AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Type C Charger: ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಕೆಗೆ ಸರ್ಕಾರ ಶಿಫಾರಸು

ಗ್ರಾಹಕರು ವಿಭಿನ್ನ ಚಾರ್ಜರ್​ಗಳನ್ನು ಹೊಂದಬೇಕಾಗಿರುವುದು ಹೆಚ್ಚು ಖರ್ಚಿಗೂ ಕಾರಣವಾಗುತ್ತಿದೆ. ಇ-ತ್ಯಾಜ್ಯದ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಗ್ರಾಹಕರಿಗೆ ಅನನುಕೂಲವಾಗುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಶ್ವದಾದ್ಯಂತ ಎಲ್ಲ ದೇಶಗಳು ಮುಂದಾಗಿವೆ ಎಂದು ಬಿಐಎಸ್ ತಿಳಿಸಿದೆ.

Type C Charger: ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಕೆಗೆ ಸರ್ಕಾರ ಶಿಫಾರಸು
ಸಿ ಟೈಪ್ ಚಾರ್ಜರ್
TV9 Web
| Edited By: |

Updated on: Jan 10, 2023 | 11:42 AM

Share

ನವದೆಹಲಿ: ಮೊಬೈಲ್​ ಫೋನ್, ಲ್ಯಾಪ್​ಟಾಪ್​ಗಳು, ನೋಟ್​ಬುಕ್ಸ್​ ಹಾಗೂ ಇತರ ಎಲ್ಲ ಮಾದರಿಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ (Type C Charger) ಅನ್ನೇ ಬಳಸುವಂತೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್​​ಫೋನ್​ಗಳು ಸೇರಿದಂತೆ ಇತರ ಎಲ್ಲ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಸಾಮಾನ್ಯ ಚಾರ್ಜಿಂಗ್ ಪರಿಹಾರ ನೀಡುತ್ತದೆ. ಒಂದೇ ರೀತಿಯ ಚಾರ್ಜರ್ ಅನ್ನು ಎಲ್ಲ ಸಾಧನಗಳಿಗೆ ಬಳಸುವುದರಿಂದ ಗ್ರಾಹಕರಿಗೂ ಅನುಕೂಲವಾಗುತ್ತದೆ. ವಿಭಿನ್ನ ಚಾರ್ಜರ್​​ಗಳ ಖರೀದಿಯೂ ತಪ್ಪುತ್ತದೆ ಎಂದು ‘ಬ್ಯುರೋ ಆಫ್​ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)’ ತಿಳಿಸಿದೆ.

ಗ್ರಾಹಕರು ವಿಭಿನ್ನ ಚಾರ್ಜರ್​ಗಳನ್ನು ಹೊಂದಬೇಕಾಗಿರುವುದು ಹೆಚ್ಚು ಖರ್ಚಿಗೂ ಕಾರಣವಾಗುತ್ತಿದೆ. ಇ-ತ್ಯಾಜ್ಯದ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಗ್ರಾಹಕರಿಗೆ ಅನನುಕೂಲವಾಗುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಶ್ವದಾದ್ಯಂತ ಎಲ್ಲ ದೇಶಗಳು ಮುಂದಾಗಿವೆ ಎಂದು ಬಿಐಎಸ್ ತಿಳಿಸಿದೆ.

ಇದನ್ನು ಓದಿ: WhatsApp new feature: ಶೀಘ್ರದಲ್ಲಿ ವಾಟ್ಸಾಪ್​​ನಿಂದ ಹೊಸ ವೈಶಿಷ್ಟ್ಯ: ದ್ವೇಷದ ಮಾತು, ನಿಂದನೆ ಸಂದೇಶದ ಬಗ್ಗೆ ವರದಿ ಮಾಡಬಹುದು

ಸ್ಮಾರ್ಟ್​ಫೋನ್, ಟ್ಯಾಬ್ಲೆಟ್​, ಲ್ಯಾಪ್​ಟಾಪ್​​ಗಳಿಗೆ ಟೈಪ್ ಸಿ ಚಾರ್ಜರ್​ ಅನ್ನು ಮಾನದಂಡವನ್ನಾಗಿ ಪರಿಗಣಿಸಲು ಉದ್ಯಮಿಗಳು ಸಮ್ಮತಿಸಿರುವುದಾಗಿ 2022ರ ಡಿಸೆಂಬರ್​​ನಲ್ಲಿ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಯುರೋಪ್ ಒಕ್ಕೂಟ ಆದೇಶ ನೀಡಿರುವ ಬಗ್ಗೆಯೂ ಅವರು ಉಲ್ಲೇಖಿಸಿದ್ದರು.

ಈ ಮಧ್ಯೆ, ವಾಚ್​ಗಳಂಥ ಧರಿಸುವ ಎಲೆಕ್ಟ್ರಾನಿಕ್ ಸಾಧನಗಳಿಗೆ ಏಕ ಮಾದರಿಯ ಚಾರ್ಜರ್ ಅಭಿವೃದ್ಧಿಪಡಿಸುವ ಬಗ್ಗೆ ಕಾನ್ಪುರ ಐಐಟಿ ಅಧ್ಯಯನ ನಡೆಸುತ್ತಿದೆ. ಅಧ್ಯಯನ ಪೂರ್ಣಗೊಂಡ ಬೆನ್ನಲ್ಲೇ ಕೈಗಾರಿಕೋದ್ಯಮಿಗಳ ಜತೆ ಚರ್ಚಿಸಲಿದೆ. ಇ-ತ್ಯಾಜ್ಯ ತಡೆಗಾಗಿ ಏಕ ಮಾದರಿಯ ಚಾರ್ಜರ್ ಬಳಕೆ ಬಗ್ಗೆ ಕೇಂದ್ರ ಪರಿಸರ ಸಚಿವಾಲಯವೂ ಅಧ್ಯಯನ ನಡೆಸಲಿದೆ ಎನ್ನಲಾಗಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ