AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Type C Charger: ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಕೆಗೆ ಸರ್ಕಾರ ಶಿಫಾರಸು

ಗ್ರಾಹಕರು ವಿಭಿನ್ನ ಚಾರ್ಜರ್​ಗಳನ್ನು ಹೊಂದಬೇಕಾಗಿರುವುದು ಹೆಚ್ಚು ಖರ್ಚಿಗೂ ಕಾರಣವಾಗುತ್ತಿದೆ. ಇ-ತ್ಯಾಜ್ಯದ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಗ್ರಾಹಕರಿಗೆ ಅನನುಕೂಲವಾಗುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಶ್ವದಾದ್ಯಂತ ಎಲ್ಲ ದೇಶಗಳು ಮುಂದಾಗಿವೆ ಎಂದು ಬಿಐಎಸ್ ತಿಳಿಸಿದೆ.

Type C Charger: ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಕೆಗೆ ಸರ್ಕಾರ ಶಿಫಾರಸು
ಸಿ ಟೈಪ್ ಚಾರ್ಜರ್
TV9 Web
| Updated By: Ganapathi Sharma|

Updated on: Jan 10, 2023 | 11:42 AM

Share

ನವದೆಹಲಿ: ಮೊಬೈಲ್​ ಫೋನ್, ಲ್ಯಾಪ್​ಟಾಪ್​ಗಳು, ನೋಟ್​ಬುಕ್ಸ್​ ಹಾಗೂ ಇತರ ಎಲ್ಲ ಮಾದರಿಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ (Type C Charger) ಅನ್ನೇ ಬಳಸುವಂತೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್​​ಫೋನ್​ಗಳು ಸೇರಿದಂತೆ ಇತರ ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಸಾಮಾನ್ಯ ಚಾರ್ಜಿಂಗ್ ಪರಿಹಾರ ನೀಡುತ್ತದೆ. ಒಂದೇ ರೀತಿಯ ಚಾರ್ಜರ್ ಅನ್ನು ಎಲ್ಲ ಸಾಧನಗಳಿಗೆ ಬಳಸುವುದರಿಂದ ಗ್ರಾಹಕರಿಗೂ ಅನುಕೂಲವಾಗುತ್ತದೆ. ವಿಭಿನ್ನ ಚಾರ್ಜರ್​​ಗಳ ಖರೀದಿಯೂ ತಪ್ಪುತ್ತದೆ ಎಂದು ‘ಬ್ಯುರೋ ಆಫ್​ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)’ ತಿಳಿಸಿದೆ.

ಗ್ರಾಹಕರು ವಿಭಿನ್ನ ಚಾರ್ಜರ್​ಗಳನ್ನು ಹೊಂದಬೇಕಾಗಿರುವುದು ಹೆಚ್ಚು ಖರ್ಚಿಗೂ ಕಾರಣವಾಗುತ್ತಿದೆ. ಇ-ತ್ಯಾಜ್ಯದ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಗ್ರಾಹಕರಿಗೆ ಅನನುಕೂಲವಾಗುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಶ್ವದಾದ್ಯಂತ ಎಲ್ಲ ದೇಶಗಳು ಮುಂದಾಗಿವೆ ಎಂದು ಬಿಐಎಸ್ ತಿಳಿಸಿದೆ.

ಇದನ್ನು ಓದಿ: WhatsApp new feature: ಶೀಘ್ರದಲ್ಲಿ ವಾಟ್ಸಾಪ್​​ನಿಂದ ಹೊಸ ವೈಶಿಷ್ಟ್ಯ: ದ್ವೇಷದ ಮಾತು, ನಿಂದನೆ ಸಂದೇಶದ ಬಗ್ಗೆ ವರದಿ ಮಾಡಬಹುದು

ಸ್ಮಾರ್ಟ್​ಫೋನ್, ಟ್ಯಾಬ್ಲೆಟ್​, ಲ್ಯಾಪ್​ಟಾಪ್​​ಗಳಿಗೆ ಟೈಪ್ ಸಿ ಚಾರ್ಜರ್​ ಅನ್ನು ಮಾನದಂಡವನ್ನಾಗಿ ಪರಿಗಣಿಸಲು ಉದ್ಯಮಿಗಳು ಸಮ್ಮತಿಸಿರುವುದಾಗಿ 2022ರ ಡಿಸೆಂಬರ್​​ನಲ್ಲಿ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಯುರೋಪ್ ಒಕ್ಕೂಟ ಆದೇಶ ನೀಡಿರುವ ಬಗ್ಗೆಯೂ ಅವರು ಉಲ್ಲೇಖಿಸಿದ್ದರು.

ಈ ಮಧ್ಯೆ, ವಾಚ್​ಗಳಂಥ ಧರಿಸುವ ಎಲೆಕ್ಟ್ರಾನಿಕ್ ಸಾಧನಗಳಿಗೆ ಏಕ ಮಾದರಿಯ ಚಾರ್ಜರ್ ಅಭಿವೃದ್ಧಿಪಡಿಸುವ ಬಗ್ಗೆ ಕಾನ್ಪುರ ಐಐಟಿ ಅಧ್ಯಯನ ನಡೆಸುತ್ತಿದೆ. ಅಧ್ಯಯನ ಪೂರ್ಣಗೊಂಡ ಬೆನ್ನಲ್ಲೇ ಕೈಗಾರಿಕೋದ್ಯಮಿಗಳ ಜತೆ ಚರ್ಚಿಸಲಿದೆ. ಇ-ತ್ಯಾಜ್ಯ ತಡೆಗಾಗಿ ಏಕ ಮಾದರಿಯ ಚಾರ್ಜರ್ ಬಳಕೆ ಬಗ್ಗೆ ಕೇಂದ್ರ ಪರಿಸರ ಸಚಿವಾಲಯವೂ ಅಧ್ಯಯನ ನಡೆಸಲಿದೆ ಎನ್ನಲಾಗಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ