AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಟೆಲ್​ನಿಂದ ಕೋಟಿಗಟ್ಟಲೆ ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ: ಒಂದು ತಪ್ಪು ದುಬಾರಿಯಾಗಬಹುದು

Airtel Online Scam Alert: ಕೆವೈಸಿ ಅಪ್‌ಡೇಟ್, ಯೂಸರ್ ಐಡಿ, ಪಾಸ್‌ವರ್ಡ್, ಡೆಬಿಟ್ ಕಾರ್ಡ್ ಸಂಖ್ಯೆ, ಪಿನ್, ಸಿವಿವಿ ಅಥವಾ ಒಟಿಪಿ ಇತ್ಯಾದಿಗಳಿಗೆ ಸಂಬಂಧಿಸಿದ ಯಾವುದೇ ಕರೆ, ಸಂದೇಶ ಅಥವಾ ಇಮೇಲ್ ಸ್ವೀಕರಿಸಿದರೆ, ಲಿಂಕ್ ಬಂದರೆ ಅದನ್ನು ನಿರ್ಲಕ್ಷಿಸಿ ಎಂದು ಏರ್‌ಟೆಲ್ ತನ್ನ ಬಳಕೆದಾರರಿಗೆ ಸಂದೇಶದ ಮೂಲಕ ಎಚ್ಚರಿಕೆ ನೀಡಿದೆ.

ಏರ್‌ಟೆಲ್​ನಿಂದ ಕೋಟಿಗಟ್ಟಲೆ ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ: ಒಂದು ತಪ್ಪು ದುಬಾರಿಯಾಗಬಹುದು
Airtel
ಮಾಲಾಶ್ರೀ ಅಂಚನ್​
| Updated By: Vinay Bhat

Updated on: Jan 19, 2025 | 10:25 AM

Share

ಹೆಚ್ಚುತ್ತಿರುವ ಆನ್‌ಲೈನ್ ವಂಚನೆಯ ಬಗ್ಗೆ ಏರ್‌ಟೆಲ್ ತನ್ನ ಕೋಟಿಗಟ್ಟಲೆ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪನಿಯು ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಗಳು ಮತ್ತು ಸಂದೇಶಗಳಿಂದ ದೂರವಿರಲು ಬಳಕೆದಾರರನ್ನು ಕೇಳಿದೆ. ಟೆಲಿಕಾಂ ಕಂಪನಿಯು ಎಸ್ ಎಮ್ ಎಸ್ ಮೂಲಕ ವಂಚನೆಯನ್ನು ತಪ್ಪಿಸಲು ಬಳಕೆದಾರರನ್ನು ಕೇಳಿದೆ. ಇತ್ತೀಚೆಗಷ್ಟೇ ದೂರಸಂಪರ್ಕ ಇಲಾಖೆಯು ಆನ್‌ಲೈನ್ ವಂಚನೆ ತಡೆಯಲು ಟೆಲಿಕಾಂ ಕಂಪನಿಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಅಲ್ಲದೆ, ಸಂದೇಶ ಪತ್ತೆಹಚ್ಚುವಿಕೆ ಸೇರಿದಂತೆ ಹಲವು ಹೊಸ ನಿಯಮಗಳನ್ನು ಅಳವಡಿಸಲಾಗಿತ್ತು.

ಏರ್‌ಟೆಲ್ ಎಚ್ಚರಿಕೆ ನೀಡಿದೆ:

ಕೆವೈಸಿ ಅಪ್‌ಡೇಟ್, ಯೂಸರ್ ಐಡಿ, ಪಾಸ್‌ವರ್ಡ್, ಡೆಬಿಟ್ ಕಾರ್ಡ್ ಸಂಖ್ಯೆ, ಪಿನ್, ಸಿವಿವಿ ಅಥವಾ ಒಟಿಪಿ ಇತ್ಯಾದಿಗಳಿಗೆ ಸಂಬಂಧಿಸಿದ ಯಾವುದೇ ಕರೆ, ಸಂದೇಶ ಅಥವಾ ಇಮೇಲ್ ಸ್ವೀಕರಿಸಿದರೆ, ಲಿಂಕ್ ಬಂದರೆ ಅದನ್ನು ನಿರ್ಲಕ್ಷಿಸಿ ಎಂದು ಏರ್‌ಟೆಲ್ ತನ್ನ ಬಳಕೆದಾರರಿಗೆ ಸಂದೇಶದ ಮೂಲಕ ಎಚ್ಚರಿಕೆ ನೀಡಿದೆ. ಇವರು ಸೈಬರ್ ಅಪರಾಧಿಗಳಾಗಿರಬಹುದು, ಇವರೊಂದಿಗೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಗೊತ್ತಿದ್ದೂ ಅಥವಾ ತಿಳಿಯದೆಯೂ ಹಂಚಿಕೊಳ್ಳುವುದು ದೊಡ್ಡ ವಂಚನೆಗೆ ಕಾರಣವಾಗಬಹುದು ಎಂದು ಹೇಳಿದೆ.

ಇತ್ತೀಚೆಗೆ, ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು, ಜನರಿಂದ ಮಾಹಿತಿ ಪಡೆದ ನಂತರ, ಅವರ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತಾರೆ. ಏರ್‌ಟೆಲ್ ಹೊರತಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಎಸ್‌ಬಿಐ ಕೂಡ ಬ್ಯಾಂಕಿಂಗ್ ಮತ್ತು ಯುಪಿಐ ವಂಚನೆಗೆ ಸಂಬಂಧಿಸಿದಂತೆ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ. ಈ ರೀತಿಯ ವಂಚನೆಗಾಗಿ, ಹ್ಯಾಕರ್‌ಗಳು ಸಾಮಾಜಿಕ ಎಂಜಿನಿಯರಿಂಗ್ ಮೂಲಕ ಜನರನ್ನು ಬಲೆಗೆ ಬೀಳಿಸುತ್ತಾರೆ ಮತ್ತು ಅವರ ವೈಯಕ್ತಿಕ ಮಾಹಿತಿಯನ್ನು ಪಡೆಯುವ ಮೂಲಕ ವಂಚನೆ ಮಾಡುತ್ತಾರೆ.

ತಪ್ಪಿಸುವುದು ಹೇಗೆ?:

ಯಾವುದೇ ರೀತಿಯ ಆರ್ಥಿಕ ವಂಚನೆಯನ್ನು ತಪ್ಪಿಸಲು ಎಚ್ಚರಿಕೆಯೇ ದೊಡ್ಡ ಅಸ್ತ್ರವಾಗಿದೆ. ನೀವು ಅಂತಹ ಯಾವುದೇ ಸಂದೇಶ ಅಥವಾ ಕರೆಯನ್ನು ಪಡೆದರೆ, ಅದನ್ನು ನಿರ್ಲಕ್ಷಿಸಿ.

10 ರೂ. ರೀಚಾರ್ಜ್, 365 ದಿನಗಳ ವ್ಯಾಲಿಡಿಟಿ: TRAI ನ ಹೊಸ ನಿಯಮ ಯಾವಾಗಿಂದ ಜಾರಿ

ಉಚಿತ ಉಡುಗೊರೆಗಳು ಅಥವಾ ಬಹುಮಾನಗಳ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಿಮ್ಮನ್ನು ಬಲೆಗೆ ಬೀಳಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ಉಚಿತ ಉಡುಗೊರೆ ಅಥವಾ ಲಾಟರಿಗೆ ಸಂಬಂಧಿಸಿದ ಕರೆ ಅಥವಾ ಸಂದೇಶವನ್ನು ಪಡೆದರೆ, ಅದಕ್ಕೆ ಪ್ರತಿಕ್ರಿಯಿಸಬೇಡಿ.

ಅನೇಕ ಜನರು ಸೈಬರ್ ಅಪರಾಧಿಗಳಿಂದ ಪ್ರಲೋಭನಗೊಳಿಸುವ ಆಫರ್‌ಗಳ ಬಲೆಗೆ ಬೀಳುತ್ತಾರೆ ಮತ್ತು ತಮ್ಮ ಬ್ಯಾಂಕಿಂಗ್ ವಿವರಗಳನ್ನು ಹಂಚಿಕೊಳ್ಳುತ್ತಾರೆ. ಹೀಗೆ ಮಾಡುವುದರಿಂದ ಮೋಸ ಹೋಗುತ್ತಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಾರ, ಯಾವುದೇ ಬ್ಯಾಂಕ್ ಅಥವಾ ಏಜೆನ್ಸಿಯು ನಿಮ್ಮನ್ನು OTP, ಅಥವಾ PIN ಅನ್ನು ಕೇಳುವುದಿಲ್ಲ ಅಥವಾ ನಿಮ್ಮ ಖಾತೆ ಸಂಖ್ಯೆ ಮತ್ತು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಸಂಖ್ಯೆಯನ್ನು ಕೇಳುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿಮಗೆ ಅಂತಹ ಯಾವುದೇ ಕರೆ ಬಂದರೆ, ಅದು ಸೈಬರ್ ಕ್ರಿಮಿನಲ್‌ನಿಂದ ಆಗಿರಬಹುದು.

ನೀವು ಸೈಬರ್ ವಂಚನೆಗೆ ಒಳಗಾಗಿದ್ದರೆ, ಮೊದಲು ತಕ್ಷಣ ದೂರು ದಾಖಲಿಸಬೇಕು. ಸೈಬರ್ ಕ್ರೈಂ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ ನಂತರವೂ ಶೇ. 99ರಷ್ಟು ಪ್ರಕರಣಗಳಲ್ಲಿ ಹಣ ವಾಪಸ್ ಆಗಿಲ್ಲ. ವಂಚನೆಯಾದ ಅರ್ಧ ಗಂಟೆ ಅಥವಾ 1 ಗಂಟೆಯೊಳಗೆ ನೀವು ದೂರು ನೀಡಿದರೆ, ನಿಮ್ಮ ಹಣವನ್ನು ಮರಳಿ ಪಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಇದಕ್ಕಾಗಿ ನೀವು 1930 ಸೈಬರ್ ಅಪರಾಧ ಸಹಾಯವಾಣಿಗೆ ಕರೆ ಮಾಡಬಹುದು ಅಥವಾ cybercrime.gov.in ಪೋರ್ಟಲ್‌ನಲ್ಲಿ ದೂರು ಸಲ್ಲಿಸಬಹುದು.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್