AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL ಭರ್ಜರಿ ಆಫರ್: ಒಂದು ವರ್ಷದವರೆಗೆ ಅನಿಯಮಿತ ಕರೆ ಸೌಲಭ್ಯ, 600 GB ಉಚಿತ ಡೇಟಾ

BSNL 1999 Recharge Plan: ಹೊಸ ಪ್ರೀಪೇಯ್ಡ್ ಪ್ಲಾನ್ ಅನ್ನು ಕೂಡ ಬಿಡುಗಡೆ ಮಾಡಿದೆ. ಈ ಪ್ಲ್ಯಾನ್​ನ ವಾಲಿಡಿಟಿ 60 ದಿನಗಳು. ಈ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾ ಸಿಗಲಿದ್ದು, ದೈನಂದಿನ ಬಳಕೆಯ ಮಿತಿ ಇರುವುದಿಲ್ಲ.

BSNL ಭರ್ಜರಿ ಆಫರ್: ಒಂದು ವರ್ಷದವರೆಗೆ ಅನಿಯಮಿತ ಕರೆ ಸೌಲಭ್ಯ, 600 GB ಉಚಿತ ಡೇಟಾ
BSNL 485 ರೂ. ಪ್ಲ್ಯಾನ್: ಬಿಎಸ್​ಎನ್​ಎಲ್ ಪರಿಚಯಿಸಿರುವ 485 ರೂ.ಗಳ ಈ ಪ್ಲ್ಯಾನ್​ನ ವಾಲಿಡಿಟಿ 90 ದಿನಗಳು. ಈ ರಿಚಾರ್ಜ್​ ಪ್ಲ್ಯಾನ್​ ಮೂಲಕ ಗ್ರಾಹಕರಿಗೆ ಅನಿಯಮಿತ ಕರೆ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 1.5GB ಉಚಿತ ಡೇಟಾ ಹಾಗೂ 100 SMS ಸಿಗಲಿದೆ.
TV9 Web
| Updated By: Zahir Yusuf|

Updated on: Aug 08, 2021 | 10:33 PM

Share

ಭಾರತೀಯ ಸರ್ಕಾರಿ ಸೌಮ್ಯದ ಟೆಲಿಕಾಂ ಕಂಪನಿ BSNL ಗ್ರಾಹಕರನ್ನು ಸೆಳೆಯಲು ಅತ್ಯುತ್ತಮ ಮತ್ತು ಅಗ್ಗದ ರಿಚಾರ್ಜ್​ ಯೋಜನೆಗಳನ್ನು ಪರಿಚಯಿಸುತ್ತಿದೆ. ಇದೀಗ ಬಿಎಸ್‌ಎನ್‌ಎಲ್ ಒಂದು ವರ್ಷದ ವಾಲಿಡಿಟಿ ಹೊಂದಿರುವ ಭರ್ಜರಿ ಪ್ಲ್ಯಾನ್​ವೊಂದನ್ನು ಗ್ರಾಹಕರ ಮುಂದಿಟ್ಟಿದೆ. ಈ ಪ್ಲ್ಯಾನ್​ನಲ್ಲಿ ಅನಿಯಮಿತ ಡೇಟಾ ಕೂಡ ನೀಡುತ್ತಿರುವುದು ವಿಶೇಷ. ಹಾಗಿದ್ರೆ ಬಿಎಸ್​ಎನ್​ಎಲ್​ನ ದೀರ್ಘಾವಧಿಯ ಈ ರಿಚಾರ್ಜ್​ ಪ್ಲ್ಯಾನ್​ನ ವಿಶೇಷತೆಗಳೇನು ಎಂದು ತಿಳಿಯೋಣ.

BSNL ಪರಿಚಯಿಸಿರುವ ಹೊಸ ಪ್ಲ್ಯಾನ್​ನ ಮೊತ್ತ 1,999 ರೂ. ಒಂದು ವರ್ಷದ ವಾಲಿಡಿಟಿ ಹೊಂದಿರುವ ಈ ಪ್ಲ್ಯಾನ್​ನಲ್ಲಿ ಅನಿಯಮಿತ ಕರೆ ಸೌಲಭ್ಯ ನೀಡಲಾಗುತ್ತದೆ. ಜೊತೆಗೆ 600 GB ಡೇಟಾವನ್ನು ನೀಡಲಾಗುತ್ತದೆ. ಅಂದರೆ ಬಳಕೆದಾರರು ವರ್ಷಪೂರ್ತಿ ಈ ಡೇಟಾವನ್ನು ಬಳಸಬಹುದು. ಈ ಡೇಟಾದಲ್ಲಿ ಯಾವುದೇ ದೈನಂದಿನ ಬಳಕೆಯ ಮಿತಿಯನ್ನು ವಿಧಿಸಲಾಗಿಲ್ಲ. ಹೀಗಾಗಿ ಬಳಕೆದಾರರು 600 GB ಯನ್ನು ತಮಗಿಷ್ಟವಿದ್ದಾಗ ಬಳಸಬಹುದು. ಇದರೊಂದಿಗೆ, ಈ ಯೋಜನೆಯಲ್ಲಿ ಬಳಕೆದಾರರಿಗೆ ದಿನಕ್ಕೆ 100 SMS ಗಳನ್ನು ಸಹ ಉಚಿತವಾಗಿ ನೀಡಲಾಗುತ್ತಿದೆ.

ಇದಲ್ಲದೆ BSNL ರೂ. 447 ರ ಹೊಸ ಪ್ರೀಪೇಯ್ಡ್ ಪ್ಲಾನ್ ಅನ್ನು ಕೂಡ ಬಿಡುಗಡೆ ಮಾಡಿದೆ. ಈ ಪ್ಲ್ಯಾನ್​ನ ವಾಲಿಡಿಟಿ 60 ದಿನಗಳು. ಈ ಯೋಜನೆಯಲ್ಲಿ ಗ್ರಾಹಕರಿಗೆ 100 GB ಡೇಟಾ ಸಿಗಲಿದ್ದು, ದೈನಂದಿನ ಬಳಕೆಯ ಮಿತಿ ಇರುವುದಿಲ್ಲ. ಇನ್ನು ಡೇಟಾ ಮುಗಿದ ನಂತರ, ಈ ಯೋಜನೆಯಲ್ಲಿ 80Kbps ವೇಗದಲ್ಲಿ ಉಚಿತ ಡೇಟಾ ಸಿಗಲಿದೆ. ಇನ್ನು ಈ ಪ್ಲ್ಯಾನ್ ಮೂಲಕ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ಮಾಡಬಹುದು.

ಇದನ್ನೂ ಓದಿ: Airtel: ಏರ್​ಟೆಲ್ ಕಡೆಯಿಂದ ನಿಮಗೆ ಈ ಮೆಸೇಜ್ ಬಂದಿದ್ರೆ ನಿರ್ಲಕ್ಷಿಸಿ

ಇದನ್ನೂ ಓದಿ: Suresh Raina: ರೈನಾ ಜೊತೆ ಸಚಿನ್ ಹೆಂಡ್ತಿಯನ್ನು ವಿಚಾರಿಸಿದ ಏರ್​ ಹೋಸ್ಟೆಸ್: ಆಮೇನಾಯ್ತು?

ಇದನ್ನೂ ಓದಿ: Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..