AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ

Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ
ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 02, 2021 | 3:35 PM

Share

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೊರೊನಾ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯಿಂದ ಯಾರೂ ಸಾಯಬಾರದು ಎಂಬ ಉದ್ದೇಶದಿಂದ ಅವರು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ಯುವಿಕನ್ ಎಂಬ ಪ್ರತಿಷ್ಠಾನದ ಆಶ್ರಯದಲ್ಲಿ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವರಾಜ್ ಹೇಳಿದರು.

ವೆಂಟಿಲೇಟರ್ ಹೊಂದಿರುವ ಹಾಸಿಗೆಗಳು ಯುವಿಕನ್ ಮತ್ತು ಒನ್ ಡಿಜಿಟಲ್ ಎಂಟರ್‌ಟೈನ್‌ಮೆಂಟ್ ಸಹಭಾಗಿತ್ವದಲ್ಲಿ, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಸಿಆರ್, ಹರಿಯಾಣ, ಪಂಜಾಬ್, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಹೊಂದಿರುವ ಹಾಸಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಯುವಿಕನ್ ಅಧಿಕೃತವಾಗಿ ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ದೇಶದಲ್ಲಿ ಕೊರನಾ ವೈರಸ್ ಹರಡುವುದರಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೇಶಾದ್ಯಂತ ಅನೇಕರು ಸಾವನ್ನಪ್ಪಿದರು, ವಿಶೇಷವಾಗಿ ಆಮ್ಲಜನಕದ ಕೊರತೆಯಿಂದ ತುಂಬಾ ಜನ ಪ್ರಾಣ ಕಳೆದುಕೊಂಡರು. ಅದರೊಂದಿಗೆ ಸರ್ಕಾರಗಳು ಆಮ್ಲಜನಕದ ಪೂರೈಕೆಯತ್ತ ಗಮನ ಹರಿಸಿದವು. ಮತ್ತೊಂದೆಡೆ, ಚಲನಚಿತ್ರ, ಕ್ರೀಡೆ ಮತ್ತು ರಾಜಕೀಯ ಗಣ್ಯರು ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇತರ ವೈದ್ಯಕೀಯ ಸಾಧನಗಳನ್ನು ಸಹ ದಾನ ಮಾಡುತ್ತಿದ್ದಾರೆ. ಕೊರೊನಾ ಸಂತ್ರಸ್ತರ ನೆರವಿಗೆ ಬಂದವರಲ್ಲಿ ಯುವರಾಜ್ ಕೂಡ ಈಗ ಸೇರಿಕೊಂಡಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?