BSNL: ಬರೋಬ್ಬರಿ 9 ಒಟಿಟಿ ಸೌಲಭ್ಯ: ಬಿಎಸ್​ಎನ್​ಎಲ್ ಹೊಸ ಪ್ಲಾನ್ ಕಂಡು ದಂಗಾದ ಜಿಯೋ, ಏರ್ಟೆಲ್

BSNL Broadband Plans: ಬಿಎಸ್​ಎನ್​ಎಲ್ ಅಧಿಕ ಚಂದಾದಾರರನ್ನು ಆಕರ್ಷಿಸಲು ನೂತನವಾಗಿ ಒಟಿಟಿ (OTT) ಪ್ರಯೋಜನ ಒಳಗೊಂಡ ಪ್ಲಾನ್​ಗಳನ್ನು ಬಿಡುಗಡೆ ಮಾಡಿ ಧೂಳೆಬ್ಬಿಸುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ.

BSNL: ಬರೋಬ್ಬರಿ 9 ಒಟಿಟಿ ಸೌಲಭ್ಯ: ಬಿಎಸ್​ಎನ್​ಎಲ್ ಹೊಸ ಪ್ಲಾನ್ ಕಂಡು ದಂಗಾದ ಜಿಯೋ, ಏರ್ಟೆಲ್
BSNL
Follow us
| Updated By: Vinay Bhat

Updated on:Jan 22, 2023 | 11:10 AM

ಕೆಲವು ವರ್ಷಗಳ ಹಿಂದೆ ಟೆಲಿಕಾಂ ಮಾರಯಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಸರ್ಕಾರಿ ಒಡೆತನದ ಭಾರತೀಯ ಸಂಚಾರ್‌ ನಿಗಮ ಲಿಮಿಟೆಡ್ ಬಿಎಸ್​ಎನ್​ಎಲ್ (BSNL)​ ಇದೀಗ ಪಾತಾಳಕ್ಕೆ ಕುಸಿದಿದ್ದು ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ (Telecom) ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಹೀಗಿದ್ದರೂ ಆಗಾಗ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡಿ ಸದ್ದು ಮಾಡುತ್ತದೆ. ಇದೀಗ ಬಿಎಸ್​ಎನ್​ಎಲ್ ಅಧಿಕ ಚಂದಾದಾರರನ್ನು ಆಕರ್ಷಿಸಲು ನೂತನವಾಗಿ ಒಟಿಟಿ (OTT) ಪ್ರಯೋಜನ ಒಳಗೊಂಡ ಪ್ಲಾನ್​ಗಳನ್ನು ಬಿಡುಗಡೆ ಮಾಡಿ ಧೂಳೆಬ್ಬಿಸುತ್ತಿದೆ. ಈ ನೂತನ ಯೋಜನೆಗಳು ಬಿಎಸ್‌ಎನ್‌ಎಲ್‌ ಬ್ರಾಡ್‌ಬ್ಯಾಂಡ್ ಪ್ಲಾನ್ ಆಗಿದ್ದು ಮನರಂಜನೆ ಆಯ್ಕೆಗಾಗಿ 9 ಜನಪ್ರಿಯ ಒಟಿಟಿ ಸೌಲಭ್ಯವನ್ನು ಲಭ್ಯ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬಿಎಸ್‌ಎನ್‌ಎಲ್​ನ ಹೊಸ 249 ರೂ. ಬ್ರಾಡ್‌ಬ್ಯಾಂಡ್ ಪ್ಲಾನ್ ಗ್ರಾಹಕರಿಗೆ ಒಟ್ಟು 9 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನೀಡುತ್ತದೆ. ಅವುಗಳು ಕ್ರಮವಾಗಿ ಜೀ5, ಸೋನಿಲೈವ್, ವೋಟ್‌ ಸೆಲೆಕ್ಟ್‌, ಯುಪ್‌ ಟಿವಿ, ಆಹಾ, Lionsgate Play, ಹಂಗಾಮಾ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ ಸೇರಿ ಮತ್ತೊಂದು ಒಟಿಟಿಯ ಚಂದಾದಾರಿಕೆ ನೀಡುತ್ತದೆ. ಎಂಟ್ರಿ ಲೆವೆಲ್‌ ಬ್ರಾಡ್‌ಬ್ಯಾಂಡ್ ಯೋಜನೆಯಲ್ಲಿ ಒಟಿಟಿ ಪ್ರಯೋಜನ ಬಯಸುವ ಬಳಕೆದಾರರಿಗೆ ಈ ನೂತನ ಪ್ಲಾನ್ ಸಹಕಾರಿ ಆಗಲಿದೆ.

ಇದರ ಜೊತೆಗೆ ಬಿಎಸ್ಎನ್ಎಲ್ 499 ರೂ. ಬ್ರಾಡ್‌ಬ್ಯಾಂಡ್‌ ಯೋಜನೆಯು 40 Mbps ಇಂಟರ್ನೆಟ್ ವೇಗವನ್ನು 3.3TB FUP ಡೇಟಾದೊಂದಿಗೆ ಅನಿಯಮಿತ ವಾಯಿಸ್‌ ಕರೆ ಸೌಲಭ್ಯ ಪಡೆದಿದೆ. ನಿಗದಿತ FUP ಡೇಟಾ ಬಳಕೆಯ ಮಿತಿ ಮುಗಿದ ಬಳಿಕ, ಡೇಟಾ ವೇಗವು 4 Mbps ಗೆ ಇಳಿಕೆಯಾಗುತ್ತದೆ. ಅಂತೆಯೆ 449ರೂ. ಫೈಬರ್ ಬೇಸಿಕ್ NEO ಪ್ಲ್ಯಾನ್ನಲ್ಲಿ ಬಳಕೆದಾರರಿಗೆ ತಿಂಗಳಿಗೆ 3.3 TB ವರೆಗೆ 30 Mbps ವೇಗವನ್ನು ಬ್ರೌಸ್ ಮಾಡಲು ಅನುವು ಮಾಡಿಕೊಡುತ್ತದೆ. FUP ಡೇಟಾ ಬಳಕೆಯ ಮಿತಿ ಮುಗಿದ ಬಳಿಕ, ಆಪರೇಟರ್ ಡೇಟಾ ವೇಗವನ್ನು 2 Mbps ಗೆ ನಿರ್ಬಂಧಿಸುತ್ತದೆ.

ಇದನ್ನೂ ಓದಿ
Image
Reliance Jio: ಅಮೆಜಾನ್, ನೆಟ್​ಫ್ಲಿಕ್ಸ್​ ಫ್ರೀ ಆಗಿ ನೋಡಬೇಕಾ?: ಜಿಯೋದಲ್ಲಿದೆ ಧಮಾಕ ಪ್ಲಾನ್
Image
Vivo Y55s 5G: ವಿವೋದಿಂದ ಆಕರ್ಷಕ ವಿವೋ Y55s 5G (2023) ಸ್ಮಾರ್ಟ್‌ಫೋನ್‌ ಬಿಡುಗಡೆ: ಏನು ಫೀಚರ್ಸ್?, ಬೆಲೆ ಎಷ್ಟು?
Image
Galaxy S23 Series: ಬಹುನಿರೀಕ್ಷಿತ ಗ್ಯಾಲಕ್ಸಿ S23 ಸರಣಿಯ ಬೆಲೆ ಸೋರಿಕೆ: ಭಾರತದಲ್ಲಿ ಈ ಫೋನ್​ಗೆ ಎಷ್ಟು ರೂ. ನೋಡಿ?
Image
Best Smartphones: 10,000 ರೂ. ಒಳ​ಗಿನ ಹೊಚ್ಚ ಹೊಸ ಬೊಂಬಾಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ

Reliance JIO: 56GB ಡೇಟಾ, ಅನಿಯಮಿತ ಕರೆ: ಜಿಯೋ ಕಂಪನಿಯ ಧಮಾಕ ಆಫರ್

ಬಿಎಸ್​ಎನ್​ಎಲ್​ ಕಳೆದ ವರ್ಷಾಂತ್ಯದಲ್ಲಿ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿತ್ತು. ಇದು ಸಾಕಷ್ಟು ಪ್ರಸಿದ್ದಿ ಪಡೆದಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ.

269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Sun, 22 January 23

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ