AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 11 Pro+: ಬರೋಬ್ಬರಿ 200MP ಕ್ಯಾಮೆರಾ, ಅತಿ ಕಡಿಮೆ ಬೆಲೆ: ಮೇ 16ಕ್ಕೆ ಭಾರತದಲ್ಲಿ ರಿಯಲ್ ಮಿ 11 ಪ್ರೊ ಬಿಡುಗಡೆ

ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದೇ ಮೇ 16 ರಂದು ರಿಯಲ್ 11 ಸರಣಿ (Realme 11 Series) ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

Realme 11 Pro+: ಬರೋಬ್ಬರಿ 200MP ಕ್ಯಾಮೆರಾ, ಅತಿ ಕಡಿಮೆ ಬೆಲೆ: ಮೇ 16ಕ್ಕೆ ಭಾರತದಲ್ಲಿ ರಿಯಲ್ ಮಿ 11 ಪ್ರೊ ಬಿಡುಗಡೆ
Realme 11 Pro Plus
Vinay Bhat
|

Updated on:May 14, 2023 | 2:14 PM

Share

ಅದ್ಭುತ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಈ ಹಿಂದೆ ಶವೋಮಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಮೊಬೈಲ್​ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡಿತ್ತು. ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು (200MP Camera Phone) ಭಾರತದಲ್ಲಿ ಲಾಂಚ್ ಮಾಡಿತ್ತು. ಇದೀಗ ರಿಯಲ್ ಮಿ ಸರದಿ. ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದೇ ಮೇ 16 ರಂದು ರಿಯಲ್ 11 ಸರಣಿ (Realme 11 Series) ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ರಿಯಲ್ ಮಿ 11 ಸರಣಿಯ ಅಡಿಯಲ್ಲಿ ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಫೋನ್​ ಇರಲಿವೆ. ಇದು ಕಳೆದ ವಾರವಷ್ಟೆ ಚೀನಾದಲ್ಲಿ ಬಿಡುಗಡೆ ಆಗಿತ್ತು. ಈ ಫೋನಿನ ರಿಯಲ್ ಮಿ 11 ಪ್ರೊ+ 5G ಯಲ್ಲಿ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಮೂಲಗಳ ಪ್ರಕಾರ ರಿಯಲ್ ಮಿ 11 ಪ್ರೊ ಬೆಲೆ 22,000-23,000 ರೂ. ಇರಬಹುದು. ಅಂತೆಯೆ ರಿಯಲ್ ಮಿ 111 ಪ್ರೊ+ ಬೆಲೆ 28,000-29,000 ರೂ. ಇರಬಹುದಂತೆ.

OnePlus Nord 3: ಬಿಡುಗಡೆಗು ಮುನ್ನ ರೋಚಕತೆ ಸೃಷ್ಟಿಸಿದ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್​: ಫೀಚರ್ಸ್ ಏನಿದೆ ನೋಡಿ?

ಇದನ್ನೂ ಓದಿ
Image
Tech Tips: ವಾಟ್ಸ್​ಆ್ಯಪ್​ನಲ್ಲಿ ಟೈಪ್ ಮಾಡದೇ​​​ ಮೆಸೇಜ್ ಕಳುಹಿಸುವುದು ಹೇಗೆ ಗೊತ್ತೇ?
Image
Motorola Edge 40: ಭಾರತಕ್ಕೆ ಕಾಲಿಡಲಿದೆ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌: ಫೀಚರ್ಸ್ ಏನಿದೆ ನೋಡಿ
Image
Redmi A2: ಮೇ 19ರ ಒಂದೇ ದಿನ ಎರಡು ಹೊಸ ಫೋನ್ ಬಿಡುಗಡೆ ಮಾಡಲಿದೆ ರೆಡ್ಮಿ
Image
WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಕೆಲ ಬಳಕೆದಾರರಿಗೆ ಸಿಗುತ್ತಿದೆ ಈ ಅಚ್ಚರಿ ಫೀಚರ್: ತಕ್ಷಣ ಅಪ್ಡೇಟ್ ಮಾಡಿ

ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್‌ 1,440*3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್​ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಇದರ ಪ್ರಮುಖ ಹೈಲೇಟ್ ಕ್ಯಾಮೆರಾ. ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಮ್ಯಾಕ್ರೊ ಸೆನ್ಸಾರ್‌ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Sun, 14 May 23

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು