AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ

Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಯುವರಾಜ್ ಸಿಂಗ್ ನೆರವು; ದೇಶಾದ್ಯಂತ 1000 ಆಕ್ಸಿಜನ್ ಸಹಿತ ಹಾಸಿಗೆಗಳ ಪೂರೈಕೆ
ಯುವರಾಜ್ ಸಿಂಗ್
ಪೃಥ್ವಿಶಂಕರ
|

Updated on: Jun 02, 2021 | 3:35 PM

Share

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೊರೊನಾ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯಿಂದ ಯಾರೂ ಸಾಯಬಾರದು ಎಂಬ ಉದ್ದೇಶದಿಂದ ಅವರು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ಯುವಿಕನ್ ಎಂಬ ಪ್ರತಿಷ್ಠಾನದ ಆಶ್ರಯದಲ್ಲಿ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವರಾಜ್ ಹೇಳಿದರು.

ವೆಂಟಿಲೇಟರ್ ಹೊಂದಿರುವ ಹಾಸಿಗೆಗಳು ಯುವಿಕನ್ ಮತ್ತು ಒನ್ ಡಿಜಿಟಲ್ ಎಂಟರ್‌ಟೈನ್‌ಮೆಂಟ್ ಸಹಭಾಗಿತ್ವದಲ್ಲಿ, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಸಿಆರ್, ಹರಿಯಾಣ, ಪಂಜಾಬ್, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಹೊಂದಿರುವ ಹಾಸಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಯುವಿಕನ್ ಅಧಿಕೃತವಾಗಿ ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ದೇಶದಲ್ಲಿ ಕೊರನಾ ವೈರಸ್ ಹರಡುವುದರಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೇಶಾದ್ಯಂತ ಅನೇಕರು ಸಾವನ್ನಪ್ಪಿದರು, ವಿಶೇಷವಾಗಿ ಆಮ್ಲಜನಕದ ಕೊರತೆಯಿಂದ ತುಂಬಾ ಜನ ಪ್ರಾಣ ಕಳೆದುಕೊಂಡರು. ಅದರೊಂದಿಗೆ ಸರ್ಕಾರಗಳು ಆಮ್ಲಜನಕದ ಪೂರೈಕೆಯತ್ತ ಗಮನ ಹರಿಸಿದವು. ಮತ್ತೊಂದೆಡೆ, ಚಲನಚಿತ್ರ, ಕ್ರೀಡೆ ಮತ್ತು ರಾಜಕೀಯ ಗಣ್ಯರು ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇತರ ವೈದ್ಯಕೀಯ ಸಾಧನಗಳನ್ನು ಸಹ ದಾನ ಮಾಡುತ್ತಿದ್ದಾರೆ. ಕೊರೊನಾ ಸಂತ್ರಸ್ತರ ನೆರವಿಗೆ ಬಂದವರಲ್ಲಿ ಯುವರಾಜ್ ಕೂಡ ಈಗ ಸೇರಿಕೊಂಡಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ