Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್

ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್
ಎಂ ಎಸ್ ಧೋನಿ, ಯುವರಾಜ್ ಸಿಂಗ್
Follow us
ಪೃಥ್ವಿಶಂಕರ
|

Updated on: Jun 10, 2021 | 6:19 PM

2007 ರ ವರ್ಷ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ನೆನಪಿದ್ದೆ ಇರುತ್ತದೆ. ಆ ವರ್ಷ ಟಿ 20 ಆವೃತ್ತಿಯ ಮೊದಲ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ಸಾಟಿಯಿಲ್ಲದ ಗೆಲುವು. ಎಂ.ಎಸ್.ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾ ವಿಜಯ ಸಾಧಿಸಿದ ನಂತರ ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂಬೈ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಾರತದ ಮೊದಲ ಟಿ 20 ಚಾಂಪಿಯನ್‌ಗೆ ಸಂಬಂಧಿಸಿದ ಈ ಎಲ್ಲ ನೆನಪುಗಳು ಇಂದಿಗೂ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ತಾಜಾವಾಗಿವೆ. ಆದರೆ, ಈ ಪಂದ್ಯಾವಳಿಯಲ್ಲಿ ತನಗಾದ ಅನ್ಯಾಯದ ಬಗ್ಗೆ ಯುವರಾಜ್ ಸಿಂಗ್ ಮೌನ ಮುರಿದಿದ್ದಾರೆ. ಆ ಪಂದ್ಯಾವಳಿಯಲ್ಲಿ ಆಡಿದ ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

14 ವರ್ಷಗಳ ಯುವರಾಜ್ ಸಿಂಗ್ ತಮ್ಮ ಮೌನವನ್ನು ಮುರಿದಿದ್ದಾರೆ. ಹಾಲ್ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಭಾರತದ ಸಿಕ್ಸರ್ ಕಿಂಗ್ ತಂಡದ ನಾಯಕತ್ವಕ್ಕೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಎಂಎಸ್ ಧೋನಿ, ಯುವಿಯ ನಾಯಕತ್ವದ ಆಕಾಂಕ್ಷೆ ಮಧ್ಯೆ ಬಂದ ಕಾರಣ ಅದನ್ನು ಪೂರೈಸಲಾಗಲಿಲ್ಲ.

ನನಗೆ ಭರವಸೆ ಇತ್ತು, ಆದರೆ ಧೋನಿ ಅವರನ್ನು ನಾಯಕನನ್ನಾಗಿ ಮಾಡಲಾಯಿತು: ಯುವಿ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್ ಸಿಂಗ್, ಹಿರಿಯ ಆಟಗಾರರು ಟಿ 20 ವಿಶ್ವಕಪ್‌ನಿಂದ ವಿಶ್ರಾಂತಿ ಬಯಸಿದ್ದರು. ಜೊತೆಗೆ ಈ ಪಂದ್ಯಾವಳಿಯನ್ನು ಅವರು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ಆಶ್ಚರ್ಯಕರ ನಿರ್ಧಾರವು ಸಂಬಂಧವನ್ನು ಹಾಳು ಮಾಡಲಿಲ್ಲ ಎಂ.ಎಸ್.ಧೋನಿ ಅವರನ್ನು ನಾಯಕನನ್ನಾಗಿ ಮಾಡುವುದು ಯುವರಾಜ್‌ಗೆ ಖಂಡಿತವಾಗಿಯೂ ಆಶ್ಚರ್ಯಕರವಾಗಿತ್ತು, ಆದರೆ ಇದು ಅವರ ಮತ್ತು ಧೋನಿ ನಡುವಿನ ಸಂಬಂಧದಲ್ಲಿ ಯಾವುದೇ ರೀತಿಯಾಗಿ ಹಾಳು ಮಾಡಲಿಲ್ಲ. ಯುವರಾಜ್ ತಂಡದ ಇನ್ನಿತರರಂತೆ ಧೋನಿಗೆ ಬೆಂಬಲ ನೀಡಿದರು. ಆ ಸಮಯದಲ್ಲಿ ಟಿ 20 ಸ್ವರೂಪವು ಸಂಪೂರ್ಣವಾಗಿ ಹೊಸದಾಗಿತ್ತು. ಆದ್ದರಿಂದ ಆ ಪಂದ್ಯಾವಳಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯತಂತ್ರ ಇರಲಿಲ್ಲ ಎಂದು 39 ವರ್ಷದ ಮಾಜಿ ಭಾರತೀಯ ಆಲ್ರೌಂಡರ್ ಹೇಳಿದ್ದಾರೆ. ನಾವು ನಮ್ಮ ತಿಳುವಳಿಕೆಯೊಂದಿಗೆ ಆಡಿದ್ದೇವು ಮತ್ತು ಈ ಸ್ವರೂಪದ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದೇವು ಎಂದು ಯುವಿ ಹೇಳಿಕೊಂಡಿದ್ದಾರೆ.

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್