AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಫಾಸ್ಟ್ಯಾಗ್ ರಿಚಾರ್ಜ್ ಮಾಡುವಾಗ ಒಂದು ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ: ತಪ್ಪಿಯೂ ಹೀಗೆ ಮಾಡಬೇಡಿ

FASTag Scam: ಉಡುಪಿಯ ಬ್ರಹ್ಮಾವರದ ನಿವಾಸಿ ಪ್ರಾನ್ಸಿಸ್‌ ಪಾಯಸ್‌ ಎಂಬವರು ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಕಳೆದ ಜನವರಿ 29 ರಂದು ಪ್ರಾನ್ಸಿಸ್‌ ತಮ್ಮ ಕಾರಿನಲ್ಲಿ ಮಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದಲ್ಲಿ ಹೆಜಮಾಡಿಯ ಟೋಲ್ ಪ್ಲಾಜಾದಲ್ಲಿ ತನ್ನ ಫಾಸ್ಟ್‌ಟ್ಯಾಗ್‌ನಲ್ಲಿ ಬ್ಯಾಲೆನ್ಸ್‌ ಕಡಿಮೆ ಇರುವುದು ಗಮನಿಸಿದ್ದಾರೆ.

Cyber Crime: ಫಾಸ್ಟ್ಯಾಗ್ ರಿಚಾರ್ಜ್ ಮಾಡುವಾಗ ಒಂದು ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ: ತಪ್ಪಿಯೂ ಹೀಗೆ ಮಾಡಬೇಡಿ
FasTag Scam
Follow us
Vinay Bhat
| Updated By: Digi Tech Desk

Updated on:Feb 02, 2023 | 2:48 PM

ದೇಶದಲ್ಲಿ ಸೈಬರ್ ಕ್ರೈಮ್ (Cyber Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಕ್ಕೊಂದು ಹೊಸ ಹೊಸ ಪ್ರಕರಣಗಳು ವರದಿ ಆಗುತ್ತಲೇ ಇದೆ. ಆನ್‌ಲೈನ್‌ ಸ್ಕ್ಯಾಮ್‌ಗಳ ಬಗ್ಗೆ ಎಚ್ಚರಿಕೆ ವಹಿಸಿದರೂ ಕೂಡ ವಂಚಕರು ಮಾತ್ರ ಹೊಸ ಹೊಸ ಮಾರ್ಗಗಳ ಮೂಲಕ ಜನರನ್ನು ವಂಚಿಸುವ ಕೆಲಸ ಮಾಡುತ್ತಲೇ ಇದ್ದಾರೆ. ಅನಾಮಿಕರ ಮಾತು ನಂಬಿ ಒಟಿಪಿ (OTP) ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ ಇದೆ. ವಿದ್ಯುತ್ ಬಿಲ್, ಓಟಿಪಿ, ಕ್ರೆಡಿಟ್ ಕಾರ್ಡ್ ಸ್ಕ್ಯಾಮ್​, ಮಿಸ್ಡ್‌ಕಾಲ್‌ (Missed Call) ಕೊಡುವ ಮೂಲಕ ಫೋನ್‌ಗೆ ಸಿಮ್ ಸ್ವ್ಯಾಪ್ ಮಾಡಿ ಹಣ ದೋಚಿಕೊಳ್ಳುತ್ತಿದ್ದಾರೆ. ಕಳೆದ ವಾರವಷ್ಟೆ ಗುರುಗ್ರಾಮ ಮಹಿಳೆ ಬ್ಯಾಂಕ್ ಎಸ್​ಎಮ್​ಎಸ್ ಮೇಲೆ ಕ್ಲಿಕ್ ಮಾಡಿ 1 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ವರದಿ ಆಗಿತ್ತು. ಇದೀಗ ಫಾಸ್ಟ್ಯಾಗ್ ಸಹಾಯವಾಣಿಯ ಹೆಸರಿನಲ್ಲಿ ಉಡುಪಿಯ ಬ್ರಹ್ಮಾವರದ ನಿವಾಸಿಯೊಬ್ಬರಿಗೆ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾರೆ.

ಉಡುಪಿಯ ಬ್ರಹ್ಮಾವರದ ನಿವಾಸಿ ಪ್ರಾನ್ಸಿಸ್‌ ಪಾಯಸ್‌ ಎಂಬವರು ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಕಳೆದ ಜನವರಿ 29 ರಂದು ಪ್ರಾನ್ಸಿಸ್‌ ತಮ್ಮ ಕಾರಿನಲ್ಲಿ ಮಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದಲ್ಲಿ ಹೆಜಮಾಡಿಯ ಟೋಲ್ ಪ್ಲಾಜಾದಲ್ಲಿ ತನ್ನ ಫಾಸ್ಟ್ಯಾಗ್​ನಲ್ಲಿ ಬ್ಯಾಲೆನ್ಸ್‌ ಕಡಿಮೆ ಇರುವುದು ಗಮನಿಸಿದ್ದಾರೆ. ತಕ್ಷಣ ಫಾಸ್ಟ್‌ಟ್ಯಾಗ್‌ ಹೆಲ್ಪ್‌ಲೈನ್‌ ಸಂಖ್ಯೆಯನ್ನು ಗೂಗಲ್​ನಲ್ಲಿ ಸರ್ಚ್‌ ಮಾಡಿದ್ದಾರೆ. ಇಲ್ಲಿ ತೋರಿಸಿದ ಫಾಸ್ಟ್ಯಾಗ್​ ಸಹಾಯವಾಣಿ ಹೆಲ್ಪ್‌ಲೈನ್‌ ನಂಬರ್​ಗೆ ಕರೆ ಮಾಡಿದ್ದಾರೆ. ಅಸಲಿಗೆ ಅದು ಫೇಕ್ ನಂಬರ್ ಆಗಿತ್ತು.

ಇಂಡಿಯನ್ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ಪಾಯಸ್‌ ಅವರ ಕರೆಯನ್ನು ಸ್ವಿಕರಿಸಿದ ವ್ಯಕ್ತಿ ನಾನು ಪೇಟಿಎಂ ಫಾಸ್ಟ್ಯಾಗ್​​ನ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದಾನೆ. ಇದನ್ನು ನಂಬಿದ ಪಾಯಸ್‌ ಫಾಸ್ಟ್ಯಾಗ್​ ರೀಚಾರ್ಜ್ ಮಾಡುವುದಕ್ಕೆ ಆತ ಹೇಳಿದ ರೀತಿಯಲ್ಲಿ ನಡೆದುಕೊಂಡಿದ್ದಾರೆ. ತನ್ನ ಮೊಬೈಲ್‌ಗೆ ಬಂದಿದ್ದ ಒಟಿಪಿ ಸಂಖ್ಯೆಯನ್ನು ಕೂಡ ಹಂಚಿಕೊಂಡಿದ್ದಾರೆ. ಓಟಿಪಿ ಶೇರ್ ಮಾಡಿದ ಕೂಡಲೇ ಕರೆ ಕಡಿತಗೊಳಿಸಿದ ವಂಚಕ ಪಾಯಸ್‌ ಅವರ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ್ದಾನೆ. ಪಾಯಸ್‌ ಮೊದಲಿಗೆ 49,000ರೂ. ಡೆಬಿಟ್‌ ಆಗಿದೆ. ನಂತರ 19,999ರೂ., 19,998ರೂ., 9,999ರೂ., ಮತ್ತು 1,000ರೂ. ಹೀಗೆ ಹಂತಹಂತವಾಗಿ ಒಟ್ಟು 99,997 ರೂ. ಹಣವನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ
Image
WhatsApp Ban: ಭಾರತದಲ್ಲಿ 36 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಮೆಟಾ: ಯಾಕೆ?
Image
Budget 2023: ಬಿಎಸ್​ಎನ್​ಎಲ್ 5ಜಿ ನೆಟ್ವರ್ಕ್ ಅಭಿವೃದ್ಧಿಗೆ 53 ಸಾವಿರ ಕೋಟಿ ರೂ
Image
Samsung Galaxy S23 series: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿ ಅನಾವರಣ: ಟೆಕ್ ಪ್ರಿಯರನ್ನು ದಂಗಾಗಿಸಿದೆ ಈ ಸ್ಮಾರ್ಟ್​ಫೋನ್
Image
ಭಾರತದ ಮೊದಲ ಹೈಡ್ರೋಜನ್ ರೈಲು ಘೋಷಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಏನಿದರ ವಿಶೇಷತೆ?

JIO-Vi-Airtel: 365 ದಿನಗಳ ವ್ಯಾಲಿಡಿಟಿ ಹೊಂದಿರುವ ಬೆಸ್ಟ್ ಯೋಜನೆಗಳು ಇಲ್ಲಿದೆ ನೋಡಿ

ಇದು ಸ್ಕ್ಯಾಮ್ ಎಂದು ಅರಿತ ಪಾಯಸ್ ಕೂಡಲೇ ಉಡುಪಿ ಸಿಇಎನ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಪಾಯಸ್‌ ಅವರು ವಂಚಕ ಹೇಳಿದ ರೀತಿ ಥರ್ಡ್‌ ಪಾರ್ಟಿ ಅಪ್ಲಿಕೇಶನ್ ಒಂದನ್ನು ಇನ್​ಸ್ಟಾಲ್ ಮಾಡಿರುವುದರಿಂದ ಹಣ ಎಗರಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

ಕಳೆದ ವಾರವಷ್ಟೆ ಗುರುಗ್ರಾಮದಲ್ಲಿ ವಾಸಿಸುತ್ತಿರುವ ಮಾಧ್ವಿ ದತ್ತಾ ಎಂಬ ಮಹಿಳೆಗೆ ಜನವರಿ 21 ರಂದು ಇನ್​ಬಾಕ್ಸ್​ಗೆ ಒಂದು ಎಸ್​ಎಮ್​ಎಸ್ ಬಂದಿದೆ. ”ನಿಮ್ಮ ಹೆಚ್​ಡಿಎಫ್​ಸಿ ಖಾತೆಯ ಅವದಿ ಇಂದಿಗೆ ಮುಕ್ತಾಯಗೊಳ್ಳುತ್ತದೆ, ತಕ್ಷಣವೆ ಇಲ್ಲಿ ಕ್ಲಿಕ್ ಮಾಡುವ ಮೂಲಕ ನಿಮ್ಮ ಮೊಬೈಲ್ ನಂಬರ್ ಮತ್ತು ಪಾನ್ ಕಾರ್ಡ್ ನಂಬರ್​ಗೆ ಲಿಂಕ್ ಮಾಡಿ”, ಎಂಬ ಸಂದೇಶ ಬಂದಿದೆ. ಇದು ಬ್ಯಾಂಕ್​ನಿಂದ ಬಂದ ಮೆಸೇಜ್ ಎಂದು ನಂಬಿದ ಮಹಿಳೆ ಲಿಂಕ್ ತೆರೆದ ತಕ್ಷಣ ಒಂದು ವೆಬ್ ಪೇಜ್ ಓಪನ್ ಆಗಿದೆ. ಅಲ್ಲಿರುವ ಮಾಹಿತಿಯನ್ನು ಭರ್ತಿ ಮಾಡಿದ್ದಾರೆ. ನಂತರ ಓಟಿಪಿ ಹಾಕುವಂತೆ ಸೂಚಿಸಲಾಗಿದೆ. ಮಹಿಳೆ ಓಟಿಪಿ ಹಾಕಿದ ತಕ್ಷಣ ಖಾತೆಯಿಂದ 1 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 2 February 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್