AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಹಲ್-ಧನಶ್ರೀ ಮದುವೆ ಮೂವಿ ರಿಲೀಸ್: ಸಖತ್​ ಸ್ಟೆಪ್ಸ್​ ಹಾಕಿದ ಕ್ರಿಕೆಟಿಗರು, ಕಾಮಿಡಿ ಮೂಡ್​ನಲ್ಲಿ ಚಹಲ್.. ವಿಡಿಯೋ ನೋಡಿ

ಧನಶ್ರೀಗೆ ಉಂಗುರು ತೊಡಿಸುವಾಗ ಚಹಲ್ ಹಾಸ್ಯ ಚಟಾಕಿಯೊಂದನ್ನ ಹಾರಿಸಿದ್ದಾರೆ. ನಾವಿಲ್ಲಿ ಏಕೇ ನಿಂತಿದ್ದೀವಿ ಅನ್ನೋದು ಗೊತ್ತಿಲ್ಲ ಹೇಳ್ತೀಯಾ ಅಂತಾ ಧನಶ್ರೀ ಬಳಿ ಕೇಳಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ.

ಚಹಲ್-ಧನಶ್ರೀ ಮದುವೆ ಮೂವಿ ರಿಲೀಸ್: ಸಖತ್​ ಸ್ಟೆಪ್ಸ್​ ಹಾಕಿದ ಕ್ರಿಕೆಟಿಗರು, ಕಾಮಿಡಿ ಮೂಡ್​ನಲ್ಲಿ ಚಹಲ್.. ವಿಡಿಯೋ ನೋಡಿ
ಮದುವೆ ಸಂಭ್ರಮದಲ್ಲಿ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ
ಪೃಥ್ವಿಶಂಕರ
|

Updated on: Apr 04, 2021 | 11:17 AM

Share

ಟೀಮ್ ಇಂಡಿಯಾ ಸ್ಪಿನ್ನರ್ ಯಜ್ವಿಂದರ್ ಚಹಲ್, ತಮ್ಮ ಮನಸ್ಸು ಕದ್ದ ಚೆಲುವೆಯೊಂದಿಗೆ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು. ಆದ್ರೀಗ ಚಹಲ್ ಪತ್ನಿ, ಮದುವೆಯ ಸಂಭ್ರಮದ ಕ್ಷಣಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗ ಯಜ್ವಿಂದರ್ ಚಹಲ್, ಧನಶ್ರೀ ವರ್ಮಾ ಜೊತೆಗೆ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು. ಸೋಷಿಯಲ್ ಮೀಡಿಯಾದಲ್ಲಿ ಚಹಲ್ ಜೋಡಿಯ ಮದುವೆ ಫೋಟೋಗಳು ಮಾತ್ರ ವೈರಲ್ ಆಗಿತ್ತು.

ಚಹಲ್ ಹಾಸ್ಯ ಚಟಾಕಿ ಆದ್ರೀಗ ಚಹಲ್ ಪತ್ನಿ ಧನಶ್ರೀ ವರ್ಮಾ ತಮ್ಮ ಯ್ಯೂಟ್ಯೂಬ್​ನಲ್ಲಿ, ಮದುವೆಯ ಕಲರ್ ಫುಲ್ ವಿಡಿಯೋವನ್ನ ಅಪ್ಲೋಡ್ ಮಾಡಿದ್ದಾರೆ. ಗುರುಗ್ರಾಂನಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಚಹಲ್ ಮತ್ತು ದನಶ್ರೀ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ರು. ಧನಶ್ರೀಗೆ ಉಂಗುರು ತೊಡಿಸುವಾಗ ಚಹಲ್ ಹಾಸ್ಯ ಚಟಾಕಿಯೊಂದನ್ನ ಹಾರಿಸಿದ್ದಾರೆ. ನಾವಿಲ್ಲಿ ಏಕೇ ನಿಂತಿದ್ದೀವಿ ಅನ್ನೋದು ಗೊತ್ತಿಲ್ಲ ಹೇಳ್ತೀಯಾ ಅಂತಾ ಧನಶ್ರೀ ಬಳಿ ಕೇಳಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ.

ಚಹಲ್ ಮದುವೆ ಸಮಯದಲ್ಲಿ ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ರು. ಹೀಗಾಗಿ ಚಹಲ್ ಆಪ್ತ ನಾಯಕ ವಿರಾಟ್ ಕೊಹ್ಲಿಗೆ ಮದುವೆಗೆ ಬರಲು ಸಾಧ್ಯವಾಗಿಲ್ಲ. ಆದ್ರೆ ಶಿಖರ್ ಧವನ್, ಚಹಲ್ ಮದುವೆಗೆ ಅಗಮಿಸಿ ಬಾಂಗ್ರಾ ಸ್ಟೆಪ್ಸ್ ಹಾಕಿ ಎಂಜಾಯ್ ಮಾಡಿದ್ದಾರೆ..

ಪಂಜಾಬಿ ಶೈಲಿಯಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಚಹಲ್ ದಂಪತಿಯೂ ಭರ್ಜರಿ ಸ್ಟೆಪ್ಸ್ ಹಾಕಿ ಎಂಜಾಯ್ ಮಾಡಿದ್ದಾರೆ. ಧನಶ್ರೀ ವರ್ಮಾ ತಮ್ಮ ಯ್ಯೂಟ್ಯೂಬ್​ಗೆ ಈ ವಿಡಿಯೋವನ್ನ ಅಪ್ಲೋಡ್ ಮಾಡಿದ ಕೆಲವೇ ಗಂಟೆಗಳಲ್ಲಿ 16 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ:IPL 2021: ಶಿಖರ್ ಧವನ್ – ಚಹಲ್​ ಪತ್ನಿ ಧನಶ್ರೀ ವರ್ಮಾ ಬಾಂಗ್ರಾ ಸ್ಟೆಪ್ಸ್ ಸಖತ್ ಸೌಂಡ್ ಮಾಡ್ತಿದೆ..! ವಿಡಿಯೋ ನೋಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ