AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್

ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ನನ್ನ ಬದಲು ಧೋನಿಗೆ ಪಟ್ಟ ಕಟ್ಟಿದರು! ಆದರೆ ಈ ನಿರ್ಧಾರ ನಮ್ಮ ಸಂಬಂಧವನ್ನು ಹಾಳು ಮಾಡಲಿಲ್ಲ: ಯುವರಾಜ್ ಸಿಂಗ್
ಎಂ ಎಸ್ ಧೋನಿ, ಯುವರಾಜ್ ಸಿಂಗ್
Follow us
ಪೃಥ್ವಿಶಂಕರ
|

Updated on: Jun 10, 2021 | 6:19 PM

2007 ರ ವರ್ಷ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ನೆನಪಿದ್ದೆ ಇರುತ್ತದೆ. ಆ ವರ್ಷ ಟಿ 20 ಆವೃತ್ತಿಯ ಮೊದಲ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ಸಾಟಿಯಿಲ್ಲದ ಗೆಲುವು. ಎಂ.ಎಸ್.ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾ ವಿಜಯ ಸಾಧಿಸಿದ ನಂತರ ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂಬೈ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಾರತದ ಮೊದಲ ಟಿ 20 ಚಾಂಪಿಯನ್‌ಗೆ ಸಂಬಂಧಿಸಿದ ಈ ಎಲ್ಲ ನೆನಪುಗಳು ಇಂದಿಗೂ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ತಾಜಾವಾಗಿವೆ. ಆದರೆ, ಈ ಪಂದ್ಯಾವಳಿಯಲ್ಲಿ ತನಗಾದ ಅನ್ಯಾಯದ ಬಗ್ಗೆ ಯುವರಾಜ್ ಸಿಂಗ್ ಮೌನ ಮುರಿದಿದ್ದಾರೆ. ಆ ಪಂದ್ಯಾವಳಿಯಲ್ಲಿ ಆಡಿದ ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

14 ವರ್ಷಗಳ ಯುವರಾಜ್ ಸಿಂಗ್ ತಮ್ಮ ಮೌನವನ್ನು ಮುರಿದಿದ್ದಾರೆ. ಹಾಲ್ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಭಾರತದ ಸಿಕ್ಸರ್ ಕಿಂಗ್ ತಂಡದ ನಾಯಕತ್ವಕ್ಕೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಎಂಎಸ್ ಧೋನಿ, ಯುವಿಯ ನಾಯಕತ್ವದ ಆಕಾಂಕ್ಷೆ ಮಧ್ಯೆ ಬಂದ ಕಾರಣ ಅದನ್ನು ಪೂರೈಸಲಾಗಲಿಲ್ಲ.

ನನಗೆ ಭರವಸೆ ಇತ್ತು, ಆದರೆ ಧೋನಿ ಅವರನ್ನು ನಾಯಕನನ್ನಾಗಿ ಮಾಡಲಾಯಿತು: ಯುವಿ 22 ಯಾರ್ನ್ಸ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್ ಸಿಂಗ್, ಹಿರಿಯ ಆಟಗಾರರು ಟಿ 20 ವಿಶ್ವಕಪ್‌ನಿಂದ ವಿಶ್ರಾಂತಿ ಬಯಸಿದ್ದರು. ಜೊತೆಗೆ ಈ ಪಂದ್ಯಾವಳಿಯನ್ನು ಅವರು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಟಿ 20 ವಿಶ್ವಕಪ್‌ನ ನಾಯಕತ್ವವನ್ನು ನನಗೆ ಹಸ್ತಾಂತರಿಸುತ್ತಾರೆ ಎಂದು ನಾನು ಆಶಿಸುತ್ತಿದ್ದೆ. ಆದರೆ ಎಂಎಸ್ ಧೋನಿ ಹೆಸರನ್ನು ನಾಯಕನಾಗಿ ಘೋಷಿಸಲಾಯಿತು.

ಆಶ್ಚರ್ಯಕರ ನಿರ್ಧಾರವು ಸಂಬಂಧವನ್ನು ಹಾಳು ಮಾಡಲಿಲ್ಲ ಎಂ.ಎಸ್.ಧೋನಿ ಅವರನ್ನು ನಾಯಕನನ್ನಾಗಿ ಮಾಡುವುದು ಯುವರಾಜ್‌ಗೆ ಖಂಡಿತವಾಗಿಯೂ ಆಶ್ಚರ್ಯಕರವಾಗಿತ್ತು, ಆದರೆ ಇದು ಅವರ ಮತ್ತು ಧೋನಿ ನಡುವಿನ ಸಂಬಂಧದಲ್ಲಿ ಯಾವುದೇ ರೀತಿಯಾಗಿ ಹಾಳು ಮಾಡಲಿಲ್ಲ. ಯುವರಾಜ್ ತಂಡದ ಇನ್ನಿತರರಂತೆ ಧೋನಿಗೆ ಬೆಂಬಲ ನೀಡಿದರು. ಆ ಸಮಯದಲ್ಲಿ ಟಿ 20 ಸ್ವರೂಪವು ಸಂಪೂರ್ಣವಾಗಿ ಹೊಸದಾಗಿತ್ತು. ಆದ್ದರಿಂದ ಆ ಪಂದ್ಯಾವಳಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಯೋಜನೆ ಅಥವಾ ಕಾರ್ಯತಂತ್ರ ಇರಲಿಲ್ಲ ಎಂದು 39 ವರ್ಷದ ಮಾಜಿ ಭಾರತೀಯ ಆಲ್ರೌಂಡರ್ ಹೇಳಿದ್ದಾರೆ. ನಾವು ನಮ್ಮ ತಿಳುವಳಿಕೆಯೊಂದಿಗೆ ಆಡಿದ್ದೇವು ಮತ್ತು ಈ ಸ್ವರೂಪದ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದೇವು ಎಂದು ಯುವಿ ಹೇಳಿಕೊಂಡಿದ್ದಾರೆ.

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ