AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೀಡ್ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಹೊಸ ಟ್ರಿಕ್ ಕಂಡುಹಿಡಿದ ಸವಾರರು: ಸಿಕ್ಕಿ ಬಿದ್ದರೆ…

Trick to avoid traffic challan: ಸ್ಪೀಡ್ ಕ್ಯಾಮೆರಾಗಳು ಇರುವುದು ಜನರು ರಸ್ತೆಯಲ್ಲಿ ನಿಗದಿತ ವೇಗದ ಮಿತಿಯಲ್ಲಿ ವಾಹನ ಚಲಾಯಿಸಲಿ, ಇದರಿಂದ ರಸ್ತೆ ಅಪಘಾತಗಳು ಕಡಿಮೆಯಾಗಲಿ ಎಂದು. ಆದರೆ ಜನರು ಇದನ್ನು ಅರಿಯದೆ, ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದಾರೆ, ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ಜನರು ಸ್ಪೀಡ್ ಕ್ಯಾಮೆರಾಗಳಿಂದ ಪಾರಾಗಲು ಮತ್ತು ಚಲನ್ ತಪ್ಪಿಸಲು ಹೊಸ ತಂತ್ರವನ್ನು ಕಂಡುಹಿಡಿದಿದ್ದಾರೆ.

ಸ್ಪೀಡ್ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಹೊಸ ಟ್ರಿಕ್ ಕಂಡುಹಿಡಿದ ಸವಾರರು: ಸಿಕ್ಕಿ ಬಿದ್ದರೆ...
ಸಾಂದರ್ಭಿಕ ಚಿತ್ರ
Vinay Bhat
|

Updated on: Oct 30, 2023 | 2:34 PM

Share

ಅತಿ ವೇಗದಿಂದ ವಾಹನ ಚಲಾವನೆ ಮಾಡಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಅನಾಹುತಗಳನ್ನು ತಡೆಯಲು ಸಂಚಾರ ಪೊಲೀಸರು ಅತಿ ವೇಗದ ಚಾಲನೆಯ ಮೇಲೆ ನಿಗಾವಹಿಸಲು ಅನೇಕ ನಿಯಮ ಕೈಗೊಂಡಿದ್ದಾರೆ. ಇದರಲ್ಲಿ ಸ್ಪೀಡ್ ಕ್ಯಾಮೆರಾ (Speed Camera) ಕೂಡ ಒಂದು. ಅತಿ ವೇಗವನ್ನು ತಡೆಯಲು ಪೊಲೀಸರು ರಸ್ತೆಗಳಲ್ಲಿ ಓವರ್ ಸ್ಪೀಡ್ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಆದರೆ, ಕೆಲವರು ಟ್ರಾಫಿಕ್ ಪೊಲೀಸರಿಂದ ತಪ್ಪಿಸಿ ಕೊಳ್ಳಲು ಕಳ್ಳ ದಾರಿಯನ್ನು ಕಂಡುಹಿಡಿಯುತ್ತಾರೆ. ಇದೀಗ ಸವಾರರು ಸ್ಪೀಡ್ ಕ್ಯಾಮೆರಾದಿಂದ ತಪ್ಪಿಸಲು ಹೊಸ ಟ್ರಿಕ್ ಪ್ರಯೋಗಿಸುತ್ತಿದ್ದಾರೆ.

ಸ್ಪೀಡ್ ಕ್ಯಾಮೆರಾಗಳು ಇರುವುದು ಜನರು ರಸ್ತೆಯಲ್ಲಿ ನಿಗದಿತ ವೇಗದ ಮಿತಿಯಲ್ಲಿ ವಾಹನ ಚಲಾಯಿಸಲಿ, ಇದರಿಂದ ರಸ್ತೆ ಅಪಘಾತಗಳು ಕಡಿಮೆಯಾಗಲಿ ಎಂದು. ಆದರೆ ಜನರು ಇದನ್ನು ಅರಿಯದೆ, ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದಾರೆ, ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ಜನರು ಸ್ಪೀಡ್ ಕ್ಯಾಮೆರಾಗಳಿಂದ ಪಾರಾಗಲು ಮತ್ತು ಚಲನ್ ತಪ್ಪಿಸಲು ಹೊಸ ತಂತ್ರವನ್ನು ಕಂಡುಹಿಡಿದಿದ್ದಾರೆ. ಇದು ಇತ್ತೀಚೆಗೆ ಬೆಳಕಿಗೆ ಬಂದಿದೆ.

ಬಹುನಿರೀಕ್ಷಿತ ಲಾವಾ ಬ್ಲೇಜಾ 2 5G ಬಿಡುಗಡೆ ದಿನಾಂಕ ಘೋಷಣೆ: ಏನಿದೆ ಫೀಚರ್ಸ್

ಇದನ್ನೂ ಓದಿ
Image
ಏನಿದು ಸಿಮ್ ಸ್ವಾಪ್?: ಒಂದು ಸಣ್ಣ ತಪ್ಪಿನಿಂದ ಬ್ಯಾಂಕ್ ಖಾತೆ ಖಾಲಿಯಾಗಬಹುದು
Image
2,599 ರೂ.: ವಾಟ್ಸ್​ಆ್ಯಪ್, ಯೂಟ್ಯೂಬ್ ಇರುವ ಜಿಯೋ ಪ್ರೈಮಾ 4G ಫೋನ್ ರಿಲೀಸ್
Image
ಜಿಮೇಲ್​ನಲ್ಲಿ ಸ್ಟೋರೇಜ್​ ಫುಲ್ ಆದರೆ ಏನು ಮಾಡಬೇಕು?: ಇಲ್ಲಿದೆ ಟ್ರಿಕ್
Image
ಫ್ಲಿಪ್​ಕಾರ್ಟ್ ದಸರಾ ಸೇಲ್: ಈ ​ಫೋನ್​ಗಳು ಇದಕ್ಕಿಂತ ಕಡಿಮೆ ಬೆಲೆಗೆ ಸಿಗಲ್ಲ

ಚಲನ್ ತಪ್ಪಿಸಲು ಈ ತಂತ್ರ

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಕಾರಿನ ನಂಬರ್ ಪ್ಲೇಟ್‌ಗಳಲ್ಲಿ ಪ್ರತಿಫಲಿತ ಟೇಪ್‌ ಅಂಟಿಸಿರುತ್ತಾರೆ. ಹೀಗಿದ್ದಾಗ ಈ ಟೇಪ್ ಅನ್ನು ಸ್ಕ್ಯಾನ್ ಮಾಡಲು ಸ್ಪೀಡ್ ಕ್ಯಾಮೆರಾಗೆ ಸಾಧ್ಯವಾಗುತ್ತಿಲ್ಲ. ಸ್ಪೀಡ್ ಕ್ಯಾಮೆರಾ ಫೋಟೋವನ್ನು ಕ್ಲಿಕ್ ಮಾಡಿದಾಗ ನಂಬರ್ ಪ್ಲೇಟ್ ಸರಿಯಾಗಿ ಸ್ಕ್ಯಾನ್ ಆಗುವುದಿಲ್ಲ. ರಿಫ್ಲೆಕ್ಟಿವ್ ಟೇಪ್ ಮಾರುಕಟ್ಟೆಯಲ್ಲಿ ಎಲ್ಲಿ ಬೇಕಾದರು ಸಿಗುತ್ತದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ 200-300 ರೂ. ಗಳಿಗೆ ಖರೀದಿಸಬಹುದು. ಇದೀಗ ಈ ದಂಧೆಯ ಬಗ್ಗೆ ಸಂಚಾರ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ರೀತಿ ಮಾಡುತ್ತಿದ್ದವರನ್ನು ಹಿಡಿದು ವಿಚಾರಣೆ ನಡೆಸಲಾಗುತ್ತಿದೆ.

ನಿಯಮದಲ್ಲಿ ಏನಿದೆ?:

ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1990 ರ 50 ಮತ್ತು 51 ರಲ್ಲಿ ನಂಬರ್ ಪ್ಲೇಟ್‌ಗಳಿಗೆ ಹಲವು ನಿಯಮಗಳನ್ನು ಮಾಡಲಾಗಿದೆ. ಈ ನಿಯಮಗಳ ಪ್ರಕಾರ, ಯಾವುದೇ ವ್ಯಕ್ತಿ ವಾಹನದ ನಂಬರ್ ಪ್ಲೇಟ್ ಅನ್ನು ಟ್ಯಾಂಪರ್ ಮಾಡುವಂತಿಲ್ಲ. ಆರ್‌ಟಿಒದಿಂದ ನಿಮಗೆ ನೀಡಿರುವ ನಂಬರ್ ಪ್ಲೇಟ್ ಅನ್ನೇ ಬಳಸಬೇಕು. ಯಾರಾದರೂ ಈ ನಿಯಮಗಳನ್ನು ಪಾಲಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಇದಲ್ಲದೆ, 5,000 ರೂ. ವರೆಗೆ ದಂಡವನ್ನು ವಿಧಿಸಬಹುದು.

ಇನ್ನು ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ಆದಷ್ಟು ಬೇಗ ಹೆಚ್​ಎಸ್​ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ ದಂಡ ವಿಧಿಸಲಾಗುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ