Airtel 5G: 80ಕ್ಕೂ ಅಧಿಕ ನಗರಗಳಲ್ಲಿ ಏರ್ಟೆಲ್ 5G ಲಾಂಚ್: ಪ್ಲಾನ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

ಇದೀಗ ಏರ್ಟೆಲ್ ಒಟ್ಟು 80 ಕ್ಕೂ ಅಧಿಕ ಪ್ರದೇಶಗಳಲ್ಲಿ 5ಜಿ ಲಭ್ಯವಾಗುವಂತೆ ಮಾಡಿದೆ. ಅಲ್ಲದೆ ಕೊಹಿಮಾ, ಇಟಾನಗರ್, ಐಜ್ವಾಲ್, ಗ್ಯಾಂಗ್ಟಾಕ್, ಸಿಲ್ಚಾರ್, ದಿಬ್ರುಗಢ್ ಮತ್ತು ಟಿನ್ಸುಕಿಯಾದಲ್ಲಿ ವಾಸಿಸುವ ಏರ್ಟೆಲ್ ಬಳಕೆದಾರರು ಈಗ ಹೆಚ್ಚಿನ ವೇಗದ ಏರ್‌ಟೆಲ್ 5G ಪ್ಲಸ್ ಸೇವೆಗಳನ್ನು ಉಚಿತವಾಗಿ ಬಳಸಬಹುದು ಎಂದು ಕಂಪನಿ ಹೇಳಿದೆ.

Airtel 5G: 80ಕ್ಕೂ ಅಧಿಕ ನಗರಗಳಲ್ಲಿ ಏರ್ಟೆಲ್ 5G ಲಾಂಚ್: ಪ್ಲಾನ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
ಏರ್ಟೆಲ್
Follow us
| Updated By: Vinay Bhat

Updated on:Feb 17, 2023 | 11:33 AM

ಭಾರತದಲ್ಲಿ 5ಜಿ (5G) ಯುಗ ಆರಂಭವಾಗಿ ತಿಂಗಳುಗಳು ಕಳೆದಿದ್ದು ಬಳಕೆದಾರರಿಂದ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ರಿಲಯನ್ಸ್ ಜಿಯೋ (JIO) ಹಾಗೂ ಭಾರ್ತಿ ಏರ್ಟೆಲ್ ಪೈಪೋಟಿಗೆ ಬಿದ್ದಂತೆ ವೇಗವಾಗಿ ಅನೇಕ ನಗರಗಳಲ್ಲಿ 5ಜಿ ಸೇವೆಯನ್ನು ಆರಂಭಿಸುತ್ತಿದೆ. ಇದೀಗ ಏರ್ಟೆಲ್ ಒಟ್ಟು 80 ಕ್ಕೂ ಅಧಿಕ ಪ್ರದೇಶಗಳಲ್ಲಿ 5ಜಿ ಲಭ್ಯವಾಗುವಂತೆ ಮಾಡಿದೆ. ಅಲ್ಲದೆ ಕೊಹಿಮಾ, ಇಟಾನಗರ್, ಐಜ್ವಾಲ್, ಗ್ಯಾಂಗ್ಟಾಕ್, ಸಿಲ್ಚಾರ್, ದಿಬ್ರುಗಢ್ ಮತ್ತು ಟಿನ್ಸುಕಿಯಾದಲ್ಲಿ ವಾಸಿಸುವ ಏರ್ಟೆಲ್ (Airtel) ಬಳಕೆದಾರರು ಈಗ ಹೆಚ್ಚಿನ ವೇಗದ ಏರ್‌ಟೆಲ್ 5G ಪ್ಲಸ್ ಸೇವೆಗಳನ್ನು ಉಚಿತವಾಗಿ ಬಳಸಬಹುದು ಎಂದು ಕಂಪನಿ ಹೇಳಿದೆ.

ಏರ್ಟೆಲ್ 5G ಪ್ಲಸ್ ಹೊಸದಾಗಿ ಏಳು ರಾಜ್ಯಗಳಾದ್ಯಂತ ಪ್ರಾರಂಭಿಸುವುದರೊಂದಿಗೆ ಏರ್ಟೆಲ್ 5G ಲಭ್ಯವಿರುವ ನಗರಗಳ ಸಂಖ್ಯೆ 80 ದಾಟಿದೆ. ಈ ನಗರಗಳಲ್ಲಿ ವಾಸಿಸುವ ಜನರು ತಮ್ಮ 5G ಸಕ್ರಿಯಗೊಳಿಸಿದ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಈ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತದೆ ಎಂದು ಕಂಪನಿ ಭರವಸೆ ನೀಡಿದೆ. ಯಾವ ರಾಜ್ಯಗಳ ಯಾವ ನಗರಗಳಲ್ಲಿ ಏರ್ಟೆಲ್ 5ಜಿ ಸೇವ್ ಲಭ್ಯವಿದೆ ಎಂಬುದನ್ನು ನೋಡುವುದಾದರೆ…

WhatsApp Web: ನೀವು ವಾಟ್ಸ್​ಆ್ಯಪ್ ವೆಬ್ ಬಳಸುತ್ತಿದ್ದೀರಾ?: ಬರುತ್ತಿದೆ ಅಚ್ಚರಿ ಗೊಳಿಸುವ ಹೊಸ ಫೀಚರ್

ಇದನ್ನೂ ಓದಿ
Image
Google India: ಭಾರತದ 453 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ಗೂಗಲ್
Image
Lava Blaze 5G: ವಿದೇಶಿ ಮೊಬೈಲ್ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ ಬ್ಲೇಜ್ ಈಗ ಖರೀದಿಗೆ ಲಭ್ಯ
Image
Tech Tips: ಪವರ್ ಬ್ಯಾಂಕ್ ಅಲ್ಲ: ಕರೆಂಟ್ ಇಲ್ಲದೆಯೂ ನಿಮ್ಮ ಮೊಬೈಲ್ ಚಾರ್ಜ್ ಮಾಡಬಹುದು: ಹೇಗೆ ಗೊತ್ತೇ?
Image
Tech Tips: ನಿಮಗೆ ಇನ್​ಸ್ಟಾಗ್ರಾಮ್​ನಲ್ಲಿ ಬ್ಲೂ ಟಿಕ್ ಬೇಕೇ?: ವೇರಿಫೈಡ್‌ ಬ್ಯಾಡ್ಜ್ ಪಡೆಯಲು ಇಲ್ಲಿದೆ ಹೊಸ ಟ್ರಿಕ್

ಅಸ್ಸಾಂ- ಗುವಾಹಟಿ, ತಿನ್ಸುಕಿಯಾ, ದಿಬ್ರುಗಢ್, ಸಿಲ್ಚಾರ್

ಆಂಧ್ರಪ್ರದೇಶ- ವೈಜಾಗ್, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ಗುಂಟೂರು, ಕರ್ನೂಲ್ ಮತ್ತು ತಿರುಪತಿ

ಬಿಹಾರ- ಪಾಟ್ನಾ, ಮುಜಾಫರ್‌ಪುರ, ಬೋಧಗಯಾ ಮತ್ತು ಭಾಗಲ್‌ಪುರ

ದೆಹಲಿ

ಗುಜರಾತ್- ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್ಕೋಟ್

ಹರಿಯಾಣ- ಗುರುಗ್ರಾಮ್, ಪಾಣಿಪತ್, ಫರಿದಾಬಾದ್, ಅಂಬಾಲಾ, ಕರ್ನಾಲ್, ಸೋನಿಪತ್, ಯಮುನಾನಗರ ಮತ್ತು ಬಹದ್ದೂರ್ಗಢ

ಹಿಮಾಚಲ ಪ್ರದೇಶ – ಶಿಮ್ಲಾ

ಜಮ್ಮು ಮತ್ತು ಕಾಶ್ಮೀರ- ಜಮ್ಮು, ಶ್ರೀನಗರ, ಸಾಂಬಾ, ಕಥುವಾ, ಉಧಂಪುರ, ಅಖ್ನೂರ್, ಕುಪ್ವಾರ, ಲಖನ್‌ಪುರ್ ಮತ್ತು ಖೌರ್

ಜಾರ್ಖಂಡ್- ರಾಂಚಿ ಮತ್ತು ಜಮ್ಶೆಡ್‌ಪುರ

ಕರ್ನಾಟಕ – ಬೆಂಗಳೂರು

ಕೇರಳ- ಕೊಚ್ಚಿ, ತಿರುವನಂತಪುರಂ, ಕೋಝಿಕ್ಕೋಡ್ ಮತ್ತು ತ್ರಿಶೂರ್

ಮಹಾರಾಷ್ಟ್ರ- ಮುಂಬೈ, ನಾಗ್ಪುರ ಮತ್ತು ಪುಣೆ

ಮಧ್ಯಪ್ರದೇಶ – ಇಂದೋರ್

ಮಣಿಪುರ-ಇಂಫಾಲ್

ಒಡಿಶಾ- ಭುವನೇಶ್ವರ್, ಕಟಕ್, ರೌರ್ಕೆಲ, ಪುರಿ

ರಾಜಸ್ಥಾನ- ಜೈಪುರ, ಕೋಟಾ ಮತ್ತು ಉದಯಪುರ

ತಮಿಳುನಾಡು- ಚೆನ್ನೈ, ಕೊಯಮತ್ತೂರು, ಮಧುರೈ, ಹೊಸೂರು ಮತ್ತು ತಿರುಚ್ಚಿ

ತೆಲಂಗಾಣ- ಹೈದರಾಬಾದ್, ವಾರಂಗಲ್ ಮತ್ತು ಕರೀಂನಗರ

ಸಿಕ್ಕಿಂ- ಗ್ಯಾಂಗ್ಟಾಕ್

ಮಿಜೋರಾಂ- ಐಜ್ವಾಲ್

ಅರುಣಾಚಲ ಪ್ರದೇಶ- ಇಟಾನಗರ

ನಾಗಾಲ್ಯಾಂಡ್-ಕೊಹಿಮಾ

ಛತ್ತೀಸ್‌ಗಢ-ರಾಯಪುರ ಮತ್ತು ದುರ್ಗ್-ಭಿಲೈ

ತ್ರಿಪುರ-ಅಗರ್ತಲಾ

ಉತ್ತರಾಖಂಡ- ಡೆಹ್ರಾಡೂನ್

ಉತ್ತರ ಪ್ರದೇಶ- ವಾರಣಾಸಿ, ಲಕ್ನೋ, ಆಗ್ರಾ, ಮೀರತ್, ಗೋರಖ್‌ಪುರ, ಕಾನ್ಪುರ್, ಪ್ರಯಾಗರಾಜ್, ನೋಯ್ಡಾ ಮತ್ತು ಗಾಜಿಯಾಬಾದ್

ಪಶ್ಚಿಮ ಬಂಗಾಳ- ಸಿಲಿಗುರಿ

ಏರ್ಟೆಲ್ 4G ಗೆ ಹೋಲಿಸಿದರೆ 30 ಪಟ್ಟು ಹೆಚ್ಚಿನ ವೇಗವನ್ನು 5G ನೀಡುತ್ತದೆ ಎಂದು ಕಂಪನಿ ಹೇಳಿದೆ. 5ಜಿ ತಂತ್ರಜ್ಞಾನವು ತಡೆರಹಿತ ಕವರೇಜ್, ಶತಕೋಟಿ ಡಿವೈಸ್​ಗಳನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ. ಹೆಚ್ಚಿನ ವೇಗದಲ್ಲಿ ಉತ್ತಮ ಗುಣಮಟ್ಟದ ವಿಡಿಯೊ ಕರೆ ಸೇವೆಗಳನ್ನು ಒದಗಿಸುತ್ತದೆ. ಉತ್ತಮ ಮತ್ತು ಗುಣಮಟ್ಟದ ವಿಡಿಯೋ ಅಥವಾ ಚಲನಚಿತ್ರವನ್ನು ಮೊಬೈಲ್ ಸಾಧನದಲ್ಲಿ ಕೆಲವೇ ಸೆಕೆಂಡುಗಳಲ್ಲಿ ಡೌನ್‌ಲೋಡ್ ಮಾಡಲು (ಜನಸಂದಣಿ ಇರುವ ಪ್ರದೇಶಗಳಲ್ಲಿಯೂ ಸಹ) ಅನುಮತಿಸುತ್ತದೆ. ಜಿಯೋ 5G ಗಿಂತ ಭಿನ್ನವಾಗಿ ಏರ್ಟೆಲ್ ತನ್ನ 5G ಸೇವೆಗಳನ್ನು ಎಲ್ಲರಿಗೂ ನೀಡುತ್ತದೆ. ಆದ್ದರಿಂದ, ಬಳಕೆದಾರರು ಕನಿಷ್ಟ ರೀಚಾರ್ಜ್ ಯೋಜನೆಯನ್ನು ಪಡೆಯಬೇಕಾಗಿಲ್ಲ. ಬದಲಾಗಿ, ಏರ್‌ಟೆಲ್ 5G ಈಗಿರುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತದೆ.

ನಿಮ್ಮಲ್ಲಿ ಹಳೆಯ ಸ್ಮಾರ್ಟ್​ಫೋನ್​ಗಳಿದ್ದರೆ ಹೊಸ 5ಜಿ ಫೋನನ್ನು ಖರೀದಿಸುವಂತೆ ಏರ್ಟೆಲ್ ಬಳಕೆದಾರರ ಬಳಿ ಮನವಿ ಮಾಡಿದೆ. ಮುಖ್ಯವಾದ ಅಂಶ ಎಂದರೆ ನಿಮ್ಮ ಮೊಬೈಲ್​ನಲ್ಲಿ ಈಗಿರುವ ಏರ್ಟೆಲ್ ಸಿಮ್ ಮೂಲಕವೇ 5ಜಿ ಕಾರ್ಯನಿರ್ವಹಿಸಲಿದೆ. ಅಂದರೆ 5ಜಿ ಸೇವೆ ಪಡೆಯಲು ಯಾವುದೇ ಹೊಸ ಸಿಮ್​ನ ಅಗತ್ಯವಿಲ್ಲ. ನಿಮ್ಮ ಪ್ರದೇಶದಲ್ಲಿ 5ಜಿ ಲಭ್ಯವಾಗುತ್ತಿದೆ ಎಂದಾದರೆ ಸ್ಮಾರ್ಟ್​ಫೋನ್​ನಲ್ಲಿ ನೆಟ್​ವರ್ಕ್​ ಸೆಟ್ಟಿಂಗ್​ಗೆ ಹೋಗಿ 5ಜಿ ಅನ್ನು ಚಾಲ್ತಿ ಮಾಡಿದರೆ ಸಾಕು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 17 February 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ