ಆಕಾಂಕ್ಷೆ ಮಧ್ಯೆ ಬಂದ ಕಾರಣ ಅದನ್ನು ಪೂರೈಸಲಾಗಲಿಲ್ಲ.

ನನಗೆ ಭರವಸೆ ಇತ್ತು, ಆದರೆ ಧೋನಿ ಅವರನ್ನು ನಾಯಕನನ್ನಾಗಿ ಮಾಡಲಾಯಿತು: ಯುವಿ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್ ಸಿಂಗ್, ಹಿರಿಯ ಆಟಗಾರರು ಟಿ 20 ವಿಶ್ವಕಪ್‌ನಿಂದ ವಿಶ್ರಾಂತಿ ಬಯಸಿದ್ದರು. ಜೊತೆಗೆ ಈ ಪಂದ್ಯಾವಳಿಯನ್ನು ಅವರು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ಆಶ್ಚರ್ಯಕರ ನಿರ್ಧಾರವು ಸಂಬಂಧವನ್ನು ಹಾಳು ಮಾಡಲಿಲ್ಲ ಎಂ.ಎಸ್.ಧೋನಿ ಅವರನ್ನು ನಾಯಕನನ್ನಾಗಿ ಮಾಡುವುದು ಯುವರಾಜ್‌ಗೆ ಖಂಡಿತವಾಗಿಯೂ ಆಶ್ಚರ್ಯಕರವಾಗಿತ್ತು, ಆದರೆ ಇದು ಅವರ ಮತ್ತು ಧೋನಿ ನಡುವಿನ ಸಂಬಂಧದಲ್ಲಿ ಯಾವುದೇ ರೀತಿಯಾಗಿ ಹಾಳು ಮಾಡಲಿಲ್ಲ. ಯುವರಾಜ್ ತಂಡದ ಇನ್ನಿತರರಂತೆ ಧೋನಿಗೆ ಬೆಂಬಲ ನೀಡಿದರು. ಆ ಸಮಯದಲ್ಲಿ ಟಿ 20 ಸ್ವರೂಪವು ಸಂಪೂರ್ಣವಾಗಿ ಹೊಸದಾಗಿತ್ತು. ಆದ್ದರಿಂದ ಆ ಪಂದ್ಯಾವಳಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯತಂತ್ರ ಇರಲಿಲ್ಲ ಎಂದು 39 ವರ್ಷದ ಮಾಜಿ ಭಾರತೀಯ ಆಲ್ರೌಂಡರ್ ಹೇಳಿದ್ದಾರೆ. ನಾವು ನಮ್ಮ ತಿಳುವಳಿಕೆಯೊಂದಿಗೆ ಆಡಿದ್ದೇವು ಮತ್ತು ಈ ಸ್ವರೂಪದ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದೇವು ಎಂದು ಯುವಿ ಹೇಳಿಕೊಂಡಿದ್ದಾರೆ.

Follow Us
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ