AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL 4G ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್; ಆತ್ಮನಿರ್ಭರ ಭಾರತ ನನಸಾಗುತ್ತಿದೆ ಎಂದ ಸಚಿವ

BSNL Network: ಬಿಎಸ್​ಎನ್​ಎಲ್ 4ಜಿ ಭಾರತದ ಹಲವು ಪ್ರದೇಶಗಳಲ್ಲಿ ಚಾಲ್ತಿಯಲ್ಲಿ ಇದೆ. ಹಾಗೂ ಡಿಸೆಂಬರ್ 31 ರ ವರೆಗೆ ಗ್ರಾಹಕರಿಗೆ ಉಚಿತ 4ಜಿ ಸಿಮ್​ನ್ನು ಬಿಎಸ್​ಎನ್​ಎಲ್ ನೀಡುತ್ತಿದೆ.

BSNL 4G ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್; ಆತ್ಮನಿರ್ಭರ ಭಾರತ ನನಸಾಗುತ್ತಿದೆ ಎಂದ ಸಚಿವ
ಅಶ್ವಿನಿ ವೈಷ್ಣವ್
TV9 Web
| Edited By: |

Updated on:Oct 10, 2021 | 10:08 PM

Share

ದೆಹಲಿ: ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ 4ಜಿ ನೆಟ್​ವರ್ಕ್​ನ (BSNL 4G Network) ಮೊದಲ ಫೋನ್ ಕಾಲ್ ಮಾಡಿದರು. ಈ ಬಗ್ಗೆ, ಅವರು ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ ಎಂದು ಬರೆದುಕೊಂಡಿದ್ದಾರೆ. ಬಿಎಸ್​ಎನ್​ಎಲ್ 4ಜಿ ಭಾರತದ ಹಲವು ಪ್ರದೇಶಗಳಲ್ಲಿ ಚಾಲ್ತಿಯಲ್ಲಿ ಇದೆ. ಹಾಗೂ ಡಿಸೆಂಬರ್ 31 ರ ವರೆಗೆ ಗ್ರಾಹಕರಿಗೆ ಉಚಿತ 4ಜಿ ಸಿಮ್​ನ್ನು ಬಿಎಸ್​ಎನ್​ಎಲ್ ನೀಡುತ್ತಿದೆ.

ಇದು ಭಾರತದ್ದೇ ಆದ ಮೊದಲ 4ಜಿ ನೆಟ್​ವರ್ಕ್ ಆಗಿದೆ. ಇದರ ಅಭಿವೃದ್ಧಿ ಅಥವಾ ರೋಲ್​ಔಟ್ ಸರಳ, ಸುಲಭ ಆಗಿರಲಿಲ್ಲ. ವರದಿಗಳು ಹೇಳುವಂತೆ ಬಿಎಸ್​ಎನ್​ಎಲ್ ರೋಲ್​ಔಟ್​ನ ಮುಂದಿನ ಹಂತಗಳಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕೂಡ ಯೋಜನೆಯ ಸಹಭಾಗಿತ್ವ ಹೊಂದಬಹುದು. ಬಿಎಸ್​ಎನ್​ಎಲ್ ತನ್ನ 4ಜಿ ನೆಟ್​ವರ್ಕ್​ಗಾಗಿ ಇಂಡಿಯನ್ ಟೆಕ್ನಾಲಜಿ ಜೊತೆಗೆ ಕೆಲವು ಕಾಲದಿಂದ ಕೆಲಸ ಮಾಡುತ್ತಿದೆ.

ಐಟಿ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ ಭಾರತೀಯ 4ಜಿ ನೆಟ್​ವರ್ಕ್ ಮೂಲಕ ಮೊದಲ ಕರೆ ಮಾಡಿದರು. ಕೇಂದ್ರ ಸರ್ಕಾರ 4ಜಿ ಸೇವೆಗಳಿಗಾಗಿ 24,084 ಕೋಟಿ ರೂಪಾಯಿಗಳನ್ನು 2021-22 ರ ಬಜೆಟ್​ನಲ್ಲಿ ಮೀಸಲಿರಿಸಿದೆ. ಇದು ಒಟ್ಟಾರೆ 69,000 ಕೋಟಿ ರೂಪಾಯಿಯ ಬಿಎಸ್​ಎನ್​ಎಲ್ ಹಾಗೂ ಎಮ್​ಟಿಎನ್​ಎಲ್ ಪ್ಯಾಕೇಜ್​ನ ಭಾಗವಾಗಿದೆ.

ಬಿಎಸ್​ಎನ್​ಎಲ್​ ಈ ಹಣಕಾಸು ವರ್ಷದಲ್ಲಿ 4ಜಿ ನೆಟ್​ವರ್ಕ್ ಕಾರ್ಯಾರಂಭಿಸಿದ್ದರೆ, ಅದರ ಆರ್​-ಡಿ ಆರ್ಗನೈಸೇಷನ್ ಸಿ-ಡಾಟ್​ಗೆ 6ಜಿ ನೆಟ್​ವರ್ಕ್ ಟೆಕ್ನಾಲಜಿ ಮೇಲೆ ಕೆಲಸ ಮಾಡಲು ಟೆಲಿಕಾಂ ಡಿಪಾರ್ಟ್​ಮೆಂಟ್ ಸೂಚಿಸಿದೆ. ಆ ಮೂಲಕ ಭವಿಷ್ಯದ ತಂತ್ರಜ್ಞಾನಗಳ ಮೇಲೆ ಕೆಲಸ ಮಾಡಲು ಹಾಗೂ ಜಾಗತಿಕ ಮಾರುಕಟ್ಟೆಯೊಂದಿಗೆ ಬೆಳೆಯಲು ಹೇಳಲಾಗಿದೆ. ಸ್ಯಾಮ್​ಸಂಗ್, ಹುವಾಯಿ, ಎಲ್​ಜಿ ಮತ್ತು ಇತರ ಕೆಲವು ಕಂಪೆನಿಗಳು 6ಜಿ ಟೆಕ್ನಾಲಜಿಗಾಗಿ ಕೆಲಸ ಮಾಡುತ್ತಿವೆ ಎಂದು ಹೇಳಲಾಗಿದೆ. 6ಜಿ ತಂತ್ರಜ್ಞಾನವು 5ಜಿ ಗಿಂತ 50 ಪಟ್ಟು ವೇಗವಾಗಿ ಇರಲಿದೆ ಎನ್ನಲಾಗಿದೆ. ಈ ತಂತ್ರಜ್ಞಾನ 2028- 2030 ರ ವೇಳೆಗೆ ವಾಣಿಜ್ಯ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್

ಇದನ್ನೂ ಓದಿ: BSNL 3G ನೇ ಸರಿಯಾಗಿ ಕೆಲಸ ಮಾಡುತ್ತಿಲ್ಲ, ಇನ್ನು 4G ಎಲ್ಲಿಂದ ಬರಬೇಕು: ಜಿಎಂ ಸಿದ್ದೇಶ್ವರ್​ ವಾಗ್ದಾಳಿ

Published On - 10:04 pm, Sun, 10 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್