ಸಾಮಾಜಿಕ ಮಾಧ್ಯಮ ಕುಂದುಕೊರತೆಗಳಿಗೆ ಸಿಗಲಿದೆ ಪರಿಹಾರ; ಶೀಘ್ರದಲ್ಲೇ ಸರ್ಕಾರದಿಂದ ಸಮಿತಿ ರಚನೆ

ಟ್ವಿಟರ್, ಫೇಸ್​ಬುಕ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಮೇಲ್ಮನವಿ ವಿಚಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ಗಳನ್ನು ರಚಿಸಲಿದೆ.

ಸಾಮಾಜಿಕ ಮಾಧ್ಯಮ ಕುಂದುಕೊರತೆಗಳಿಗೆ ಸಿಗಲಿದೆ ಪರಿಹಾರ; ಶೀಘ್ರದಲ್ಲೇ ಸರ್ಕಾರದಿಂದ ಸಮಿತಿ ರಚನೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Oct 28, 2022 | 2:52 PM

ನವದೆಹಲಿ: ಟ್ವಿಟರ್ (Twitter), ಫೇಸ್​ಬುಕ್ (Facebook) ಸೇರಿದಂತೆ ಸಾಮಾಜಿಕ ಮಾಧ್ಯಮ (Social Media) ವೇದಿಕೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಮೇಲ್ಮನವಿ ವಿಚಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ‘ಸಾಮಾಜಿಕ ಮಾಧ್ಯಮ ಕುಂದುಕೊರತೆ ಮೇಲ್ಮನವಿ ಸಮಿತಿ’ಗಳನ್ನು ರಚಿಸಲಿದೆ. ಬಳಕೆದಾರರು ತಮ್ಮ ಸಮಸ್ಯೆಗಳಿಗೆ ಸಾಮಾಜಿಕ ಮಾಧ್ಯಮಗಳ ಕುಂದುಕೊರತೆ ವೇದಿಕೆಗಳಲ್ಲಿ ಪರಿಹಾರ ಸಿಗದಿದ್ದಲ್ಲಿ ಅಥವಾ ಅವುಗಳ ಪರಿಹಾರದಿಂದ ಸಮಾಧಾನ ಹೊಂದಿರದಿದ್ದಲ್ಲಿ ಈ ಮೇಲ್ಮನವಿ ಸಮಿತಿ’ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟಾ (ಫೇಸ್​ಬುಕ್, ವಾಟ್ಸ್​ಆ್ಯಪ್ ಒಡೆತನ ಹೊಂದಿರುವ ಕಂಪನಿ) ಹಾಗೂ ಮೈಕ್ರೋಬ್ಲಾಗಿಂಗ್ ವೇದಿಕೆ ಟ್ವಿಟರ್​ ಸ್ವಯಂ ನಿಯಂತ್ರಿತ ಕುಂದುಕೊರತೆ ಪರಿಹಾರ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿರುವ ಸಂದರ್ಭದಲ್ಲೇ, ಮೂವರು ಸದಸ್ಯರನ್ನೊಳಗೊಂಡ ‘ಕುಂದುಕೊರತೆ ಮೇಲ್ಮನವಿ ಸಮಿತಿ’ಗಳನ್ನು ರಚಿಸಲು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಉದ್ದೇಶಿಸಿದೆ.

ಇದನ್ನೂ ಓದಿ: WhatsApp: ವಾಟ್ಸ್​ಆ್ಯಪ್​ನಲ್ಲಿ ಹೊಸ ಫೀಚರ್: ಫೋಟೋ, ವಿಡಿಯೋ ಫಾರ್ವರ್ಡ್ ಮಾಡೋವಾಗ ಸಿಗುತ್ತೆ ಈ ಆಯ್ಕೆ

ಇದನ್ನೂ ಓದಿ
Image
Petrol Price On October 28: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆಯೇ? ತಿಳಿಯಿರಿ
Image
Gold Price Today: ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರವೆಷ್ಟಿದೆ? ಇಲ್ಲಿದೆ ಮಾಹಿತಿ
Image
RBI Meet: ನಿಯಂತ್ರಣಕ್ಕೆ ಬರುತ್ತಿಲ್ಲ ಹಣದುಬ್ಬರ; ನವೆಂಬರ್​ 3ಕ್ಕೆ ಎಂಪಿಸಿ ವಿಶೇಷ ಸಭೆ ಕರೆದ ಆರ್​ಬಿಐ
Image
Banking Frauds: ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚನೆ; ಎಚ್ಚರ ವಹಿಸಿ

ಈ ವಿಚಾರವಾಗಿ ‘2021ರ ಮಾಹಿತಿ ತಂತ್ರಜ್ಞಾನ ಕಾಯ್ದೆ’ಗೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ. ಕರಡು ಪ್ರತಿಯನ್ನು ಈಗಾಗಲೇ ಅಂತಿಮಗೊಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವೆಲ್ಲ ದೂರುಗಳ ಮೇಲೆ ಕ್ರಮ?

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಚಾರಗಳು, ಪೇಟೆಂಟ್ ಉಲ್ಲಂಘನೆ, ತಪ್ಪು ಮಾಹಿತಿ, ದೇಶದ ಸಮಗ್ರತೆ ಹಾಗೂ ಭದ್ರತೆಗೆ ಧಕ್ಕೆ ತರುವಂಥ ಸಂದೇಶ ಪ್ರಕಟಿಸುವುದು ಇತ್ಯಾದಿಗಳಿಗೆ ಸಂಬಂಧಿಸಿದ ದೂರುಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ಪರಿಹರಿಸಬೇಕಿದೆ. ಇದರಿಂದ ದೊರೆತ ಪರಿಹಾರದ ಬಗ್ಗೆ ಬಳಕೆದಾರರಿಗೆ ಅಸಮಾಧಾನವಿದ್ದಲ್ಲಿ ಅಥವಾ ತೃಪ್ತಿ ಇಲ್ಲದಿದ್ದಲ್ಲಿ ‘ಕುಂದುಕೊರತೆ ಮೇಲ್ಮನವಿ ಸಮಿತಿ’ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

30 ದಿನಗಳ ಒಳಗೆ ಪರಿಹಾರ

ಬಳಕೆದಾರರು ಸಲ್ಲಿಸಿರುವ ಮೇಲ್ಮನವಿ ದೂರುಗಳನ್ನು, ಆ ದೂರು ಸ್ವೀಕರಿಸಿದ 30 ದಿನಗಳ ಒಳಗಾಗಿ ಮೇಲ್ಮನವಿ ಸಮಿತಿ ಇತ್ಯರ್ಥಪಡಿಸಬೇಕು. ಈ ಸಮಿತಿ ನೀಡುವ ತೀರ್ಪಿಗೆ ಸಾಮಾಜಿಕ ಮಾಧ್ಯಮ ಕಂಪನಿಗಳು, ಮಧ್ಯವರ್ತಿಗಳು ಹಾಗೂ ಬಳಕೆದಾರರು ಬದ್ಧರಾಗಿರಬೇಕು ಎಂಬುದನ್ನು ಕರಡು ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ಕುಂದುಕೊರತೆ ಅಧಿಕಾರಿಯ ತೀರ್ಮಾನದ ಮೇಲೆ ಅಸಮಾಧಾನವಿದ್ದರೆ ಅವರು ನೀಡಿದ ತೀರ್ಪು ಆದೇಶದ ಪ್ರತಿ ಕೈಸೇರಿದ ಬಳಿಕ 30 ದಿನಗಳ ಒಳಗಾಗಿ ಬಳಕೆದಾರರು ಮೇಲ್ಮನವಿ ಸಮಿತಿಗೆ ಮನವಿ ಸಲ್ಲಿಸಬಹುದು. ಒಂದು ಅಥವಾ ಅದಕ್ಕಿಂತ ಹೆಚ್ಚು ಮೇಲ್ಮನವಿ ಸಮಿತಿಗಳನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಕರಡು ತಿದ್ದುಪಡಿಯಲ್ಲಿ ಹೇಳಲಾಗಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ