5G Service: ಎಚ್ಚರ: 4G ಸಿಮ್​ ಅನ್ನು 5Gಗೆ ಅಪ್ಡೇಟ್ ಮಾಡುತ್ತೇವೆ ಎಂಬ ಕರೆ ಬರಬಹುದು: ತಪ್ಪಿಯೂ ಹೀಗೆ ಮಾಡಬೇಡಿ

Fake Call: ಇದೀಗ 5G ವಿಚಾರವನ್ನೇ ಮುಂದಿಟ್ಟುಕೊಂಡು ವಂಚಕರು ಸಾರ್ವಜನಿಕರಿಂದ ಹಣ ದೋಚುವ ಕೆಲಸ ಶುರು ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ಕೂಡ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪೊಲೀಸರು 5ಜಿ ಸೇವೆಯ ಸುಳ್ಳು ಸುದ್ದಿ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ.

5G Service: ಎಚ್ಚರ: 4G ಸಿಮ್​ ಅನ್ನು 5Gಗೆ ಅಪ್ಡೇಟ್ ಮಾಡುತ್ತೇವೆ ಎಂಬ ಕರೆ ಬರಬಹುದು: ತಪ್ಪಿಯೂ ಹೀಗೆ ಮಾಡಬೇಡಿ
ಸಾಂದರ್ಭಿಕ ಚಿತ್ರ
Follow us
| Updated By: Vinay Bhat

Updated on:Oct 08, 2022 | 11:26 AM

ದೇಶದಲ್ಲಿ 5ಜಿ ಯುಗ ಆರಂಭವಾಗಿದೆ. ಕಳೆದ ವಾರ ನಡೆದ 6ನೇ ಇಂಡಿಯನ್ ಮೊಬೈಲ್​ ಕಾಂಗ್ರೆಸ್​ನಲ್ಲಿ 5G ಸೇವೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಿದ್ದಾರೆ. ಈಗಾಗಲೇ ಭಾರತದಲ್ಲಿ ಭಾರ್ತಿ ಏರ್ಟೆಲ್ ಮೊಟ್ಟಮೊದಲ 5ಜಿ ಸೇವೆಯನ್ನು ಶುರುಮಾಡಿದೆ. ದೆಹಲಿ, ಮುಂಬೈ, ವಾರಾಣಸಿ, ಬೆಂಗಳೂರು (Bengaluru) ಮತ್ತು ಇತರ ನಗರಗಳಲ್ಲಿ ಏರ್ಟೆಲ್​ನ 5G (Airtel 5G) ಸೇವೆಯು ಲಭ್ಯವಿರುತ್ತದೆ. ಇತ್ತ ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕೂಡ ದೇಶದಲ್ಲಿ ತನ್ನ ಜಿಯೋ 5ಜಿ ಸೇವೆಯನ್ನು ಪ್ರಾಯೋಗಿಕವಾಗಿ ಆರಂಭಿಸಿದೆ. ಜಿಯೋ 5ಜಿ ಸೇವೆ ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ವಾರಣಾಸಿ ನಾಲ್ಕು ನಗರಗಳಲ್ಲಿ ಪ್ರಾಯೋಗಿಕವಾಗಿ ಲಭ್ಯವಾಗಲಿದೆ. ಇದೀಗ 5G ವಿಚಾರವನ್ನೇ ಮುಂದಿಟ್ಟುಕೊಂಡು ವಂಚಕರು ಸಾರ್ವಜನಿಕರಿಂದ ಹಣ ದೋಚುವ ಕೆಲಸ ಶುರು ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ಕೂಡ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಪೊಲೀಸರು 5ಜಿ ಸೇವೆಯ ಸುಳ್ಳು ಸುದ್ದಿ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ. ”ಜಿಲ್ಲೆಯ ಎಲ್ಲ ನಾಗರಿಕರಿಗೆ ಈ ಮೂಲಕ ತಿಳಿಯಪಡಿಸುವ ವಿಷಯ ಏನೆಂದರೆ Mobile SIM Card ನ 5G ಸರ್ವಿಸ್ ಪ್ರಾರಂಭವಾಗಿರುವುದು ನಿಮಗೆ ಗೊತ್ತಿರುವ ವಿಷಯವಾಗಿದೆ ಇದನ್ನೆ ನೆಪವಾಗಿಟ್ಟುಕೊಂಡು ಸೈಬರ್ ಕ್ರೈಮ್‌ನ ಕೆಲವು ಕಿಡಿಗೇಡಿಗಳು ನಿಮ್ಮ ಮೊಬೈಲ್ ಗೆ ಕಾಲ್ ಮಾಡಿ ನಿಮ್ಮ Mobile SIM Card ನ್ನು 4G ದಿಂದ 5G ಗೆ Update ಮಾಡುತ್ತೇವೆ, ನಿಮಗೆ ಒಂದು OTP ಬರುತ್ತದೆ ಹೇಳಿ ಅಂತ ಕಾಲ್ ಬಂದರೆ, ಖಂಡಿತವಾಗಿ ಯಾರು ನಿಮಗೆ ಬಂದ OTP ಯನ್ನು ತಿಳಿಸಬಾರದು ನೀವು ಒಂದು ವೇಳೆ ಅವರು ಕಳುಹಿಸಿದ OTP ಸಂಖ್ಯೆಯನ್ನು ಅವರಿಗೆ ಹೇಳಿದರೆ ನಿಮ್ಮ Bank Account ನಲ್ಲಿರುವ ಎಲ್ಲಾ ಹಣವನ್ನು ಅವರು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ ಆದರಿಂದ ದಯವಿಟ್ಟು ಜಿಲ್ಲೆಯ ನಾಗರಿಕರು ಯಾರಾದರು ಅಪರಿಚಿತರು OTP ಕೇಳಿದರೆ ಹೇಳದೇ Cyber crimes ದಿಂದ ಸುರಕ್ಷತಿವಾಗಿರಿ”, ಎಂದು ಹೇಳಿದೆ.

4ಜಿಯಿಂದ 5ಜಿಗೆ ನೆಟ್‌ವರ್ಕ್ ಅಥವಾ ಸಿಮ್‌ ಕಾರ್ಡ್‌ ಅಪ್‌ಡೇಟ್‌ ಮಾಡುವ ನೆಪದಲ್ಲಿ ಸೈಬರ್‌ ಖದೀಮರು ವಂಚನೆ ಮಾಡುವ ಅವಕಾಶಗಳಿವೆ. 5ಜಿ ಅಪ್‌ಡೇಟ್‌ ಕುರಿತಾಗಿ ಮೊಬೈಲ್‌ಗೆ ಬರುವ ಟೆಕ್ಸ್ಟ್‌ ಮೆಸೇಜ್‌ಗಳ ಬಗ್ಗೆ ಗ್ರಾಹಕರು ಎಚ್ಚರ ವಹಿಸಬೇಕು. ಅಲ್ಲದೇ, ಈ ಮಾದರಿಯ ದೂರವಾಣಿ ಕರೆಗಳ ಬಗೆಗೂ ಜಾಗೃತಿ ಅಗತ್ಯ. ಅಮಾಯಕರನ್ನೇ ಗುರಿಯಾಗಿಸಿಕೊಳ್ಳುವ ಖದೀಮರು, ನಿಮ್ಮ 4ಜಿ ಸಿಮ್‌ ಕಾರ್ಡನ್ನು 5ಜಿಯಾಗಿ ಅಪ್‌ಡೇಟ್‌ ಮಾಡುತ್ತೇವೆ. ನಿಮಗೆ ಬಂದಿರುವ ಒಟಿಪಿ ನೀಡಿ ಎಂದು ಕರೆ ಮಾಡಬಹುದು. ಇಲ್ಲವೇ, ಲಿಂಕ್‌ಗಳನ್ನು ಕಳಿಸಿ ಅವುಗಳನ್ನು ಕ್ಲಿಕ್‌ ಮಾಡುವಂತೆ ಸೂಚಿಸಬಹುದು. ಸೈಬರ್‌ ವಂಚಕರು ಸಾರ್ವಜನಿಕ ಗ್ರಾಹಕರನ್ನು ಸಂಪರ್ಕಿಸಿ ಹಲವು ವಂಚನಾ ಮಾರ್ಗಗಳ ಮೂಲಕ ಸಾರ್ವಜನಿಕ ಗ್ರಾಹಕರ ಮೊಬೈಲಿಗೆ ಒಟಿಪಿ ಬರುವಂತೆ ಮಾಡುತ್ತಾರೆ. ಕೆಲವೊಮ್ಮೆ ಅಪ್‌ಡೇಟ್‌/ಅಪ್ ಗ್ರೇಡ್ ನೆಪದಲ್ಲಿ ಗ್ರಾಹಕರ ಹಳೆಯ ಸಿಮ್‌ಕಾರ್ಡ್‌ ಅನ್ನು ವಂಚಕರೇ ಬಳಸಿಕೊಳ್ಳುವ ಅಪಾಯವೂ ಇರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸೈಬರ್‌ ತಜ್ಞರು ಎಚ್ಚರಿಸಿದ್ದಾರೆ.

ಇದನ್ನೂ ಓದಿ
Image
WhatsApp Hack: ನಿಮ್ಮ ವಾಟ್ಸ್​ಆ್ಯಪ್ ಮೆಸೇಜ್ ನಿಮಗೆ ತಿಳಿಯದಂತೆ ಬೇರೆಯವರು ಓದುತ್ತಿರಬಹುದು: ಪತ್ತೆಹಚ್ಚಲು ಇಲ್ಲಿದೆ ಟ್ರಿಕ್
Image
Oppo A77s: 33W ಫಾಸ್ಟ್ ಚಾರ್ಜರ್, 50MP ಕ್ಯಾಮೆರಾ: ಒಪ್ಪೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ
Image
Twitter: ಟ್ವಿಟರ್​ನಲ್ಲಿ ಬಂದಿದೆ ಹೊಸ ಆಯ್ಕೆ: ಈಗ ಜಿಫ್, ಫೋಟೋ, ವಿಡಿಯೋವನ್ನು ಒಂದೇ ಟ್ವೀಟ್​ನಲ್ಲಿ ಬಳಸಿ
Image
Amazon Happiness Upgrade Days Sale: ಅಮೆಜಾನ್​ನಲ್ಲಿ ಹ್ಯಾಪಿನೆಸ್ ಅಪ್​ಗ್ರೇಡ್ ಸೇಲ್: 20,000 ರೂ. ಒಳಗೆ ಸಿಗುತ್ತಿದೆ ಈ 5G ಸ್ಮಾರ್ಟ್​ಫೋನ್​ಗಳು

ಟೆಲಿಕಾಂ ಕಂಪನಿಗಳು ಕೂಡ ನಿಮ್ಮಲ್ಲಿ ಹಳೆಯ ಸ್ಮಾರ್ಟ್​ಫೋನ್​ಗಳಿದ್ದರೆ ಹೊಸ 5ಜಿ ಫೋನನ್ನು ಖರೀದಿಸುವಂತೆ ಬಳಕೆದಾರರ ಬಳಿ ಮನವಿ ಮಾಡಿದೆ. ಮುಖ್ಯವಾದ ಅಂಶ ಎಂದರೆ ನಿಮ್ಮ ಮೊಬೈಲ್​ನಲ್ಲಿ ಈಗಿರುವ ಸಿಮ್ ಮೂಲಕವೇ 5ಜಿ ಕಾರ್ಯನಿರ್ವಹಿಸಲಿದೆ. ಅಂದರೆ 5ಜಿ ಸೇವೆ ಪಡೆಯಲು ಯಾವುದೇ ಹೊಸ ಸಿಮ್​ನ ಅಗತ್ಯವಿಲ್ಲ. ನಿಮ್ಮ ಪ್ರದೇಶದಲ್ಲಿ 5ಜಿ ಲಭ್ಯವಾಗುತ್ತಿದೆ ಎಂದಾದರೆ ಸ್ಮಾರ್ಟ್​ಫೋನ್​ನಲ್ಲಿ ನೆಟ್​ವರ್ಕ್​ ಸೆಟ್ಟಿಂಗ್​ಗೆ ಹೋಗಿ 5ಜಿ ಅನ್ನು ಚಾಲ್ತಿ ಮಾಡಿದರೆ ಸಾಕು ಎಂದು ಹೇಳಿದೆ.

Published On - 11:26 am, Sat, 8 October 22

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ