AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL 4G ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್; ಆತ್ಮನಿರ್ಭರ ಭಾರತ ನನಸಾಗುತ್ತಿದೆ ಎಂದ ಸಚಿವ

BSNL Network: ಬಿಎಸ್​ಎನ್​ಎಲ್ 4ಜಿ ಭಾರತದ ಹಲವು ಪ್ರದೇಶಗಳಲ್ಲಿ ಚಾಲ್ತಿಯಲ್ಲಿ ಇದೆ. ಹಾಗೂ ಡಿಸೆಂಬರ್ 31 ರ ವರೆಗೆ ಗ್ರಾಹಕರಿಗೆ ಉಚಿತ 4ಜಿ ಸಿಮ್​ನ್ನು ಬಿಎಸ್​ಎನ್​ಎಲ್ ನೀಡುತ್ತಿದೆ.

BSNL 4G ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್; ಆತ್ಮನಿರ್ಭರ ಭಾರತ ನನಸಾಗುತ್ತಿದೆ ಎಂದ ಸಚಿವ
ಅಶ್ವಿನಿ ವೈಷ್ಣವ್
Follow us
TV9 Web
| Updated By: ganapathi bhat

Updated on:Oct 10, 2021 | 10:08 PM

ದೆಹಲಿ: ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ 4ಜಿ ನೆಟ್​ವರ್ಕ್​ನ (BSNL 4G Network) ಮೊದಲ ಫೋನ್ ಕಾಲ್ ಮಾಡಿದರು. ಈ ಬಗ್ಗೆ, ಅವರು ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ ಎಂದು ಬರೆದುಕೊಂಡಿದ್ದಾರೆ. ಬಿಎಸ್​ಎನ್​ಎಲ್ 4ಜಿ ಭಾರತದ ಹಲವು ಪ್ರದೇಶಗಳಲ್ಲಿ ಚಾಲ್ತಿಯಲ್ಲಿ ಇದೆ. ಹಾಗೂ ಡಿಸೆಂಬರ್ 31 ರ ವರೆಗೆ ಗ್ರಾಹಕರಿಗೆ ಉಚಿತ 4ಜಿ ಸಿಮ್​ನ್ನು ಬಿಎಸ್​ಎನ್​ಎಲ್ ನೀಡುತ್ತಿದೆ.

ಇದು ಭಾರತದ್ದೇ ಆದ ಮೊದಲ 4ಜಿ ನೆಟ್​ವರ್ಕ್ ಆಗಿದೆ. ಇದರ ಅಭಿವೃದ್ಧಿ ಅಥವಾ ರೋಲ್​ಔಟ್ ಸರಳ, ಸುಲಭ ಆಗಿರಲಿಲ್ಲ. ವರದಿಗಳು ಹೇಳುವಂತೆ ಬಿಎಸ್​ಎನ್​ಎಲ್ ರೋಲ್​ಔಟ್​ನ ಮುಂದಿನ ಹಂತಗಳಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕೂಡ ಯೋಜನೆಯ ಸಹಭಾಗಿತ್ವ ಹೊಂದಬಹುದು. ಬಿಎಸ್​ಎನ್​ಎಲ್ ತನ್ನ 4ಜಿ ನೆಟ್​ವರ್ಕ್​ಗಾಗಿ ಇಂಡಿಯನ್ ಟೆಕ್ನಾಲಜಿ ಜೊತೆಗೆ ಕೆಲವು ಕಾಲದಿಂದ ಕೆಲಸ ಮಾಡುತ್ತಿದೆ.

ಐಟಿ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ ಭಾರತೀಯ 4ಜಿ ನೆಟ್​ವರ್ಕ್ ಮೂಲಕ ಮೊದಲ ಕರೆ ಮಾಡಿದರು. ಕೇಂದ್ರ ಸರ್ಕಾರ 4ಜಿ ಸೇವೆಗಳಿಗಾಗಿ 24,084 ಕೋಟಿ ರೂಪಾಯಿಗಳನ್ನು 2021-22 ರ ಬಜೆಟ್​ನಲ್ಲಿ ಮೀಸಲಿರಿಸಿದೆ. ಇದು ಒಟ್ಟಾರೆ 69,000 ಕೋಟಿ ರೂಪಾಯಿಯ ಬಿಎಸ್​ಎನ್​ಎಲ್ ಹಾಗೂ ಎಮ್​ಟಿಎನ್​ಎಲ್ ಪ್ಯಾಕೇಜ್​ನ ಭಾಗವಾಗಿದೆ.

ಬಿಎಸ್​ಎನ್​ಎಲ್​ ಈ ಹಣಕಾಸು ವರ್ಷದಲ್ಲಿ 4ಜಿ ನೆಟ್​ವರ್ಕ್ ಕಾರ್ಯಾರಂಭಿಸಿದ್ದರೆ, ಅದರ ಆರ್​-ಡಿ ಆರ್ಗನೈಸೇಷನ್ ಸಿ-ಡಾಟ್​ಗೆ 6ಜಿ ನೆಟ್​ವರ್ಕ್ ಟೆಕ್ನಾಲಜಿ ಮೇಲೆ ಕೆಲಸ ಮಾಡಲು ಟೆಲಿಕಾಂ ಡಿಪಾರ್ಟ್​ಮೆಂಟ್ ಸೂಚಿಸಿದೆ. ಆ ಮೂಲಕ ಭವಿಷ್ಯದ ತಂತ್ರಜ್ಞಾನಗಳ ಮೇಲೆ ಕೆಲಸ ಮಾಡಲು ಹಾಗೂ ಜಾಗತಿಕ ಮಾರುಕಟ್ಟೆಯೊಂದಿಗೆ ಬೆಳೆಯಲು ಹೇಳಲಾಗಿದೆ. ಸ್ಯಾಮ್​ಸಂಗ್, ಹುವಾಯಿ, ಎಲ್​ಜಿ ಮತ್ತು ಇತರ ಕೆಲವು ಕಂಪೆನಿಗಳು 6ಜಿ ಟೆಕ್ನಾಲಜಿಗಾಗಿ ಕೆಲಸ ಮಾಡುತ್ತಿವೆ ಎಂದು ಹೇಳಲಾಗಿದೆ. 6ಜಿ ತಂತ್ರಜ್ಞಾನವು 5ಜಿ ಗಿಂತ 50 ಪಟ್ಟು ವೇಗವಾಗಿ ಇರಲಿದೆ ಎನ್ನಲಾಗಿದೆ. ಈ ತಂತ್ರಜ್ಞಾನ 2028- 2030 ರ ವೇಳೆಗೆ ವಾಣಿಜ್ಯ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್

ಇದನ್ನೂ ಓದಿ: BSNL 3G ನೇ ಸರಿಯಾಗಿ ಕೆಲಸ ಮಾಡುತ್ತಿಲ್ಲ, ಇನ್ನು 4G ಎಲ್ಲಿಂದ ಬರಬೇಕು: ಜಿಎಂ ಸಿದ್ದೇಶ್ವರ್​ ವಾಗ್ದಾಳಿ

Published On - 10:04 pm, Sun, 10 October 21

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ