AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sundar Pichai: ಭಾರತದಲ್ಲಿ ಸ್ಟಾರ್ಟ್-ಅಪ್ ಸಂಸ್ಕೃತಿ ನೋಡಲು ಖುಷಿಯಾಗುತ್ತದೆ, ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಾರೆ: ಗೂಗಲ್ ಸಿಇಒ ಸುಂದರ್ ಪಿಚೈ

ಖಾಸಗಿ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶದಲ್ಲಿ ಮಾತನಾಡಿದ ಸುಂದರ್ ಪಿಚೈ, “ಜಾಗತಿಕ ಮಟ್ಟದಲ್ಲಿ ಭಾರತ ತಮ್ಮನ್ನು ತಾವು ಸಾಬೀತುಪಡಿಸುತ್ತಿದೆ. ಭಾರತದಲ್ಲಿ ಹಲವಾರು ಸ್ಟಾರ್ಟ್‌ಅಪ್‌ಗಳನ್ನು ನೋಡುವುದು ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.

Sundar Pichai: ಭಾರತದಲ್ಲಿ ಸ್ಟಾರ್ಟ್-ಅಪ್ ಸಂಸ್ಕೃತಿ ನೋಡಲು ಖುಷಿಯಾಗುತ್ತದೆ, ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಾರೆ: ಗೂಗಲ್ ಸಿಇಒ ಸುಂದರ್ ಪಿಚೈ
Sundar Pichai, Google CEO
TV9 Web
| Edited By: |

Updated on: Dec 04, 2021 | 9:39 AM

Share

ಸಾಮಾಜಿಕ ಜಾಲತಾಣದ (Social Media) ದಿಗ್ಗಜ ಸಂಸ್ಥೆಗಳಲ್ಲಿ, ಅದರಲ್ಲೂ ಅಮೆರಿಕದ ಹೆಸರಾಂತ ಕಂಪೆನಿಗಳಲ್ಲಿ ಭಾರತದ ಪ್ರತಿಭೆಗಳು ಮುಖ್ಯಸ್ಥರಾಗಿ ನೇಮಕವಾಗುತ್ತಿರುವುದು ಈಗೀಗ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ಟ್ವಿಟ್ಟರ್‌ನ (Twitter) ನೂತನ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಭಾರತ ಮೂಲದ ಅಮೆರಿಕನ್ ಪರಾಗ್ ಅಗರ್ವಾಲ್ (Parag Agarwal) ಆಯ್ಕೆಯಾಗಿದ್ದರು. ಇದರ ನಡುವೆ ಸದ್ಯ ಆಲ್ಪಾಬೆಟ್ ಮತ್ತು ಗೂಗಲ್​ (Google) ಕಂಪನಿಯ ಸಿಇಒ ಸುಂದರ್ ಪಿಚೈ (Sundar Pichai) ಮಾತನಾಡಿದ್ದು, ಭಾರತದಲ್ಲಿ ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ನೋಡಲು ತುಂಬಾನೇ ಖುಷಿಯಾಗಿದೆ. ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಸ್ಕೇಲ್ ಅಪ್ ಮಾಡಲು AI ರೂಪದಲ್ಲಿ ತಾಂತ್ರಿಕ ಬೆಂಬಲವನ್ನು ನೀಡಲು ಗೂಗಲ್ (Google) ಬಯಸುತ್ತದೆ ಎಂದು ಹೇಳಿದ್ದಾರೆ.

ಖಾಸಗಿ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶದಲ್ಲಿ ಮಾತನಾಡಿದ ಸುಂದರ್ ಪಿಚೈ, “ಜಾಗತಿಕ ಮಟ್ಟದಲ್ಲಿ ಭಾರತ ತಮ್ಮನ್ನು ತಾವು ಸಾಬೀತುಪಡಿಸುತ್ತಿದೆ. ಭಾರತದಲ್ಲಿ ಹಲವಾರು ಸ್ಟಾರ್ಟ್‌ಅಪ್‌ಗಳನ್ನು ನೋಡುವುದು ಖುಷಿಯಾಗುತ್ತದೆ. ನಾವು ಭಾರತದಲ್ಲಿನ ಕಂಪನಿಗಳನ್ನು ಬೆಂಬಲಿಸಲು ಬಯಸುತ್ತೇವೆ. ಅವರಿಗೆ AI ಮತ್ತು ತಂತ್ರಜ್ಞಾನವನ್ನು ಒದಗಿಸಲು ಸಹಾಯ ಮಾಡುತ್ತೇವೆ ಇದರಿಂದ ಅವರು ತಮ್ಮ ಕಾರ್ಯವೈಖರಿಯನ್ನು ಹೆಚ್ಚಿಸಬಹುದು” ಎಂದು ಹೇಳಿದ್ದಾರೆ.

ಇದೇವೇಳೆ ದೇಶದಲ್ಲಿನ ಸ್ಟಾರ್ಟ್‌ಅಪ್ ಸಂಸ್ಕೃತಿಯ ಕುರಿತು ಮಾತನಾಡಿದ ಅವರು, “ಭಾರತೀಯರು ಒಂದು ವಸ್ತುಗಳನ್ನು ನಿರ್ಮಿಸುವ ಮತ್ತು ಅದನ್ನು ಜಾಗತಿಕವಾಗಿ ತೆರೆದಿಡುವ ಬಗ್ಗೆ ಗಮನಸುತ್ತಿದ್ದೇನೆ. ಅದಕ್ಕಾಗಿಯೇ ನಾವು ಗೂಗಲ್ ಪೇ ಪರಿಚಯಿಸಿದ್ದೇವೆ. ಜೊತೆಗೆ ಬೇರೆಬೇರೆ ಮಾರುಕಟ್ಟೆಗಳಲ್ಲಿಯೂ ಇದನ್ನು ಅಭಿವೃದ್ದಿ ಪಡಿಸುತ್ತಿದ್ದೇವೆ. ಕೆಲವು ಸಂಗತಿಗಳಿಗೆ ನಾವು ಇವತ್ತು ಅನುಸರಿಸುತ್ತಿರುವ ಕಂಪ್ಯೂಟಿಂಗ್ ಇನ್ನಷ್ಟು ಉತ್ತಮ ಆಗುವ ಸಾಧ್ಯತೆ ಇದೆ. ಆದರೆ ಕೆಲವು ಸಂಗತಿಗಳಿಗೆ ಕ್ವಾಂಟಮ್ ಕಂಪ್ಯೂಟಿಂಗ್ ಹೊಸ ರೇಂಜ್​ನ ಸಲ್ಯೂಷನ್ ತೆರೆದಿಡುತ್ತದೆ” ಎಂದರು.

ಮುಂದಿನ ಭವಿಷ್ಯದ ತಂತ್ರಜ್ಞಾನದ ಕುರಿತು ಪ್ರತಿಕ್ರಿಯಿಸಿದ ಪಿಚೈ, “ಭವಿಷ್ಯದಲ್ಲಿ AI ಮತ್ತು AR (ಆಗ್ಮೆಂಟೆಡ್ ರಿಯಾಲಿಟಿ) ಪ್ರಾಬಲ್ಯ ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಂಪ್ಯೂಟಿಂಗ್ ಜನರಿಗೆ ಸ್ವಾಭಾವಿಕವಾಗಿ ಹೊಂದಿಕೊಳ್ಳುತ್ತದೆ. ಅದು ಮೊಬೈಲ್ ಫೋನ್ ರೀತಿಯಲ್ಲ. ಭವಿಷ್ಯವು ಆಗ್ಮೆಂಟೆಡ್ ರಿಯಾಲಿಟಿ ಆಗಿರುತ್ತದೆ. ನಾವು ಇದರ ಮೇಲೆ ಈಗಾಗಲೇ ಕೆಲಸವನ್ನು ಪ್ರಾರಂಭಿಸಿದ್ದೇವೆ. ಗೂಗಲ್ ಲ್ಯಾಂಬ್ಡಾ ಅಂತಹ ಒಂದು ಉತ್ಪನ್ನವಾಗಿದೆ” ಎಂಬುದು ಅವರ ಅಭಿಪ್ರಾಯ.

“ಇಂದು ನೀವು AR ನ ಅಂಶಗಳನ್ನು ಹೊಂದಿದ್ದೀರಿ. ಆದರೆ ಇದು ಮುಂದಿನ ದಿನಗಳಲ್ಲಿ ಹೆಚ್ಚು ಸ್ವಾಭಾವಿಕವಾಗಿರುತ್ತದೆ. ನೀವು ನೈಜ್ಯ ಪ್ರಪಂಚದೊಂದಿಗೆ ಸಂವಹನ ನಡೆಸಲು ಅಡ್ಡಿಯಾಗುವುದಿಲ್ಲ. ಅಂದರೆ ನೀವು ಹೇಗೆ ನೋಡುತ್ತೀರಿ ಮತ್ತು ಮಾತನಾಡುತ್ತೀರಿ ಎಂಬುದೇಲ್ಲವೂ ಕಂಪ್ಯೂಟಿಂಗ್‌ನಲ್ಲಿಯೂ ಸಹ ಪ್ಲೇ ಆಗುತ್ತವೆ” ಎಂದು ಸುಂದರ್ ಪಿಚೈ ಹೇಳಿದ್ದಾರೆ.

ಪಿಚೈ ಸುಂದರರಾಜನ್, ಆಲ್ಫಾಬೆಟ್ ಹಾಗೂ ಅದರ ಅಂಗಸಂಸ್ಥೆ ಗೂಗಲ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ. 49 ವರ್ಷದ ಪಿಚೈ, ತಮಿಳುನಾಡಿನ ಚೆನ್ನೈನವರು. ಐಐಟಿ ಕಾನ್ಪುರದಲ್ಲಿ ಬಿ-ಟೆಕ್ ಪದವಿ ಪಡೆದ ಅವರು, ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಮತ್ತು ಮೆಟೀರಿಯಲ್ ಸೈನ್ಸ್‌ನಲ್ಲಿ ಎಂಎಸ್ ಮಾಡಿದ್ದಾರೆ. 2004ರಲ್ಲಿ ಗೂಗಲ್‌ನಲ್ಲಿ ವೃತ್ತಿ ಆರಂಭಿಸಿದ ಅವರು, 2015ರ ಆಗಸ್ಟ್ 10ರಂದು ಸಿಇಒ ಆಗಿ ನೇಮಕವಾದರು.

(Alphabet and Google CEO Sundar Pichai said that its heartening to see start-up culture in India)

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ